ವಿವಿಧ ಬೇಡಿಕೆಗಳ ಈಡೇರಿಕೆಗೆ ವಿವಿಧ ಸಂಘಟನೆಗಳ ಒಕ್ಕೊರಲ ಒತ್ತಾಯ: ಜನಸ್ನೇಹಿ ಆಡಳಿತಕ್ಕೆ ಒತ್ತು: ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್

ಜಿಲ್ಲಾಡಳಿತ ಭವನದಲ್ಲಿಂದು ರೈತ ಕಾರ್ಮಿಕ,ದಲಿತ, ಅಸಂಘಟಿತ ಹಾಗೂ ಮಹಿಳಾ ಸಂಘಟನೆಗಳು ಜಿಲ್ಲೆಯ ರೈತರ,ಕಾರ್ಮಿಕರ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜಿಲ್ಲಾಧಿಕಾರಿಗಳಿಗೆ ಆಗ್ರಹ ಮಾಡಿದರು.

*ಸಂಘಟನೆಗಳ ಪ್ರಮುಖ ಬೇಡಿಕೆಗಳು*

– ಭ್ರಷ್ಟಾಚಾರ ರಹಿತ ಆಡಳಿತ
– ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು
– ಸಾರ್ವಜನಿಕರ ಭೇಟಿಗೆ ಸಮಯ ನಿಗದಿ ಪಡಿಸುವುದು
– ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ.ಟಿ.ವಿ ಅಳವಡಿಕೆ
– ಅಧಿಕಾರಿಗಳು ಸಾರ್ವಜನಿಕರನ್ನು ಗೌರವದಿಂದ ಕಾಣುವುದು
– ಪ.ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿಲೇವಾರಿ
– ಸಾಗುವಳಿ ಚೀಟಿ ವಿತರಣೆ
– ಸರ್ಕಾರಿ ಜಾಗಗಳ ಒತ್ತುವರಿ ತೆರವು
– ನಿವೇಶನ, ವಸತಿ ಹಂಚಿಕೆ
– ಬಗರ್ ಹುಕುಂ ಜಮೀನು ವಿವಾದ
– ಕಡತಗಳ ಶೀಘ್ರ ವಿಲೇವಾರಿ
– ಇ.ಎಸ್.ಐ ಆಸ್ಪತ್ರೆ ಉದ್ಘಾಟನೆ
– ಹೊಸಕೋಟೆಯಲ್ಲಿ ಉಪವಿಭಾಗ ಸ್ಥಾಪಿಸುವುದು
– ಪೌತಿ ಖಾತೆ, ಪೋಡಿ ಇತ್ಯರ್ಥ

ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸಂಘಟನೆಗಳ ಮುಖಂಡರಿಗೆ ಕರೆದಿದ್ದ ಸಭೆಯಲ್ಲಿ ಸಂಘಟನೆಗಳ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಈಗಾಗಲೇ ಪೌತಿ ಖಾತೆ ಆಂದೋಲನ ಶುರುವಾಗಿದ್ದು 6000 ಕುಟುಂಬಗಳು ಇದರ ವ್ಯಾಪ್ತಿಗೆ ಬರುತ್ತದೆ. ಪೋಡಿ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕೆಲಸ ಶುರು ಮಾಡಲಾಗಿದೆ. ಸೂಕ್ತ ದಾಖಲೆಗಳು ಇರುವ ಜಮೀನುಗಳನ್ನು ಮೊದಲು ಪೋಡಿ ಮಾಡಲಾಗುತ್ತಿದೆ ಎಂದರು.

ಆಶ್ರಯ ಯೋಜನೆಯಡಿ ಬಡವರಿಗೆ ನಿವೇಶನ ನೀಡುವ ಸಲುವಾಗಿ ಜಿಲ್ಲೆಯಲ್ಲಿ 200 ರಿಂದ 300 ಎಕರೆ ಸರ್ಕಾರಿ ಜಾಗ ಗುರ್ತಿಸಲಾಗಿದೆ. ಅಂದಾಜು 7000 ನಿವೇಶನಗಳನ್ನು ನಿರ್ಮಿಸಲು ರಾಜೀವ್ ಗಾಂಧಿ ಗೃಹ ನಿರ್ಮಾಣ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 4000 ನಿವೇಶನಗಳ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ನಿವೇಶನ ರಹಿತರ ಪಟ್ಟಿ ಸಿದ್ದಪಡಿಸಲಾಗಿದ್ದು ಅರ್ಹರಿಗೆ ಹಂತ ಹಂತವಾಗಿ ನಿವೇಶನ ಹಂಚಲು ಕ್ರಮ ವಹಿಸಲಾಗುವುದು ಎಂದರು.

ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕ ಆಡಳಿತಕ್ಕೆ ಮೊದಲ ಆದ್ಯತೆ ನೀಡಬೇಕು.‌ ಅಧಿಕಾರಿಗಳು ಜನಸಾಮಾನ್ಯರನ್ನು ಗೌರವದಿಂದ ಕಾಣಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳ ಬರದೇ ಇರೋ ಹಾಗೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇನ್ನಿತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸಂಘಟನೆಗಳ ಮುಖಂಡರಿಗೆ ಹೇಳಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ನಾಲ್ಕು ತಾಲ್ಲೂಕು ತಹಶೀಲ್ದಾರ್ ಗಳು, ವಿವಿಧ ಸಂಘಟನೆಗಳು ಮುಖಂಡರು ಉಪಸ್ಥಿತರಿದ್ದರು.

Ramesh Babu

Journalist

Recent Posts

ಯೋಜನಾ ಪ್ರಾಧಿಕಾರಕ್ಕೆ ಮುನಿರಾಜು ಆಯ್ಕೆ: ಯುವ ಕಾಂಗ್ರೆಸ್‌ನಿಂದ ಆತ್ಮೀಯ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…

2 hours ago

ವಿಯೆಟ್ನಾಂನಿಂದ 1.38 ಕೋಟಿ ಮೌಲ್ಯದ ಹೈಡ್ರೋಫೋನಿಕ್ ಗಾಂಜಾ ಸಾಗಾಟ: ಆರೋಪಿ ಬಂಧನ

ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…

3 hours ago

ಗೃಹಜ್ಯೋತಿಗೆ ಮನೆಮನೆ ಬಾಗಿಲು ತಟ್ಟಿದ ಬೆಸ್ಕಾಂ:

ದೊಡ್ಡಬಳ್ಳಾಪುರ: ರಾಜ್ಯ ಸರ್ಕಾರದ ಪ್ರಮುಖ ಯೋಜನೆಗಳಲ್ಲಿ ಒಂದಾದ ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ಮರುಪರಿಶೀಲನೆ ಕಾರ್ಯ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವೇಗ…

5 hours ago

ಜನರನ್ನು ತಾಲೂಕು ಕಚೇರಿಗೆ ಅಲೆದಾಟ ತಪ್ಪಿಸಿ ಸ್ಥಳದಲ್ಲೇ ಸಮಸ್ಯೆ ಪರಿಹರಿಸಿ- ಶಾಸಕ ಕೊತ್ತೂರು ಮಂಜುನಾಥ್

ಕೋಲಾರ: ಸಾರ್ವಜನಿಕರು ತಮ್ಮ ಸಮಸ್ಯೆಗಳ ಪರಿಹಾರಕ್ಕಾಗಿ ತಾಲೂಕು ಕಚೇರಿಗೆ ಅಲೆದಾಡುವುದನ್ನು ತಪ್ಪಿಸಿ, ಸ್ಥಳದಲ್ಲಿಯೇ ಸೇವೆ ಒದಗಿಸುವ ನಿಟ್ಟಿನಲ್ಲಿ ಪ್ರಜಾ ಸೇವಾ…

18 hours ago

ಭಾರತಕ್ಕೆ ಕ್ಸಿ ಜಿನ್‌ಪಿಂಗ್ ಭೇಟಿ: ಮೋದಿ–ಕ್ಸಿ ದ್ವಿಪಕ್ಷೀಯ ಮಾತುಕತೆ ಇಂದು

ನವದೆಹಲಿ: ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಅವರು ಎರಡು ದಿನಗಳ ಭಾರತ ಭೇಟಿಗಾಗಿ ಶನಿವಾರ ಮಧ್ಯಾಹ್ನ ರಾಷ್ಟ್ರ ರಾಜಧಾನಿ ನವದೆಹಲಿಗೆ…

22 hours ago

ಮಧುರೆ ದೇವಾಲಯದ ಬಳಿ ಮೇಲ್ಸೇತುವೆ ಅವ್ಯವಸ್ಥೆ: ಮೇಲಕ್ಕೆ ಚಾಚಿರುವ ಕಂಬಿಗಳಿಂದ ವಾಹನ ಸವಾರರಿಗೆ ತೊಂದರೆ

ದೊಡ್ಡಬಳ್ಳಾಪುರ: ನೆಲಮಂಗಲ–ದೊಡ್ಡಬಳ್ಳಾಪುರ ಮುಖ್ಯ ರಸ್ತೆಯ ಮಧುರೆ ದೇವಾಲಯದ ಸಮೀಪ ಹೊಸದಾಗಿ ನಿರ್ಮಿಸಿರುವ ಮೇಲ್ಸೇತುವೆ ವಾಹನ ಸವಾರರಿಗೆ ತೀವ್ರ ತೊಂದರೆ ಉಂಟುಮಾಡುತ್ತಿದೆ.…

1 day ago