ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೌರಸೇವಾ ನೌಕರರ ಮುಷ್ಕರ ಆರಂಭ: ಸ್ವಚ್ಛತೆ ಸೇರಿ ಹಲವು ಕೆಲಸ ಸ್ಥಗಿತ: ಜೂನ್ 2ರಿಂದ ನೀರು ಪೂರೈಕೆಯೂ ಸ್ಟಾಪ್

ದೊಡ್ಡಬಳ್ಳಾಪುರ: ಪೌರಸೇವಾ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರ ಬೆಂಬಲಿಸಿ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಂದೆ ಶುಕ್ರವಾರ ಪೌರಾಸೇವಾ ನೌಕರರು ಮುಷ್ಕರ ಆರಂಭಿಸಿದ್ದಾರೆ.

ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಹಲವಾರು ಬೇಡಿಕೆಗಳು ದಶಕಗಳಿಂದ ಬಾಕಿ ಉಳಿದಿವೆ. ಹಲವು ಬಾರಿ ಮನವಿ ಮಾಡಿದರೂ ಬೇಡಿಕೆಗಳನ್ನು ಈವರೆಗೂ ಈಡೇರಿಸಿಲ್ಲ. ಹೀಗಾಗಿ ಮುಷ್ಕರ ಆರಂಭಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿನ ಕಾರ್ಯಗಳನ್ನು ಸ್ಥಗಿತಗೊಳಿಸಲು ಹಾಗೂ ನಗರದ ಸ್ವಚ್ಛತ ಕಾರ್ಯವನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟಾವದಿ ಮುಷ್ಕರ ಪ್ರಾರಂಭಿಸಲಾಗುತ್ತಿದೆ. ಜೂನ್ 2 ರಿಂದ ನೀರು ಸರಬರಾಜು ಸಹ ಸ್ಥಗಿತಗೊಳಿಸಿ ಮುಷ್ಕರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಪಿ.ಪಾಂಡುಸಿಂಧೆ ತಿಳಿಸಿದರು.

ಬೇಡಿಕೆಗಳು: ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೇ ವಿಸ್ತರಿಸಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ, ಕ್ಷೇಮಾಭಿವೃದ್ಧಿ ಅಧಿನಿಯಮದಡಿ ಇರುವ ನೌಕರರನ್ನು ಸಕ್ರಮಗೊಳಿಸಬೇಕು. ನಗರಸಭೆಗಳಲ್ಲಿ ಶೇ 100 ರಷ್ಟು ಪೌರಕಾರ್ಮಿಕರನ್ನು ವಿಶೇಷ ನೇಮಕಾತಿದಡಿ ನೇಮಕಾತಿ ಮಾಡಬೇಕು.

2022ನೇ ಸಾಲಿನ ವಿಶೇಷ ನೇಮಕಾತಿಯಡಿ ಆಯ್ಕೆಯಾದ ಪೌರಕಾರ್ಮಿಕರು, ರೋಡರ್ಸ್‌ಗಳಿಗೆ ಎಸ್‌ಎಫ್‌ಸಿ ವೇತನ ನಿಧಿಯಿಂದ ವೇತನ ಪಾವತಿಸಬೇಕು. ನಗರ ಸ್ಥಳೀಯ ನೌಕರರಿಗೆ ಜ್ಯೋತಿ ಸಂಜೀವಿನಿ, ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು. ಐಟಿ ಸಿಬ್ಬಂದಿ, ಅಕೌಂಟ್ ಕನ್ಸಲ್‌ಟೆಂಟ್, ಕಂಪ್ಯೂಟರ್ ಆಪರೇಟ‌ರ್, ವಾಹನ 250, ಸ್ಯಾನಿಟರಿ ಸೂಪರ್ ವೈಜರ್ ಹಾಗೂ ಇತರೆ ವೃಂದದ ನೌಕರರನ್ನು ಪೌರಸೇವಾ ನೌಕರರೆಂದು ಪರಿಗಣಿಸಿ ವಿಲೀನಗೊಳಿಸಬೇಕು ಎನ್ನುವ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ ಎಂದರು.

