ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ವಿಳಾಸ‌ kacdc.karnataka.gov.ing ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಸೆ.18ಕ್ಕೆ ಕೊನೆ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು

1) ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು
2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು)
3) ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು
4) ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು,
5) ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು.
6) ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33%, ವಿಕಲಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗಿಗಳಿಗೆ ಶೇ.5% ಮೀಸಲಾತಿ ಇರಿಸಿದೆ.
7) ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)

ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯ ಅರ್ಹತೆಗಳು

1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3,00,000/-ಗಳ ಮಿತಿಯೊಳಗಿರಬೇಕು.
2) ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು.
3) ಈ ಯೋಜನೆಯಲ್ಲಿ ಕನಿಷ್ಠ ರೂ.50,000/- ಗಳಿಂದ ಗರಿಷ್ಠ ರೂ.1,00,000/-ಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.20 ರಷ್ಟು ಸಹಾಯಧನ ಹಾಗೂ ಶೇ.80ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು, 2 ತಿಂಗಳ ವಿರಾಮ ಅವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆಯ ಅರ್ಹತೆಗಳು

1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.
2) ಅರ್ಜಿದಾರರು 21 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು.
3) ಈ ಯೋಜನೆಯಡಿ ಆಹಾರ ವಾಹಿನಿ ಪ್ರಾರಂಭಿಸಲು ಬ್ಯಾಂಕ್/ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಗರಿಷ್ಠ ರೂ.2,00,000/-ಗಳ ಸಹಾಯಧನವನ್ನು ನೀಡಲಾಗುವುದು.

ವಾಸವಿ ಜಲಶಕ್ತಿ ಯೋಜನೆಯ ಅರ್ಹತೆಗಳು

1) ಈ ಯೋಜನೆಯಡಿ 2 ರಿಂದ 05 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ-ಸಹಾಯಧನವನ್ನು ನೀಡಲಾಗುವುದು.
2) ಅರ್ಜಿದಾರರಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.
3) ಅರ್ಜಿದಾರರು 21 ವರ್ಷ ಮೇಲ್ಪಟ್ಟು 50 ವರ್ಷದ ಒಳಗಿನವರಾಗಿರಬೇಕು.
4) ಈ ಯೋಜನೆಯಡಿ ಗರಿಷ್ಠ ರೂ.2,00,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದೀಕರಣಕ್ಕಾಗಿ ರೂ.50,000/-ಗಳಸಹಾಯಧನ ನೀಡಲಾಗುವುದು. 6 ತಿಂಗಳ ವಿರಾಮಾವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು

ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

1) ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು.
2) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. (ಈ ಯೋಜನೆಗೆ ಸಂಬಂಧಪಟ್ಟಂತೆ ಸಿ.ಇ.ಟಿ ಪರೀಕ್ಷೆಯ ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದು)

ಸಂಪರ್ಕ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ಸಂಖ್ಯೆ:-080-29605761.
ನಿಗಮದ ಸಹಾಯವಾಣಿ: 94484 51111 (ಬೆಳಿಗ್ಗೆ 10.00 ರಿಂದ ಸಂಜೆ 5.30 ವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕ ಕಚೇರಿ, ಬೆಂಗಳೂರು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೆಂಗಳೂರಿನಲ್ಲಿ ಮಳೆ ಅವಾಂತರ: ಬೌರಿಂಗ್ ಆಸ್ಪತ್ರೆ ಬಳಿ ಕಾಂಪೌಂಡ್ ಕುಸಿತ: ಇಬ್ಬರು ಮಕ್ಕಳು ಸೇರಿ 7 ಮಂದಿ ಬೀದಿಬದಿಯ ವ್ಯಾಪಾರಿಗಳ ದುರ್ಮರಣ

