ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಪೌರಸೇವಾ ನೌಕರರ ಮುಷ್ಕರ ಆರಂಭ: ಸ್ವಚ್ಛತೆ ಸೇರಿ ಹಲವು ಕೆಲಸ ಸ್ಥಗಿತ: ಜೂನ್ 2ರಿಂದ ನೀರು ಪೂರೈಕೆಯೂ ಸ್ಟಾಪ್

ದೊಡ್ಡಬಳ್ಳಾಪುರ: ಪೌರಸೇವಾ ನೌಕರರ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘ ಕರೆ ನೀಡಿರುವ ಅನಿರ್ಧಿಷ್ಟಾವಧಿ ಮುಷ್ಕರ ಬೆಂಬಲಿಸಿ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿ ಮುಂದೆ ಶುಕ್ರವಾರ ಪೌರಾಸೇವಾ ನೌಕರರು ಮುಷ್ಕರ ಆರಂಭಿಸಿದ್ದಾರೆ.

ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಹಲವಾರು ಬೇಡಿಕೆಗಳು ದಶಕಗಳಿಂದ ಬಾಕಿ ಉಳಿದಿವೆ. ಹಲವು ಬಾರಿ ಮನವಿ ಮಾಡಿದರೂ ಬೇಡಿಕೆಗಳನ್ನು ಈವರೆಗೂ ಈಡೇರಿಸಿಲ್ಲ. ಹೀಗಾಗಿ ಮುಷ್ಕರ ಆರಂಭಿಸಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಎಲ್ಲಾ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಗಳ ವ್ಯಾಪ್ತಿಯ ಎಲ್ಲಾ ಶಾಖೆಗಳಲ್ಲಿನ ಕಾರ್ಯಗಳನ್ನು ಸ್ಥಗಿತಗೊಳಿಸಲು ಹಾಗೂ ನಗರದ ಸ್ವಚ್ಛತ ಕಾರ್ಯವನ್ನು ಸ್ಥಗಿತಗೊಳಿಸಿ ಅನಿರ್ಧಿಷ್ಟಾವದಿ ಮುಷ್ಕರ ಪ್ರಾರಂಭಿಸಲಾಗುತ್ತಿದೆ. ಜೂನ್ 2 ರಿಂದ ನೀರು ಸರಬರಾಜು ಸಹ ಸ್ಥಗಿತಗೊಳಿಸಿ ಮುಷ್ಕರ ಕೈಗೊಳ್ಳಲಾಗುವುದು ಎಂದು ಕರ್ನಾಟಕ ರಾಜ್ಯ ಪೌರಸೇವಾ ನೌಕರರ ಸೇವಾ ಸಂಘದ ಜಿಲ್ಲಾಧ್ಯಕ್ಷ ಪಿ.ಪಾಂಡುಸಿಂಧೆ ತಿಳಿಸಿದರು.

ಬೇಡಿಕೆಗಳು: ರಾಜ್ಯ ಸರ್ಕಾರಿ ನೌಕರರಿಗೆ ನೀಡುವ ಪ್ರತಿಯೊಂದು ಸವಲತ್ತುಗಳನ್ನು ಪೌರಸೇವಾ ನೌಕರರಿಗೆ ಪ್ರತ್ಯೇಕ ಆದೇಶವಿಲ್ಲದೇ ವಿಸ್ತರಿಸಬೇಕು. ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ದಿನಗೂಲಿ, ಕ್ಷೇಮಾಭಿವೃದ್ಧಿ ಅಧಿನಿಯಮದಡಿ ಇರುವ ನೌಕರರನ್ನು ಸಕ್ರಮಗೊಳಿಸಬೇಕು. ನಗರಸಭೆಗಳಲ್ಲಿ ಶೇ 100 ರಷ್ಟು ಪೌರಕಾರ್ಮಿಕರನ್ನು ವಿಶೇಷ ನೇಮಕಾತಿದಡಿ ನೇಮಕಾತಿ ಮಾಡಬೇಕು.

2022ನೇ ಸಾಲಿನ ವಿಶೇಷ ನೇಮಕಾತಿಯಡಿ ಆಯ್ಕೆಯಾದ ಪೌರಕಾರ್ಮಿಕರು, ರೋಡರ್ಸ್‌ಗಳಿಗೆ ಎಸ್‌ಎಫ್‌ಸಿ ವೇತನ ನಿಧಿಯಿಂದ ವೇತನ ಪಾವತಿಸಬೇಕು. ನಗರ ಸ್ಥಳೀಯ ನೌಕರರಿಗೆ ಜ್ಯೋತಿ ಸಂಜೀವಿನಿ, ನಗದು ರಹಿತ ಚಿಕಿತ್ಸಾ ಸೌಲಭ್ಯ ಕಲ್ಪಿಸಬೇಕು. ಐಟಿ ಸಿಬ್ಬಂದಿ, ಅಕೌಂಟ್ ಕನ್ಸಲ್‌ಟೆಂಟ್, ಕಂಪ್ಯೂಟರ್ ಆಪರೇಟ‌ರ್, ವಾಹನ 250, ಸ್ಯಾನಿಟರಿ ಸೂಪರ್ ವೈಜರ್ ಹಾಗೂ ಇತರೆ ವೃಂದದ ನೌಕರರನ್ನು ಪೌರಸೇವಾ ನೌಕರರೆಂದು ಪರಿಗಣಿಸಿ ವಿಲೀನಗೊಳಿಸಬೇಕು ಎನ್ನುವ ಬೇಡಿಕೆಗಳನ್ನು ಸರ್ಕಾರದ ಮುಂದಿಡಲಾಗಿದೆ ಎಂದರು.

ಪೌರ ಕಾರ್ಮಿಕರ ಸಂಘದ ಶಾಖಾ ಖಜಾಂಚಿ ವೆಂಕಟೇಶ್ ಬಾಬು, ಶಾಖಾ ಕಾರ್ಯದರ್ಶಿ ಜೆ.ಸಿ.ಪಿ.ಮಂಜು ಇದ್ದರು.

Ramesh Babu

Journalist

Recent Posts

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

46 minutes ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

5 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

11 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago

ಮನೆ ಮಾಲೀಕರ ಮುಂದೆಯೇ ಮನೆ ದೋಚಿ ಪರಾರಿಯಾಗಿದ್ದ ಕಳ್ಳ ಲಾಕ್‌!

ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…

1 day ago