ವಿವಿಧ ಯೋಜನೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ

ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ 2025-26 ನೇ ಸಾಲಿನ 13 ಫಲಾನುಭವಿ ಆಧಾರಿತ ಯೋಜನೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

ಆಧಾರ ಯೋಜನೆ, ವೈದ್ಯಕೀಯ ಪರಿಹಾರ ನಿಧಿ,ಪ್ರತಿಭಾವಂತ ಅಂಗವಿಕಲ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಯೋಜನೆ, ನಿರುದ್ಯೋಗ ಭತ್ಯೆ, ಶಿಶುಪಾಲನಾ ಭತ್ಯೆ, ಮರಣ ಪರಿಹಾರ ನಿಧಿ, ಪ್ರತಿಭೆ ಯೋಜನೆ, ಅಂಧ ವಿದ್ಯಾರ್ಥಿಗಳಿಗೆ ಲ್ಯಾಪ್ಟಾಪ್ ಯೋಜನೆ,ದೃಷ್ಟಿದೋಷ ಹೊಂದಿರುವ ವಿಕಲಚೇತನರಿಗೆ ಬ್ರೆಲ್ಕಿಟ್ ಯೋಜನೆ, ದೈಹಿಕ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ಯೋಜನೆ, ಶ್ರವಣದೋಷವುಳ್ಳ ವ್ಯಕ್ತಿಗಳಿಗೆ ಸ್ವಯಂ ಉದ್ಯೋಗಕ್ಕಾಗಿ ಹೊಲಿಗೆ ಯಂತ್ರ ಯೋಜನೆ, ಸಾಧನ ಸಲಕರಣೆಗಳ ಯೋಜನೆ, ವಿಕಲಚೇತನ ವ್ಯಕ್ತಿಗಳಿಗೆ ಬ್ಯಾಟರಿ ಚಾಲಿತ ವ್ಹೀಲ್ ಚೇರ್ ಈ ಯೋಜನೆಗಳಿಗೆ ಅರ್ಜಿ ಸಲ್ಲಿಸಬಹುದು.

ಅರ್ಹ ವಿಕಲಚೇತನರು ಆನ್ಲೈನ್ ಸೇವಾಸಿಂಧು ತಂತ್ರಾಂಶದ ಮೂಲಕ ಗ್ರಾಮ ಒನ್, ಕರ್ನಾಟಕ ಓನ್, ಬೆಂಗಳೂರು ಓನ್ ಹಾಗೂ ನೇರವಾಗಿಯು ಸಹ ವಿಕಲಚೇತನ ವ್ಯಕ್ತಿಗಳು https://sevasindhu.karnataka.gov.in/Sevasindhu/DepartmentServices ಜಾಲತಾಣದಲ್ಲಿ ನವೆಂಬರ್ 15 ರೊಳಗೆ ಅಗತ್ಯ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ ನಂ 3, ನೆಲಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು ಹಾಗೂ ವಿಕಲಚೇತನರ ಸಹಾಯವಾಣಿ ಕೇಂದ್ರದ ದೂರವಾಣಿ ಸಂಖ್ಯೆ:-08029787441 ಗೆ ಅಥವಾ ಹತ್ತಿರದ ಗ್ರಾಮ ಪಂಚಾಯಿತಿ/ಪಟ್ಟಣ ಪಂಚಾಯಿತಿ/ ಪುರಸಭೆ/ನಗರಸಭೆ/ತಾಲ್ಲೂಕು ಪಂಚಾಯಿತಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ/ನಗರ/ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಅಂಗನವಾಡಿ ಕಾರ್ಯಕರ್ತೆ ಮತ್ತು ಸಹಾಯಕಿಯರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ 4 ತಾಲ್ಲೂಕುಗಳ ಸಮಗ್ರ ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಬರುವ ಅಂಗನವಾಡಿ ಕೇಂದ್ರಗಳಲ್ಲಿ ಖಾಲಿಯಿರುವ 56…

