ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೌರಸೇವಾ ನೌಕರರ ಮುಷ್ಕರ ಆರಂಭ: ಸ್ವಚ್ಛತೆ ಸೇರಿ ಹಲವು ಕೆಲಸ ಸ್ಥಗಿತ: ಜೂನ್ 2ರಿಂದ ನೀರು ಪೂರೈಕೆಯೂ ಸ್ಟಾಪ್

ದೊಡ್ಡಬಳ್ಳಾಪುರ: ಪೌರಸೇವಾ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರ ಬೆಂಬಲಿಸಿ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಂದೆ ಶುಕ್ರವಾರ ಪೌರಾಸೇವಾ ನೌಕರರು ಮುಷ್ಕರ ಆರಂಭಿಸಿದ್ದಾರೆ.

ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಹಲವಾರು ಬೇಡಿಕೆಗಳು ದಶಕಗಳಿಂದ ಬಾಕಿ ಉಳಿದಿವೆ. ಹಲವು ಬಾರಿ ಮನವಿ ಮಾಡಿದರೂ ಬೇಡಿಕೆಗಳನ್ನು ಈವರೆಗೂ ಈಡೇರಿಸಿಲ್ಲ. ಹೀಗಾಗಿ ಮುಷ್ಕರ ಆರಂಭಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿನ ಕಾರ್ಯಗಳನ್ನು ಸ್ಥಗಿತಗೊಳಿಸಲು ಹಾಗೂ ನಗರದ ಸ್ವಚ್ಛತ ಕಾರ್ಯವನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟಾವದಿ ಮುಷ್ಕರ ಪ್ರಾರಂಭಿಸಲಾಗುತ್ತಿದೆ. ಜೂನ್ 2 ರಿಂದ ನೀರು ಸರಬರಾಜು ಸಹ ಸ್ಥಗಿತಗೊಳಿಸಿ ಮುಷ್ಕರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಪಿ.ಪಾಂಡುಸಿಂಧೆ ತಿಳಿಸಿದರು.

ಬೇಡಿಕೆಗಳು: ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೇ ವಿಸ್ತರಿಸಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ, ಕ್ಷೇಮಾಭಿವೃದ್ಧಿ ಅಧಿನಿಯಮದಡಿ ಇರುವ ನೌಕರರನ್ನು ಸಕ್ರಮಗೊಳಿಸಬೇಕು. ನಗರಸಭೆಗಳಲ್ಲಿ ಶೇ 100 ರಷ್ಟು ಪೌರಕಾರ್ಮಿಕರನ್ನು ವಿಶೇಷ ನೇಮಕಾತಿದಡಿ ನೇಮಕಾತಿ ಮಾಡಬೇಕು.

2022ನೇ ಸಾಲಿನ ವಿಶೇಷ ನೇಮಕಾತಿಯಡಿ ಆಯ್ಕೆಯಾದ ಪೌರಕಾರ್ಮಿಕರು, ರೋಡರ್ಸ್‌ಗಳಿಗೆ ಎಸ್‌ಎಫ್‌ಸಿ ವೇತನ ನಿಧಿಯಿಂದ ವೇತನ ಪಾವತಿಸಬೇಕು. ನಗರ ಸ್ಥಳೀಯ ನೌಕರರಿಗೆ ಜ್ಯೋತಿ ಸಂಜೀವಿನಿ, ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು. ಐಟಿ ಸಿಬ್ಬಂದಿ, ಅಕೌಂಟ್ ಕನ್ಸಲ್‌ಟೆಂಟ್, ಕಂಪ್ಯೂಟರ್ ಆಪರೇಟ‌ರ್, ವಾಹನ 250, ಸ್ಯಾನಿಟರಿ ಸೂಪರ್ ವೈಜರ್ ಹಾಗೂ ಇತರೆ ವೃಂದದ ನೌಕರರನ್ನು ಪೌರಸೇವಾ ನೌಕರರೆಂದು ಪರಿಗಣಿಸಿ ವಿಲೀನಗೊಳಿಸಬೇಕು ಎನ್ನುವ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ ಎಂದರು.

ಪೌರ ಕಾರ್ಮಿಕರ ಸಂಘದ ಶಾಖಾ ಖಜಾಂಚಿ ವೆಂಕಟೇಶ್ ಬಾಬು, ಶಾಖಾ ಕಾರ್ಯದರ್ಶಿ ಜೆ.ಸಿ.ಪಿ.ಮಂಜು ಇದ್ದರು.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

10 hours ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

20 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

20 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

1 day ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

1 day ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago