ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೌರಸೇವಾ ನೌಕರರ ಮುಷ್ಕರ ಆರಂಭ: ಸ್ವಚ್ಛತೆ ಸೇರಿ ಹಲವು ಕೆಲಸ ಸ್ಥಗಿತ: ಜೂನ್ 2ರಿಂದ ನೀರು ಪೂರೈಕೆಯೂ ಸ್ಟಾಪ್

ದೊಡ್ಡಬಳ್ಳಾಪುರ: ಪೌರಸೇವಾ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರ ಬೆಂಬಲಿಸಿ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಂದೆ ಶುಕ್ರವಾರ ಪೌರಾಸೇವಾ ನೌಕರರು ಮುಷ್ಕರ ಆರಂಭಿಸಿದ್ದಾರೆ.

ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಹಲವಾರು ಬೇಡಿಕೆಗಳು ದಶಕಗಳಿಂದ ಬಾಕಿ ಉಳಿದಿವೆ. ಹಲವು ಬಾರಿ ಮನವಿ ಮಾಡಿದರೂ ಬೇಡಿಕೆಗಳನ್ನು ಈವರೆಗೂ ಈಡೇರಿಸಿಲ್ಲ. ಹೀಗಾಗಿ ಮುಷ್ಕರ ಆರಂಭಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿನ ಕಾರ್ಯಗಳನ್ನು ಸ್ಥಗಿತಗೊಳಿಸಲು ಹಾಗೂ ನಗರದ ಸ್ವಚ್ಛತ ಕಾರ್ಯವನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟಾವದಿ ಮುಷ್ಕರ ಪ್ರಾರಂಭಿಸಲಾಗುತ್ತಿದೆ. ಜೂನ್ 2 ರಿಂದ ನೀರು ಸರಬರಾಜು ಸಹ ಸ್ಥಗಿತಗೊಳಿಸಿ ಮುಷ್ಕರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಪಿ.ಪಾಂಡುಸಿಂಧೆ ತಿಳಿಸಿದರು.

ಬೇಡಿಕೆಗಳು: ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೇ ವಿಸ್ತರಿಸಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ, ಕ್ಷೇಮಾಭಿವೃದ್ಧಿ ಅಧಿನಿಯಮದಡಿ ಇರುವ ನೌಕರರನ್ನು ಸಕ್ರಮಗೊಳಿಸಬೇಕು. ನಗರಸಭೆಗಳಲ್ಲಿ ಶೇ 100 ರಷ್ಟು ಪೌರಕಾರ್ಮಿಕರನ್ನು ವಿಶೇಷ ನೇಮಕಾತಿದಡಿ ನೇಮಕಾತಿ ಮಾಡಬೇಕು.

2022ನೇ ಸಾಲಿನ ವಿಶೇಷ ನೇಮಕಾತಿಯಡಿ ಆಯ್ಕೆಯಾದ ಪೌರಕಾರ್ಮಿಕರು, ರೋಡರ್ಸ್‌ಗಳಿಗೆ ಎಸ್‌ಎಫ್‌ಸಿ ವೇತನ ನಿಧಿಯಿಂದ ವೇತನ ಪಾವತಿಸಬೇಕು. ನಗರ ಸ್ಥಳೀಯ ನೌಕರರಿಗೆ ಜ್ಯೋತಿ ಸಂಜೀವಿನಿ, ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು. ಐಟಿ ಸಿಬ್ಬಂದಿ, ಅಕೌಂಟ್ ಕನ್ಸಲ್‌ಟೆಂಟ್, ಕಂಪ್ಯೂಟರ್ ಆಪರೇಟ‌ರ್, ವಾಹನ 250, ಸ್ಯಾನಿಟರಿ ಸೂಪರ್ ವೈಜರ್ ಹಾಗೂ ಇತರೆ ವೃಂದದ ನೌಕರರನ್ನು ಪೌರಸೇವಾ ನೌಕರರೆಂದು ಪರಿಗಣಿಸಿ ವಿಲೀನಗೊಳಿಸಬೇಕು ಎನ್ನುವ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ ಎಂದರು.

ಪೌರ ಕಾರ್ಮಿಕರ ಸಂಘದ ಶಾಖಾ ಖಜಾಂಚಿ ವೆಂಕಟೇಶ್ ಬಾಬು, ಶಾಖಾ ಕಾರ್ಯದರ್ಶಿ ಜೆ.ಸಿ.ಪಿ.ಮಂಜು ಇದ್ದರು.

Ramesh Babu

Journalist

Recent Posts

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆ ಉಂಟಾದಲ್ಲಿ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ- ಡಿಸಿ ಡಾ. ಕೆ.ಎನ್ ಅನುರಾಧ

ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…

9 hours ago

ಶೀಘ್ರದಲ್ಲೇ ಹೋಟೆಲ್ ಗಳಿಗೂ ಅಡಿಗೆ ಅನಿಲ ಪೂರೈಕೆ – ಆಹಾರ ಸಚಿವ ಕೆ ಎಚ್ ಮುನಿಯಪ್ಪ‌

ರಾಜ್ಯದಲ್ಲಿ ಎಲ್‌ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್‌ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…

14 hours ago

‘ಪ್ರಸಾದ್ 2.0’ (PRASHAD 2.0) ಯೋಜನೆಯಡಿ ಘಾಟಿ ಸುಬ್ರಹ್ಮಣ್ಯ ಸ್ವಾಮಿ ದೇವಾಲಯದ ಸಮಗ್ರ ಅಭಿವೃದ್ಧಿ ವಿಚಾರ: ಶ್ರೀ ಘಾಟಿ ಸುಬ್ರಹ್ಮಣ್ಯ ಅಭಿವೃದ್ಧಿ ಪ್ರಾಧಿಕಾರ ಸದಸ್ಯರಾದ ರಂಗಪ್ಪ, ಆರ್.ವಿ ಮಹೇಶ್ ಕುಮಾರ್ ಸಂತಸ

ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…

14 hours ago

ರೀಲ್ಸ್ ಮಾಡುವ ಮಹಿಳೆಯರ ಜೊತೆ ರೀಲ್ಸ್ ಮಂಜಣ್ಣ ಹೆಲ್ಮೆಟ್ ಇಲ್ಲದೇ ಬೈಕಿನಲ್ಲಿ ತ್ರಿಬಲ್ ರೈಡಿಂಗ್: ಸಾಮಾಜಿಕ‌ ಜಾಲತಣದಲ್ಲಿ ವಿಡಿಯೋ ಪೋಸ್ಟ್: ಪೊಲೀಸರಿಂದ ಬಿತ್ತು ಫೈನ್: ಕೊನೆಗೆ ಫೈನ್ ಕಟ್ಟಿ ಕ್ಷಮೆಯಾಚನೆ

ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…

22 hours ago

ಆನ್ ಲೈನ್ ನಲ್ಲಿ ಒಂದು ರೂ. ಗೆ ಹಾಲು ಮಾರಾಟ: ಪ್ರಾಂತ ರೈತ ಸಂಘ ಆಕ್ರೋಶ: ಅಮಿತ್ ಶಾ ರಾಜೀನಾಮೆಗೆ ಆಗ್ರಹ

ಕೋಲಾರ: ಅಮೆಜಾನ್‌ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…

1 day ago