ಪೌರ ಕಾರ್ಮಿಕರ ಸಂಘದ ಶಾಖಾ ಖಜಾಂಚಿ ವೆಂಕಟೇಶ್ ಬಾಬು, ಶಾಖಾ ಕಾರ್ಯದರ್ಶಿ ಜೆ.ಸಿ.ಪಿ.ಮಂಜು ಇದ್ದರು.

Ramesh Babu

Journalist

Recent Posts

ಕಾರ್ಮಿಕ ವರ್ಗದ ವೈದ್ಯಕೀಯ ಸೇವೆಗೆ ಇಎಸ್ಐಸಿ ಆಸ್ಪತ್ರೆ ವರದಾನ- ಕೇಂದ್ರ ಸಚಿವ ಮನ್ಸುಖ್ ಮಾಂಡವೀಯ

ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…

2 hours ago

ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1): ‘ಎ’ ತಂಡವನ್ನು ಮಣಿಸಿ ಕೊನಘಟ್ಟ ಪ್ರೀಮಿಯರ್ ಲೀಗ್ ಟ್ರೋಫಿ ಪಡೆದ ಕೊನಘಟ್ಟ ‘ಬಿ’ ತಂಡ: ಗಣ್ಯರಿಂದ ಅಭಿನಂದನೆ, ಪ್ರೋತ್ಸಾಹ

. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…

3 hours ago

ಕಾರಿನಲ್ಲಿ ಬೆಂಕಿ: ಮಹಿಳೆ ಅನುಮಾನಾಸ್ಪದ ಸಾವು ಪ್ರಕರಣ: ಮಹಿಳೆಯ ಜೊತೆ ಕಾರಿನಲ್ಲಿದ್ದ ವ್ಯಕ್ತಿ ಕೂಡ ರೈಲಿಗೆ ಸಿಲುಕಿ ಸಾವು

ದೊಡ್ಡಬಳ್ಳಾಪುರ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಮೇ.2ರ ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ…

7 hours ago

ಬಾಯ್ತೆರೆದ ಮ್ಯಾನ್ ಹೋಲ್: ರಸ್ತೆಯಲ್ಲಿ ಮಲಮಿಶ್ರಿತ ಕೊಳಚೆ ನೀರು: ಕ್ಯಾರೆ ಎನ್ನದ ನಗರಸಭೆ ಅಧಿಕಾರಿಗಳು

ದೊಡ್ಡಬಳ್ಳಾಪುರ ನಗರದ ಕೊಂಗಾಡಿಯಪ್ಪ ಮುಖ್ಯರಸ್ತೆ ತ್ಯಾಗರಾಜ ನಗರ ಆನೆಬಯಲು ಡೌನಿನ ರಸ್ತೆಯಲ್ಲಿ ಕಳೆದ 15 ದಿನಗಳಿಂದ ಒಳಚರಂಡಿಯ ಮ್ಯಾನ್ ಹೋಲ್…

11 hours ago

ಶೈಕ್ಷಣಿಕ ಹಾದಿ……..

ಶಿಕ್ಷಣ ಕ್ಷೇತ್ರದ ಬಗ್ಗೆ ಪರೀಕ್ಷೆಗಳ ಫಲಿತಾಂಶಗಳು ಪ್ರಕಟವಾಗುತ್ತಿರುವ ಈ ಸಂದರ್ಭದಲ್ಲಿ....... ಶಿಕ್ಷಣ... ಜ್ಞಾನಾರ್ಜನೆಗಾಗಿಯೇ, ಉದ್ಯೋಗಕ್ಕಾಗಿಯೇ, ಬದುಕಿಗಾಗಿಯೇ, ಸಾಧನೆಗಾಗಿಯೇ, ಪೋಷಕರ ಒತ್ತಾಯಕ್ಕಾಗಿಯೇ,…

15 hours ago

ಕಾರಿನಲ್ಲಿ ಬೆಂಕಿ: ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮ: ಹಲವು ಅನುಮಾನ

ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಅನುಮಾನಾಸ್ಪದ ರೀತಿಯಲ್ಲಿ ಕಾರಿನಲ್ಲೇ ಮಹಿಳೆ ಸುಟ್ಟುಭಸ್ಮವಾಗಿರುವ ಘಟನೆ ಇಂದು ಮಧ್ಯಾಹ್ನ ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…

1 day ago