ರಾಜ್ಯ ರಾಜಧಾನಿಯಲ್ಲಿ ಅಬ್ಬರಿಸಿದ ಬಿರುಗಾಳಿ ಸಹಿತ ಭಾರಿ ಮಳೆ ಇಂದು ಮಹಾ ದುರಂತವನ್ನೇ ಸೃಷ್ಟಿಸಿದೆ. ನಗರದ ಬೌರಿಂಗ್ ಆಸ್ಪತ್ರೆ ಸಮೀಪದ…

12 hours ago

101.31 ಲಕ್ಷ ಗ್ರಾಮೀಣ ಕುಟುಂಬಗಳ ಪೈಕಿ 88.06 ಮನೆಗಳಿಗೆ ನಳಸಂಪರ್ಕ- ಸಚಿವ ಪ್ರಿಯಾಂಕ್ ಖರ್ಗೆ

ಕೇಂದ್ರ ಜಲಶಕ್ತಿ ಸಚಿವಾಲಯ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಜಲ ಜೀವನ ಮಿಷನ್ 2.0 ಯೋಜನೆಗೆ ಸಂಬಂಧಿಸಿದ…

13 hours ago

ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಕೋರ್ಸ್ ಗಳ ದಾಖಲಾತಿಗಾಗಿ ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ಅಡಿಯಲ್ಲಿನ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಪದವಿ ಪೂರ್ವ ವಿಜ್ಞಾನ ವಸತಿ ಕಾಲೇಜುಗಳ 2026-27ನೇ…

14 hours ago

ಎರಡು ಸಾವಿರ ನಿವೇಶನ ಸಿದ್ಧಪಡಿಸಲು ಗಡುವು-ಸಚಿವ ಕೆ.ಎಚ್ ಮುನಿಯಪ್ಪ

ದೆವನಹಳ್ಳಿ: ದೇವನಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅರ್ಹ ಫಲಾನುಭವಿಗಳಿಗೆ ನಿವೇಶನ ಹಂಚಿಕೆ ಮಾಡುವ ಸಂಬಂಧ ಮೇ 15 ರೊಳಗೆ ಎರಡು…

14 hours ago

ಬೇಸಿಗೆ ಬಿಸಿಲು: ನಮ್ಮ ರಾಜ್ಯ ಮತ್ತು ದೇಶ ಅಕ್ಷರಶಃ ಬೆಂಕಿಯಂತೆ ಸುಡುತ್ತಿದೆ – ಸಚಿವ ಪ್ರಿಯಾಂಕ್ ಖರ್ಗೆ

ಇದು ಈಗ “ಬೇಸಿಗೆ ಬಿಸಿಲು” ಮಾತ್ರವಲ್ಲ; ಇದು ಸಾರ್ವಜನಿಕ ಆರೋಗ್ಯ ಮತ್ತು ಆರ್ಥಿಕ ಬಿಕ್ಕಟ್ಟಾಗಿ ರೂಪಾಂತರಗೊಳ್ಳುವ ಮುನ್ಸೂಚನೆ ನೀಡುತ್ತಿದೆ ಎಂದು…

19 hours ago

ತಾಲೂಕು ಜೆಡಿಎಸ್ ಗೆ ಹೊಸ ಟೀಂ: ಮುಂದೆ ಮುನೇಗೌಡರ ನಡೆ ಏನು…? “ಪಬ್ಲಿಕ್ ಮಿರ್ಚಿ” ಜೊತೆ ಮುನೇಗೌಡರ ಮನದಾಳದ ಮಾತೇನು..? ನೂತನ ಸಾರಥಿ ಹರೀಶ್ ಗೌಡ ಹೇಳಿದ್ದೇನು…?

ಪಕ್ಷ ನಿಂತ ನೀರಲ್ಲ ಎಂಬುದನ್ನು ಸಾಬೀತುಪಡಿಸಲು ಜನತಾದಳ (ಜಾತ್ಯತೀತ) ಪಕ್ಷದಲ್ಲಿ ಇತ್ತೀಚೆಗೆ ಹಲವು ಬದಲಾವಣೆಗಳನ್ನು ತರಲಾಗಿದೆ.. ರಾಜ್ಯ, ಜಿಲ್ಲಾ ಹಾಗೂ…

23 hours ago