ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ವಿವಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ತರಗತಿಗಳಲ್ಲಿ ಪಾಠಗಳು ನಡೆಯದೆ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗುವಂತಾಗಿದೆ. ಸರ್ಕಾರ ಶೀಘ್ರವಾಗಿ ಸಮಸ್ಯೆಯನ್ನು ಇತ್ಯಾರ್ಥ ಪಡಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ಗ್ರೇಡ್-2 ತಹಶೀಲ್ದಾರ್ ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯಕಾರಣಿ ಸದಸ್ಯ ಎಸ್.ದರ್ಶನ್ ಕುಮಾರ್, ಕಾರ್ಯರ್ಶಿ ವಿ.ಆಕಾಶ್, ಎರಡು ವಾರಗಳಿಂದಲು ಅತಿಥಿ ಉಪನ್ಯಾಸಕರು ತಗತಿಗಳಿಂದ ಹೊರಗುಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗಿಂತಲು ಅತಿಥಿ ಉಪನ್ಯಾಸಕರ ಸಂಖ್ಯೆಯೇ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಉಪನ್ಯಾಸಕರ ಬೇಡಿಕೆಗಳ ಕುರಿತಂತೆ ಸರ್ಕಾರ ತುರ್ತು ಕ್ರಮ ಕೈಗೊಂಡು ತರಗತಿಗಳು ಸುಸೂತ್ರವಾಗಿ ನಡೆಯುವಂತೆ ಮಾಡಬೇಕಿದೆ.
ಸರ್ಕಾರಿ ಪದವಿ ಕಾಲೇಜುಗಳಿಗೆ ಸಾಮಾನ್ಯವಾಗಿ ಗ್ರಾಮೀಣ ಭಾಗದ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳೇ ಹೆಚ್ಚಾಗಿ ಬರುವುದು. ವಾಸ್ತವ ಸ್ಥಿತಿ ಈಗಿರುವಾಗ ವಿದ್ಯಾರ್ಥಿಗಳು ಪಾಠ ಕೇಳುವಂದರಿಂದ ವಂಚಿತರಾಗುವಂತೆ ಆಗಲಿದೆ ಎಂದರು.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರಾದ ಲಕ್ಷ್ಮೀಪತಿ, ಕುಶಾಲ್ ಸೇರಿದಂತೆ ಇತರರು ಇದ್ದರು.
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…