ಜಿಲ್ಲಾಡಳಿತ ಭವನದಲ್ಲಿಂದು ರೈತ ಕಾರ್ಮಿಕ,ದಲಿತ, ಅಸಂಘಟಿತ ಹಾಗೂ ಮಹಿಳಾ ಸಂಘಟನೆಗಳು ಜಿಲ್ಲೆಯ ರೈತರ,ಕಾರ್ಮಿಕರ ಸಾರ್ವಜನಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಹಾಗೂ ಭ್ರಷ್ಟಾಚಾರ ರಹಿತ ಆಡಳಿತಕ್ಕೆ ಜಿಲ್ಲಾಧಿಕಾರಿಗಳಿಗೆ ಆಗ್ರಹ ಮಾಡಿದರು.
*ಸಂಘಟನೆಗಳ ಪ್ರಮುಖ ಬೇಡಿಕೆಗಳು*
– ಭ್ರಷ್ಟಾಚಾರ ರಹಿತ ಆಡಳಿತ
– ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕರಿಗೆ ಮೂಲಭೂತ ಸೌಕರ್ಯ ಕಲ್ಪಿಸುವುದು
– ಸಾರ್ವಜನಿಕರ ಭೇಟಿಗೆ ಸಮಯ ನಿಗದಿ ಪಡಿಸುವುದು
– ಸರ್ಕಾರಿ ಕಚೇರಿಗಳಲ್ಲಿ ಸಿ.ಸಿ.ಟಿ.ವಿ ಅಳವಡಿಕೆ
– ಅಧಿಕಾರಿಗಳು ಸಾರ್ವಜನಿಕರನ್ನು ಗೌರವದಿಂದ ಕಾಣುವುದು
– ಪ.ಜಾತಿ, ಪಂಗಡಗಳ ಮೇಲಿನ ದೌರ್ಜನ್ಯ ಪ್ರಕರಣಗಳ ವಿಲೇವಾರಿ
– ಸಾಗುವಳಿ ಚೀಟಿ ವಿತರಣೆ
– ಸರ್ಕಾರಿ ಜಾಗಗಳ ಒತ್ತುವರಿ ತೆರವು
– ನಿವೇಶನ, ವಸತಿ ಹಂಚಿಕೆ
– ಬಗರ್ ಹುಕುಂ ಜಮೀನು ವಿವಾದ
– ಕಡತಗಳ ಶೀಘ್ರ ವಿಲೇವಾರಿ
– ಇ.ಎಸ್.ಐ ಆಸ್ಪತ್ರೆ ಉದ್ಘಾಟನೆ
– ಹೊಸಕೋಟೆಯಲ್ಲಿ ಉಪವಿಭಾಗ ಸ್ಥಾಪಿಸುವುದು
– ಪೌತಿ ಖಾತೆ, ಪೋಡಿ ಇತ್ಯರ್ಥ
ಈ ಸಂಬಂಧ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಗಳ ನ್ಯಾಯಾಲಯ ಸಭಾಂಗಣದಲ್ಲಿ ಸಂಘಟನೆಗಳ ಮುಖಂಡರಿಗೆ ಕರೆದಿದ್ದ ಸಭೆಯಲ್ಲಿ ಸಂಘಟನೆಗಳ ಬೇಡಿಕೆಗಳಿಗೆ ಸಂಬಂಧಿಸಿದಂತೆ ಜಿಲ್ಲಾಧಿಕಾರಿಗಳು ಪ್ರತಿಕ್ರಿಯಿಸಿ ಜಿಲ್ಲೆಯಲ್ಲಿ ಈಗಾಗಲೇ ಪೌತಿ ಖಾತೆ ಆಂದೋಲನ ಶುರುವಾಗಿದ್ದು 6000 ಕುಟುಂಬಗಳು ಇದರ ವ್ಯಾಪ್ತಿಗೆ ಬರುತ್ತದೆ. ಪೋಡಿ ಮುಕ್ತ ಜಿಲ್ಲೆ ಮಾಡುವ ನಿಟ್ಟಿನಲ್ಲಿ ಈಗಾಗಲೇ ಕೆಲಸ ಶುರು ಮಾಡಲಾಗಿದೆ. ಸೂಕ್ತ ದಾಖಲೆಗಳು ಇರುವ ಜಮೀನುಗಳನ್ನು ಮೊದಲು ಪೋಡಿ ಮಾಡಲಾಗುತ್ತಿದೆ ಎಂದರು.
ಆಶ್ರಯ ಯೋಜನೆಯಡಿ ಬಡವರಿಗೆ ನಿವೇಶನ ನೀಡುವ ಸಲುವಾಗಿ ಜಿಲ್ಲೆಯಲ್ಲಿ 200 ರಿಂದ 300 ಎಕರೆ ಸರ್ಕಾರಿ ಜಾಗ ಗುರ್ತಿಸಲಾಗಿದೆ. ಅಂದಾಜು 7000 ನಿವೇಶನಗಳನ್ನು ನಿರ್ಮಿಸಲು ರಾಜೀವ್ ಗಾಂಧಿ ಗೃಹ ನಿರ್ಮಾಣ ಮಂಡಳಿಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. 4000 ನಿವೇಶನಗಳ ನಿರ್ಮಾಣಕ್ಕೆ ಅನುಮೋದನೆ ಸಿಕ್ಕಿದೆ. ನಿವೇಶನ ರಹಿತರ ಪಟ್ಟಿ ಸಿದ್ದಪಡಿಸಲಾಗಿದ್ದು ಅರ್ಹರಿಗೆ ಹಂತ ಹಂತವಾಗಿ ನಿವೇಶನ ಹಂಚಲು ಕ್ರಮ ವಹಿಸಲಾಗುವುದು ಎಂದರು.
ಸಾರ್ವಜನಿಕ ಆಡಳಿತದಲ್ಲಿ ಪಾರದರ್ಶಕ ಆಡಳಿತಕ್ಕೆ ಮೊದಲ ಆದ್ಯತೆ ನೀಡಬೇಕು. ಅಧಿಕಾರಿಗಳು ಜನಸಾಮಾನ್ಯರನ್ನು ಗೌರವದಿಂದ ಕಾಣಬೇಕು. ಸಾರ್ವಜನಿಕರಿಂದ ಯಾವುದೇ ದೂರುಗಳ ಬರದೇ ಇರೋ ಹಾಗೆ ಕೆಲಸ ಮಾಡಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಇನ್ನಿತರ ಬೇಡಿಕೆಗಳಿಗೆ ಸಂಬಂಧಿಸಿದಂತೆ ಸಂಬಂಧಪಟ್ಟ ಅಧಿಕಾರಿಗಳ ಸಭೆ ಕರೆದು ಚರ್ಚಿಸಿ ಸೂಕ್ತ ನಿರ್ದೇಶನ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಸಂಘಟನೆಗಳ ಮುಖಂಡರಿಗೆ ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಅಮರೇಶ್ ಹೆಚ್, ಉಪವಿಭಾಗಾಧಿಕಾರಿ ದುರ್ಗ ಶ್ರೀ, ನಾಲ್ಕು ತಾಲ್ಲೂಕು ತಹಶೀಲ್ದಾರ್ ಗಳು, ವಿವಿಧ ಸಂಘಟನೆಗಳು ಮುಖಂಡರು ಉಪಸ್ಥಿತರಿದ್ದರು.
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…