ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೌರಸೇವಾ ನೌಕರರ ಮುಷ್ಕರ ಆರಂಭ: ಸ್ವಚ್ಛತೆ ಸೇರಿ ಹಲವು ಕೆಲಸ ಸ್ಥಗಿತ: ಜೂನ್ 2ರಿಂದ ನೀರು ಪೂರೈಕೆಯೂ ಸ್ಟಾಪ್

ದೊಡ್ಡಬಳ್ಳಾಪುರ: ಪೌರಸೇವಾ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರ ಬೆಂಬಲಿಸಿ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಂದೆ ಶುಕ್ರವಾರ ಪೌರಾಸೇವಾ ನೌಕರರು ಮುಷ್ಕರ ಆರಂಭಿಸಿದ್ದಾರೆ.

ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಹಲವಾರು ಬೇಡಿಕೆಗಳು ದಶಕಗಳಿಂದ ಬಾಕಿ ಉಳಿದಿವೆ. ಹಲವು ಬಾರಿ ಮನವಿ ಮಾಡಿದರೂ ಬೇಡಿಕೆಗಳನ್ನು ಈವರೆಗೂ ಈಡೇರಿಸಿಲ್ಲ. ಹೀಗಾಗಿ ಮುಷ್ಕರ ಆರಂಭಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿನ ಕಾರ್ಯಗಳನ್ನು ಸ್ಥಗಿತಗೊಳಿಸಲು ಹಾಗೂ ನಗರದ ಸ್ವಚ್ಛತ ಕಾರ್ಯವನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟಾವದಿ ಮುಷ್ಕರ ಪ್ರಾರಂಭಿಸಲಾಗುತ್ತಿದೆ. ಜೂನ್ 2 ರಿಂದ ನೀರು ಸರಬರಾಜು ಸಹ ಸ್ಥಗಿತಗೊಳಿಸಿ ಮುಷ್ಕರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಪಿ.ಪಾಂಡುಸಿಂಧೆ ತಿಳಿಸಿದರು.

ಬೇಡಿಕೆಗಳು: ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೇ ವಿಸ್ತರಿಸಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ, ಕ್ಷೇಮಾಭಿವೃದ್ಧಿ ಅಧಿನಿಯಮದಡಿ ಇರುವ ನೌಕರರನ್ನು ಸಕ್ರಮಗೊಳಿಸಬೇಕು. ನಗರಸಭೆಗಳಲ್ಲಿ ಶೇ 100 ರಷ್ಟು ಪೌರಕಾರ್ಮಿಕರನ್ನು ವಿಶೇಷ ನೇಮಕಾತಿದಡಿ ನೇಮಕಾತಿ ಮಾಡಬೇಕು.

2022ನೇ ಸಾಲಿನ ವಿಶೇಷ ನೇಮಕಾತಿಯಡಿ ಆಯ್ಕೆಯಾದ ಪೌರಕಾರ್ಮಿಕರು, ರೋಡರ್ಸ್‌ಗಳಿಗೆ ಎಸ್‌ಎಫ್‌ಸಿ ವೇತನ ನಿಧಿಯಿಂದ ವೇತನ ಪಾವತಿಸಬೇಕು. ನಗರ ಸ್ಥಳೀಯ ನೌಕರರಿಗೆ ಜ್ಯೋತಿ ಸಂಜೀವಿನಿ, ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು. ಐಟಿ ಸಿಬ್ಬಂದಿ, ಅಕೌಂಟ್ ಕನ್ಸಲ್‌ಟೆಂಟ್, ಕಂಪ್ಯೂಟರ್ ಆಪರೇಟ‌ರ್, ವಾಹನ 250, ಸ್ಯಾನಿಟರಿ ಸೂಪರ್ ವೈಜರ್ ಹಾಗೂ ಇತರೆ ವೃಂದದ ನೌಕರರನ್ನು ಪೌರಸೇವಾ ನೌಕರರೆಂದು ಪರಿಗಣಿಸಿ ವಿಲೀನಗೊಳಿಸಬೇಕು ಎನ್ನುವ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ ಎಂದರು.

ಪೌರ ಕಾರ್ಮಿಕರ ಸಂಘದ ಶಾಖಾ ಖಜಾಂಚಿ ವೆಂಕಟೇಶ್ ಬಾಬು, ಶಾಖಾ ಕಾರ್ಯದರ್ಶಿ ಜೆ.ಸಿ.ಪಿ.ಮಂಜು ಇದ್ದರು.

Ramesh Babu

Journalist

Recent Posts

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

3 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

7 hours ago

ಇರುವುದೊಂದೇ ಬದುಕು, ಅದನ್ನು ಅರ್ಥಪೂರ್ಣವಾಗಿ ಸಾರ್ಥಕ ಪಡಿಸಿಕೊಳ್ಳಿ…….

ಸ್ಪರ್ಧೆ ಇರಲಿ, ಆದರೆ ಬದುಕೇ ಸ್ಪರ್ಧೆಯಾಗುವುದು ಬೇಡ..... ಎಲ್ಲಿ ಜೀವನ ನಡೆವುದೋ ಅದೇ ನನ್ನೂರು, ಯಾರು ಸ್ನೇಹದಿ ಬರುವರೋ ಅವರೇ…

9 hours ago

ಜಿಂಕೆಗೆ ವಾಹನ ಡಿಕ್ಕಿ; ಸ್ಥಳದಲ್ಲೇ ಸಾವು

ರಾಜಾನುಕುಂಟೆ: ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯ ರಾಜಾನುಕುಂಟೆ ಸಮೀಪ ಶುಕ್ರವಾರ ಮುಂಜಾನೆ ವೇಗವಾಗಿ ಬಂದ ವಾಹನವೊಂದು ಜಿಂಕೆಗೆ ಡಿಕ್ಕಿ ಹೊಡೆದ ಪರಿಣಾಮ…

9 hours ago

ಬಾಶೆಟ್ಟಿಹಳ್ಳಿ ಕೋಟ್ಯಂತರ ಹಗರಣ ಆರೋಪ: ಶಾಸಕರು ಮೌನ ಏಕೆ ಎಂದು ಸ್ಥಳೀಯರ ಪ್ರಶ್ನೆ

ದೊಡ್ಡಬಳ್ಳಾಪುರದ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಯ ವಿವಿಧ ಕಾಮಗಾರಿಗಳಲ್ಲಿ ನಡೆದಿದೆ ಎನ್ನಲಾದ ಕೋಟ್ಯಂತರ ರೂಪಾಯಿ ಅಕ್ರಮಗಳ ಕುರಿತು ಲೋಕಾಯುಕ್ತ ಪೊಲೀಸರು ಕಳೆದ…

20 hours ago

ಅಗಸ್ಟ್ 2ರ ಪೊಲೀಸ್ ಕಾನ್‌ಸ್ಟೇಬಲ್ ಪರೀಕ್ಷೆ: ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ, ಎಸ್ಪಿ

ಆಗಸ್ಟ್ 2ರಂದು ನಡೆಯಲಿರುವ ಪೊಲೀಸ್ ಕಾನ್‌ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ. ಕೆ.ಎನ್. ಅನುರಾಧ…

21 hours ago