16 minutes ago

ಮಹತ್ವಾಕಾಂಕ್ಷಿ ಕ್ವಿನ್ ಸಿಟಿಗೆ ಮೊದಲ ಬೃಹತ್ ಹೂಡಿಕೆ ಒಪ್ಪಂದ

ಬೆಂಗಳೂರು ಗ್ರಾಮಾಂತರ: ಡಾಬಸಪೇಟೆ-ದೊಡ್ಡಬಳ್ಳಾಪುರ ನಡುವೆ ರಾಜ್ಯ ಸರ್ಕಾರ ಅಭಿವೃದ್ಧಿಪಡಿಸುತ್ತಿರುವ ಮಹತ್ವಾಕಾಂಕ್ಷಿ ‘ಕ್ವಿನ್ ಸಿಟಿ’ (KWINCity) ಯೋಜನೆಗೆ ಮೊದಲ ಬೃಹತ್ ಹೂಡಿಕೆ…

10 hours ago

108 ಅರೋಗ್ಯ ಕವಚ ಕೇಂದ್ರೀಕೃತ ಕಮಾಂಡ್ ಮತ್ತು ಕಂಟ್ರೋಲ್ ಕೇಂದ್ರ ಉದ್ಘಾಟನೆ

ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಅತ್ಯಾಧುನಿಕ ತಂತ್ರಜ್ಞಾನವುಳ್ಳ ಆ್ಯಂಬುಲೆನ್ಸ್ ಸೇವೆ ಲಭ್ಯವಾಗಲಿದ್ದು, ಈ ಸೇವೆ ಪರಿಣಾಮಕಾರಿಯಾಗಿ ಜನರಿಗೆ ತಲುಪಬೇಕು ಎನ್ನುವುದು ನನ್ನ…

11 hours ago

SIR ಜಾಗೃತಿ ಹಾಗೂ ಮತದಾರರ ಪಟ್ಟಿಯ ಸಂರಕ್ಷಣೆ ಕಾರ್ಯಕ್ಕೆ ಆದ್ಯತೆ: ಡಿಸಿಎಂ ಡಿ.ಕೆ. ಶಿವಕುಮಾರ್

ದೇವನಹಳ್ಳಿ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ಹಾಗೂ ಜಿಬಿಎ ಚುನಾವಣೆ ಸಂಬಂಧ ಪಕ್ಷದ ಎಲ್ಲಾ ಮುಖಂಡರು ಮತ್ತು…

21 hours ago

ಸಚಿವ ಸ್ಥಾನ ತ್ಯಾಗ ಮಾಡುವ ವಿಚಾರ “ಹೈಕಮಾಂಡ್ ತೀರ್ಮಾನಕ್ಕೆ ಬದ್ದ”- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ಆಹಾರ ಮತ್ತು ನಾಗರಿಕ ಸರಬರಾಜು ಕೆ.ಎಚ್ ಮುನಿಯಪ್ಪ ಮಹತ್ವದ ರಾಜಕೀಯ ಹಾಗೂ ಅನ್ನಭಾಗ್ಯ ಯೋಜನೆ…

21 hours ago

ಬಿಜೆಪಿ – ಕಾಂಗ್ರೆಸ್ ನಡುವೆ SIR ಫೈಟ್: ಕಾಂಗ್ರೆಸ್ ನಾಯಕರ ವಿರುದ್ಧ ಸಂಸದ ಡಾ.ಕೆ.ಸುಧಾಕರ್ ಕಿಡಿ

ಬೆಂಗಳೂರು ಗ್ರಾಮಾಂತರ: ಮತದಾರರ ವಿಶೇಷ ತೀವ್ರ ಪಟ್ಟಿ ಪರಿಷ್ಕರಣೆ (SIR) ವಿಚಾರವಾಗಿ ಬಿಜೆಪಿ ಹಾಗೂ ಕಾಂಗ್ರೆಸ್ ಪಕ್ಷಗಳ ನಡುವೆ ರಾಜಕೀಯ…

1 day ago