ಜಿಲ್ಲಾಡಳಿತ ಭವನದಲ್ಲಿಂದು ರೈತ ಕಾರ್ಮಿಕ,ದಲಿತ, ಅಸಂಘಟಿತ ಹಾಗೂ ಮಹಿಳಾ ಸಂಘಟನೆಗಳು ಜಿಲ್ಲೆಯ ರೈತರ,ಕಾರ್ಮಿಕರ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜಿಲ್ಲಾಧಿಕಾರಿಗಳಿಗೆ ಆಗ್ರಹ ಮಾಡಿದರು.
*ಸಂಘಟನೆಗಳ ಪ್ರಮುಖ ಬೇಡಿಕೆಗಳು*
– ಭ್ರಷ್ಟಾಚಾರ ರಹಿತ ಆಡಳಿತ
– ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು
– ಸಾರ್ವಜನಿಕರ ಭೇಟಿಗೆ ಸಮಯ ನಿಗದಿ ಪಡಿಸುವುದು
– ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ.ಟಿ.ವಿ ಅಳವಡಿಕೆ
– ಅಧಿಕಾರಿಗಳು ಸಾರ್ವಜನಿಕರನ್ನು ಗೌರವದಿಂದ ಕಾಣುವುದು
– ಪ.ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿಲೇವಾರಿ
– ಸಾಗುವಳಿ ಚೀಟಿ ವಿತರಣೆ
– ಸರ್ಕಾರಿ ಜಾಗಗಳ ಒತ್ತುವರಿ ತೆರವು
– ನಿವೇಶನ, ವಸತಿ ಹಂಚಿಕೆ
– ಬಗರ್ ಹುಕುಂ ಜಮೀನು ವಿವಾದ
– ಕಡತಗಳ ಶೀಘ್ರ ವಿಲೇವಾರಿ
– ಇ.ಎಸ್.ಐ ಆಸ್ಪತ್ರೆ ಉದ್ಘಾಟನೆ
– ಹೊಸಕೋಟೆಯಲ್ಲಿ ಉಪವಿಭಾಗ ಸ್ಥಾಪಿಸುವುದು
– ಪೌತಿ ಖಾತೆ, ಪೋಡಿ ಇತ್ಯರ್ಥ
ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸಂಘಟನೆಗಳ ಮುಖಂಡರಿಗೆ ಕರೆದಿದ್ದ ಸಭೆಯಲ್ಲಿ ಸಂಘಟನೆಗಳ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಈಗಾಗಲೇ ಪೌತಿ ಖಾತೆ ಆಂದೋಲನ ಶುರುವಾಗಿದ್ದು 6000 ಕುಟುಂಬಗಳು ಇದರ ವ್ಯಾಪ್ತಿಗೆ ಬರುತ್ತದೆ. ಪೋಡಿ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕೆಲಸ ಶುರು ಮಾಡಲಾಗಿದೆ. ಸೂಕ್ತ ದಾಖಲೆಗಳು ಇರುವ ಜಮೀನುಗಳನ್ನು ಮೊದಲು ಪೋಡಿ ಮಾಡಲಾಗುತ್ತಿದೆ ಎಂದರು.
ಆಶ್ರಯ ಯೋಜನೆಯಡಿ ಬಡವರಿಗೆ ನಿವೇಶನ ನೀಡುವ ಸಲುವಾಗಿ ಜಿಲ್ಲೆಯಲ್ಲಿ 200 ರಿಂದ 300 ಎಕರೆ ಸರ್ಕಾರಿ ಜಾಗ ಗುರ್ತಿಸಲಾಗಿದೆ. ಅಂದಾಜು 7000 ನಿವೇಶನಗಳನ್ನು ನಿರ್ಮಿಸಲು ರಾಜೀವ್ ಗಾಂಧಿ ಗೃಹ ನಿರ್ಮಾಣ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 4000 ನಿವೇಶನಗಳ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ನಿವೇಶನ ರಹಿತರ ಪಟ್ಟಿ ಸಿದ್ದಪಡಿಸಲಾಗಿದ್ದು ಅರ್ಹರಿಗೆ ಹಂತ ಹಂತವಾಗಿ ನಿವೇಶನ ಹಂಚಲು ಕ್ರಮ ವಹಿಸಲಾಗುವುದು ಎಂದರು.
ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕ ಆಡಳಿತಕ್ಕೆ ಮೊದಲ ಆದ್ಯತೆ ನೀಡಬೇಕು. ಅಧಿಕಾರಿಗಳು ಜನಸಾಮಾನ್ಯರನ್ನು ಗೌರವದಿಂದ ಕಾಣಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳ ಬರದೇ ಇರೋ ಹಾಗೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇನ್ನಿತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸಂಘಟನೆಗಳ ಮುಖಂಡರಿಗೆ ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ನಾಲ್ಕು ತಾಲ್ಲೂಕು ತಹಶೀಲ್ದಾರ್ ಗಳು, ವಿವಿಧ ಸಂಘಟನೆಗಳು ಮುಖಂಡರು ಉಪಸ್ಥಿತರಿದ್ದರು.
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…