ದೊಡ್ಡಬಳ್ಳಾಪುರ: ಪೌರಸೇವಾ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರ ಬೆಂಬಲಿಸಿ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಂದೆ ಶುಕ್ರವಾರ ಪೌರಾಸೇವಾ ನೌಕರರು ಮುಷ್ಕರ ಆರಂಭಿಸಿದ್ದಾರೆ.
ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಹಲವಾರು ಬೇಡಿಕೆಗಳು ದಶಕಗಳಿಂದ ಬಾಕಿ ಉಳಿದಿವೆ. ಹಲವು ಬಾರಿ ಮನವಿ ಮಾಡಿದರೂ ಬೇಡಿಕೆಗಳನ್ನು ಈವರೆಗೂ ಈಡೇರಿಸಿಲ್ಲ. ಹೀಗಾಗಿ ಮುಷ್ಕರ ಆರಂಭಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿನ ಕಾರ್ಯಗಳನ್ನು ಸ್ಥಗಿತಗೊಳಿಸಲು ಹಾಗೂ ನಗರದ ಸ್ವಚ್ಛತ ಕಾರ್ಯವನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟಾವದಿ ಮುಷ್ಕರ ಪ್ರಾರಂಭಿಸಲಾಗುತ್ತಿದೆ. ಜೂನ್ 2 ರಿಂದ ನೀರು ಸರಬರಾಜು ಸಹ ಸ್ಥಗಿತಗೊಳಿಸಿ ಮುಷ್ಕರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಪಿ.ಪಾಂಡುಸಿಂಧೆ ತಿಳಿಸಿದರು.
ಬೇಡಿಕೆಗಳು: ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೇ ವಿಸ್ತರಿಸಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ, ಕ್ಷೇಮಾಭಿವೃದ್ಧಿ ಅಧಿನಿಯಮದಡಿ ಇರುವ ನೌಕರರನ್ನು ಸಕ್ರಮಗೊಳಿಸಬೇಕು. ನಗರಸಭೆಗಳಲ್ಲಿ ಶೇ 100 ರಷ್ಟು ಪೌರಕಾರ್ಮಿಕರನ್ನು ವಿಶೇಷ ನೇಮಕಾತಿದಡಿ ನೇಮಕಾತಿ ಮಾಡಬೇಕು.
2022ನೇ ಸಾಲಿನ ವಿಶೇಷ ನೇಮಕಾತಿಯಡಿ ಆಯ್ಕೆಯಾದ ಪೌರಕಾರ್ಮಿಕರು, ರೋಡರ್ಸ್ಗಳಿಗೆ ಎಸ್ಎಫ್ಸಿ ವೇತನ ನಿಧಿಯಿಂದ ವೇತನ ಪಾವತಿಸಬೇಕು. ನಗರ ಸ್ಥಳೀಯ ನೌಕರರಿಗೆ ಜ್ಯೋತಿ ಸಂಜೀವಿನಿ, ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು. ಐಟಿ ಸಿಬ್ಬಂದಿ, ಅಕೌಂಟ್ ಕನ್ಸಲ್ಟೆಂಟ್, ಕಂಪ್ಯೂಟರ್ ಆಪರೇಟರ್, ವಾಹನ 250, ಸ್ಯಾನಿಟರಿ ಸೂಪರ್ ವೈಜರ್ ಹಾಗೂ ಇತರೆ ವೃಂದದ ನೌಕರರನ್ನು ಪೌರಸೇವಾ ನೌಕರರೆಂದು ಪರಿಗಣಿಸಿ ವಿಲೀನಗೊಳಿಸಬೇಕು ಎನ್ನುವ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ ಎಂದರು.
ಪೌರ ಕಾರ್ಮಿಕರ ಸಂಘದ ಶಾಖಾ ಖಜಾಂಚಿ ವೆಂಕಟೇಶ್ ಬಾಬು, ಶಾಖಾ ಕಾರ್ಯದರ್ಶಿ ಜೆ.ಸಿ.ಪಿ.ಮಂಜು ಇದ್ದರು.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…