ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ವಿಳಾಸ‌ kacdc.karnataka.gov.ing ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಸೆ.18ಕ್ಕೆ ಕೊನೆ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು

1) ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು
2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು)
3) ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು
4) ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು,
5) ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು.
6) ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33%, ವಿಕಲಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗಿಗಳಿಗೆ ಶೇ.5% ಮೀಸಲಾತಿ ಇರಿಸಿದೆ.
7) ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)

ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯ ಅರ್ಹತೆಗಳು

1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3,00,000/-ಗಳ ಮಿತಿಯೊಳಗಿರಬೇಕು.
2) ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು.
3) ಈ ಯೋಜನೆಯಲ್ಲಿ ಕನಿಷ್ಠ ರೂ.50,000/- ಗಳಿಂದ ಗರಿಷ್ಠ ರೂ.1,00,000/-ಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.20 ರಷ್ಟು ಸಹಾಯಧನ ಹಾಗೂ ಶೇ.80ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು, 2 ತಿಂಗಳ ವಿರಾಮ ಅವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆಯ ಅರ್ಹತೆಗಳು

1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.
2) ಅರ್ಜಿದಾರರು 21 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು.
3) ಈ ಯೋಜನೆಯಡಿ ಆಹಾರ ವಾಹಿನಿ ಪ್ರಾರಂಭಿಸಲು ಬ್ಯಾಂಕ್/ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಗರಿಷ್ಠ ರೂ.2,00,000/-ಗಳ ಸಹಾಯಧನವನ್ನು ನೀಡಲಾಗುವುದು.

ವಾಸವಿ ಜಲಶಕ್ತಿ ಯೋಜನೆಯ ಅರ್ಹತೆಗಳು

1) ಈ ಯೋಜನೆಯಡಿ 2 ರಿಂದ 05 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ-ಸಹಾಯಧನವನ್ನು ನೀಡಲಾಗುವುದು.
2) ಅರ್ಜಿದಾರರಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.
3) ಅರ್ಜಿದಾರರು 21 ವರ್ಷ ಮೇಲ್ಪಟ್ಟು 50 ವರ್ಷದ ಒಳಗಿನವರಾಗಿರಬೇಕು.
4) ಈ ಯೋಜನೆಯಡಿ ಗರಿಷ್ಠ ರೂ.2,00,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದೀಕರಣಕ್ಕಾಗಿ ರೂ.50,000/-ಗಳಸಹಾಯಧನ ನೀಡಲಾಗುವುದು. 6 ತಿಂಗಳ ವಿರಾಮಾವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು

ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

1) ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು.
2) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. (ಈ ಯೋಜನೆಗೆ ಸಂಬಂಧಪಟ್ಟಂತೆ ಸಿ.ಇ.ಟಿ ಪರೀಕ್ಷೆಯ ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದು)

ಸಂಪರ್ಕ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ಸಂಖ್ಯೆ:-080-29605761.
ನಿಗಮದ ಸಹಾಯವಾಣಿ: 94484 51111 (ಬೆಳಿಗ್ಗೆ 10.00 ರಿಂದ ಸಂಜೆ 5.30 ವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕ ಕಚೇರಿ, ಬೆಂಗಳೂರು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಬೈಕ್‌ಗೆ ಟಿಟಿ ವಾಹನ ಡಿಕ್ಕಿ ಪ್ರಕರಣ: ಇಬ್ಬರು ಯುವತಿಯರ ದುರ್ಮರಣ – ಮೃತರ ಕಣ್ಣು ದಾನ ಮಾಡಿ ಸಾರ್ಥಕತೆ ಮೆರೆದ ಕುಟುಂಬಸ್ಥರು

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…

1 hour ago

ಬೈಕ್ ಗೆ ಟಿಟಿ ವಾಹನ ಡಿಕ್ಕಿ: ಮಹಿಳೆ ಸಾವು: ಮತ್ತೋರ್ವ ಯುವತಿಗೆ ಗಂಭೀರ ಗಾಯ

ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ‌ ಬಾಶೆಟ್ಟಿಹಳ್ಳಿ ಕೈಗಾರಿಕಾ…

6 hours ago

ಹೆಣ್ಣು ಕೊಟ್ಟ ಮಾವನನ್ನೇ ಕೊಲೆಗೈದ ಅಳಿಯ

ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…

8 hours ago

ಕರ್ನಾಟಕದ ಮುಖ್ಯಮಂತ್ರಿ  ಡಿಕೆ ಶಿವಕುಮಾರ್ ಅವರಿಗೊಂದು ಬಹಿರಂಗ ಪತ್ರ..

ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…

11 hours ago

ಕರ್ನಾಟಕ ಹೆಚ್ಚು ತೆರಿಗೆ ನೀಡುತ್ತಿದ್ದು, ಇಲ್ಲಿಗೆ ಹೆಚ್ಚು ಅನುದಾನ ಬರಬೇಕೆಂಬ ತತ್ವ- ಚಿಂತನೆ ಸರಿಯಲ್ಲ. ಇದೆಲ್ಲವನ್ನು ಹಣಕಾಸು ಆಯೋಗ ನಿರ್ಧರಿಸುತ್ತದೆ- ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್

ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್‌ಪ್ರೆಸ್‌ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…

1 day ago

ಕೃಷಿ ಹೊಂಡಗಳಲ್ಲಿ ಅನಾಹುತ ತಡೆಗೆ ಜಾಗೃತಿ ಸಭೆ: ಸುರಕ್ಷತೆಗೆ ಕಟ್ಟುನಿಟ್ಟಿನ ಸೂಚನೆ

ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…

1 day ago