ಪದವಿ ಕಾಲೇಜುಗಳ ಅತಿಥಿ ಉಪನ್ಯಾಸಕರು ತಮ್ಮ ವಿವಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಆದರೆ ಸರ್ಕಾರ ಇದುವರೆಗೂ ಯಾವುದೇ ಕ್ರಮ ಕೈಗೊಂಡಿಲ್ಲ. ಹಾಗಾಗಿ ತರಗತಿಗಳಲ್ಲಿ ಪಾಠಗಳು ನಡೆಯದೆ ವಿದ್ಯಾರ್ಥಿಗಳು ತೊಂದರೆಗೆ ಒಳಗಾಗುವಂತಾಗಿದೆ. ಸರ್ಕಾರ ಶೀಘ್ರವಾಗಿ ಸಮಸ್ಯೆಯನ್ನು ಇತ್ಯಾರ್ಥ ಪಡಿಸಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಶುಕ್ರವಾರ ಗ್ರೇಡ್-2 ತಹಶೀಲ್ದಾರ್ ಪ್ರಕಾಶ್ ಅವರಿಗೆ ಮನವಿ ಸಲ್ಲಿಸಿದರು.
ಈ ಬಗ್ಗೆ ಮಾಹಿತಿ ನೀಡಿದ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ರಾಜ್ಯ ಕಾರ್ಯಕಾರಣಿ ಸದಸ್ಯ ಎಸ್.ದರ್ಶನ್ ಕುಮಾರ್, ಕಾರ್ಯರ್ಶಿ ವಿ.ಆಕಾಶ್, ಎರಡು ವಾರಗಳಿಂದಲು ಅತಿಥಿ ಉಪನ್ಯಾಸಕರು ತಗತಿಗಳಿಂದ ಹೊರಗುಳಿದು ಪ್ರತಿಭಟನೆ ನಡೆಸುತ್ತಿದ್ದಾರೆ. ಸರ್ಕಾರಿ ಪದವಿ ಕಾಲೇಜುಗಳಲ್ಲಿ ಖಾಯಂ ಉಪನ್ಯಾಸಕರಿಗಿಂತಲು ಅತಿಥಿ ಉಪನ್ಯಾಸಕರ ಸಂಖ್ಯೆಯೇ ಹೆಚ್ಚಾಗಿದೆ. ಇಂತಹ ಸಂದರ್ಭದಲ್ಲಿ ಉಪನ್ಯಾಸಕರ ಬೇಡಿಕೆಗಳ ಕುರಿತಂತೆ ಸರ್ಕಾರ ತುರ್ತು ಕ್ರಮ ಕೈಗೊಂಡು ತರಗತಿಗಳು ಸುಸೂತ್ರವಾಗಿ ನಡೆಯುವಂತೆ ಮಾಡಬೇಕಿದೆ.
ಸರ್ಕಾರಿ ಪದವಿ ಕಾಲೇಜುಗಳಿಗೆ ಸಾಮಾನ್ಯವಾಗಿ ಗ್ರಾಮೀಣ ಭಾಗದ ಹಾಗೂ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ವಿದ್ಯಾರ್ಥಿಗಳೇ ಹೆಚ್ಚಾಗಿ ಬರುವುದು. ವಾಸ್ತವ ಸ್ಥಿತಿ ಈಗಿರುವಾಗ ವಿದ್ಯಾರ್ಥಿಗಳು ಪಾಠ ಕೇಳುವಂದರಿಂದ ವಂಚಿತರಾಗುವಂತೆ ಆಗಲಿದೆ ಎಂದರು.
ಈ ಸಂದರ್ಭದಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಸದಸ್ಯರಾದ ಲಕ್ಷ್ಮೀಪತಿ, ಕುಶಾಲ್ ಸೇರಿದಂತೆ ಇತರರು ಇದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…