ಜಿಲ್ಲಾಡಳಿತ ಭವನದಲ್ಲಿಂದು ರೈತ ಕಾರ್ಮಿಕ,ದಲಿತ, ಅಸಂಘಟಿತ ಹಾಗೂ ಮಹಿಳಾ ಸಂಘಟನೆಗಳು ಜಿಲ್ಲೆಯ ರೈತರ,ಕಾರ್ಮಿಕರ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜಿಲ್ಲಾಧಿಕಾರಿಗಳಿಗೆ ಆಗ್ರಹ ಮಾಡಿದರು.
*ಸಂಘಟನೆಗಳ ಪ್ರಮುಖ ಬೇಡಿಕೆಗಳು*
– ಭ್ರಷ್ಟಾಚಾರ ರಹಿತ ಆಡಳಿತ
– ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು
– ಸಾರ್ವಜನಿಕರ ಭೇಟಿಗೆ ಸಮಯ ನಿಗದಿ ಪಡಿಸುವುದು
– ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ.ಟಿ.ವಿ ಅಳವಡಿಕೆ
– ಅಧಿಕಾರಿಗಳು ಸಾರ್ವಜನಿಕರನ್ನು ಗೌರವದಿಂದ ಕಾಣುವುದು
– ಪ.ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿಲೇವಾರಿ
– ಸಾಗುವಳಿ ಚೀಟಿ ವಿತರಣೆ
– ಸರ್ಕಾರಿ ಜಾಗಗಳ ಒತ್ತುವರಿ ತೆರವು
– ನಿವೇಶನ, ವಸತಿ ಹಂಚಿಕೆ
– ಬಗರ್ ಹುಕುಂ ಜಮೀನು ವಿವಾದ
– ಕಡತಗಳ ಶೀಘ್ರ ವಿಲೇವಾರಿ
– ಇ.ಎಸ್.ಐ ಆಸ್ಪತ್ರೆ ಉದ್ಘಾಟನೆ
– ಹೊಸಕೋಟೆಯಲ್ಲಿ ಉಪವಿಭಾಗ ಸ್ಥಾಪಿಸುವುದು
– ಪೌತಿ ಖಾತೆ, ಪೋಡಿ ಇತ್ಯರ್ಥ
ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸಂಘಟನೆಗಳ ಮುಖಂಡರಿಗೆ ಕರೆದಿದ್ದ ಸಭೆಯಲ್ಲಿ ಸಂಘಟನೆಗಳ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಈಗಾಗಲೇ ಪೌತಿ ಖಾತೆ ಆಂದೋಲನ ಶುರುವಾಗಿದ್ದು 6000 ಕುಟುಂಬಗಳು ಇದರ ವ್ಯಾಪ್ತಿಗೆ ಬರುತ್ತದೆ. ಪೋಡಿ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕೆಲಸ ಶುರು ಮಾಡಲಾಗಿದೆ. ಸೂಕ್ತ ದಾಖಲೆಗಳು ಇರುವ ಜಮೀನುಗಳನ್ನು ಮೊದಲು ಪೋಡಿ ಮಾಡಲಾಗುತ್ತಿದೆ ಎಂದರು.
ಆಶ್ರಯ ಯೋಜನೆಯಡಿ ಬಡವರಿಗೆ ನಿವೇಶನ ನೀಡುವ ಸಲುವಾಗಿ ಜಿಲ್ಲೆಯಲ್ಲಿ 200 ರಿಂದ 300 ಎಕರೆ ಸರ್ಕಾರಿ ಜಾಗ ಗುರ್ತಿಸಲಾಗಿದೆ. ಅಂದಾಜು 7000 ನಿವೇಶನಗಳನ್ನು ನಿರ್ಮಿಸಲು ರಾಜೀವ್ ಗಾಂಧಿ ಗೃಹ ನಿರ್ಮಾಣ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 4000 ನಿವೇಶನಗಳ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ನಿವೇಶನ ರಹಿತರ ಪಟ್ಟಿ ಸಿದ್ದಪಡಿಸಲಾಗಿದ್ದು ಅರ್ಹರಿಗೆ ಹಂತ ಹಂತವಾಗಿ ನಿವೇಶನ ಹಂಚಲು ಕ್ರಮ ವಹಿಸಲಾಗುವುದು ಎಂದರು.
ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕ ಆಡಳಿತಕ್ಕೆ ಮೊದಲ ಆದ್ಯತೆ ನೀಡಬೇಕು. ಅಧಿಕಾರಿಗಳು ಜನಸಾಮಾನ್ಯರನ್ನು ಗೌರವದಿಂದ ಕಾಣಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳ ಬರದೇ ಇರೋ ಹಾಗೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇನ್ನಿತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸಂಘಟನೆಗಳ ಮುಖಂಡರಿಗೆ ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ನಾಲ್ಕು ತಾಲ್ಲೂಕು ತಹಶೀಲ್ದಾರ್ ಗಳು, ವಿವಿಧ ಸಂಘಟನೆಗಳು ಮುಖಂಡರು ಉಪಸ್ಥಿತರಿದ್ದರು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…