ವಿವಿಧ ಸಾಲ ಸೌಲಭ್ಯಕ್ಕಾಗಿ ಅರ್ಜಿ ಆಹ್ವಾನ

ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ 2023-24ನೇ ಸಾಲಿನಲ್ಲಿ ಈ ಕೆಳಕಂಡ ಯೋಜನೆಗಳನ್ನು ಅನುಷ್ಠಾನಗೊಳಿಸಲಾಗುತ್ತಿದೆ ಹಾಗೂ ಈ ಯೋಜನೆಗಳಡಿ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‌ಲೈನ್ ವಿಳಾಸ‌ kacdc.karnataka.gov.ing ಮೂಲಕ ಅರ್ಜಿ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಸಲು ಸೆ.18ಕ್ಕೆ ಕೊನೆ ದಿನವಾಗಿರುತ್ತದೆ.

ಅರ್ಜಿ ಸಲ್ಲಿಸಲು ಇರಬೇಕಾದ ಸಾಮಾನ್ಯ ಅರ್ಹತೆಗಳು

1) ಸಾಮಾನ್ಯ ವರ್ಗದಲ್ಲಿ ಆರ್ಯ ವೈಶ್ಯ ಸಮುದಾಯಕ್ಕೆ ಸೇರಿರಬೇಕು
2) ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಮೂನೆ-ಜಿ ಯಲ್ಲಿ ಪಡೆದಿರಬೇಕು (ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು)
3) ಅರ್ಜಿದಾರರು ಕರ್ನಾಟಕ ರಾಜ್ಯದವರಾಗಿರಬೇಕು ಹಾಗೂ ಅವರ ಖಾಯಂ ವಿಳಾಸವು ಕರ್ನಾಟಕ ರಾಜ್ಯದಲ್ಲಿರಬೇಕು
4) ಅರ್ಜಿದಾರರು ತಮ್ಮ ಆಧಾರ್ ಸಂಖ್ಯೆಗೆ ತಮ್ಮ ಮೊಬೈಲ್ ಸಂಖ್ಯೆಯನ್ನು ಜೋಡಣೆ ಮಾಡಿರಬೇಕು,
5) ಅರ್ಜಿದಾರರು ತಮ್ಮ ಬ್ಯಾಂಕ್ ಖಾತೆಗೆ ಆಧಾರ್ ಸಂಖ್ಯೆಯನ್ನು ಸೀಡ್ ಮಾಡಿಸಿರಬೇಕು.
6) ಆಯ್ಕೆ ಮಾಡುವಾಗ ಮಹಿಳೆಯರಿಗೆ ಶೇ.33%, ವಿಕಲಚೇತನರಿಗೆ ಶೇ.5% ಹಾಗೂ ತೃತೀಯ ಲಿಂಗಿಗಳಿಗೆ ಶೇ.5% ಮೀಸಲಾತಿ ಇರಿಸಿದೆ.
7) ಒಂದು ಕುಟುಂಬದಲ್ಲಿ ಒಬ್ಬರು ಮಾತ್ರ ಸಾಲ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. (ಅರಿವು ಶೈಕ್ಷಣಿಕ ಸಾಲ ಯೋಜನೆಯಲ್ಲಿ ಮಾತ್ರ ಇಬ್ಬರಿಗೆ ಅವಕಾಶವಿರುತ್ತದೆ.)

ಸ್ವಯಂ-ಉದ್ಯೋಗ ನೇರ ಸಾಲ ಯೋಜನೆಯ ಅರ್ಹತೆಗಳು

1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.3,00,000/-ಗಳ ಮಿತಿಯೊಳಗಿರಬೇಕು.
2) ಅರ್ಜಿದಾರರು 18 ವರ್ಷ ಮೇಲ್ಪಟ್ಟು 45 ವರ್ಷದ ಒಳಗಿನವರಾಗಿರಬೇಕು.
3) ಈ ಯೋಜನೆಯಲ್ಲಿ ಕನಿಷ್ಠ ರೂ.50,000/- ಗಳಿಂದ ಗರಿಷ್ಠ ರೂ.1,00,000/-ಗಳ ಸಾಲ ಒದಗಿಸಲಾಗುವುದು. ಈ ಮೊತ್ತದಲ್ಲಿ ಶೇ.20 ರಷ್ಟು ಸಹಾಯಧನ ಹಾಗೂ ಶೇ.80ರಷ್ಟು ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಮಂಜೂರು ಮಾಡಲಾಗುವುದು, 2 ತಿಂಗಳ ವಿರಾಮ ಅವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಆರ್ಯ ವೈಶ್ಯ ಆಹಾರ ವಾಹಿನಿ ಯೋಜನೆಯ ಅರ್ಹತೆಗಳು

1) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.
2) ಅರ್ಜಿದಾರರು 21 ವರ್ಷ ಮೇಲ್ಪಟ್ಟು 55 ವರ್ಷದ ಒಳಗಿನವರಾಗಿರಬೇಕು.
3) ಈ ಯೋಜನೆಯಡಿ ಆಹಾರ ವಾಹಿನಿ ಪ್ರಾರಂಭಿಸಲು ಬ್ಯಾಂಕ್/ಸಹಕಾರಿ ಸಂಘಗಳಿಂದ ಸಾಲ ಪಡೆಯಬೇಕು ಹಾಗೂ ನಿಗಮದಿಂದ ಗರಿಷ್ಠ ರೂ.2,00,000/-ಗಳ ಸಹಾಯಧನವನ್ನು ನೀಡಲಾಗುವುದು.

ವಾಸವಿ ಜಲಶಕ್ತಿ ಯೋಜನೆಯ ಅರ್ಹತೆಗಳು

1) ಈ ಯೋಜನೆಯಡಿ 2 ರಿಂದ 05 ಎಕರೆ ಕೃಷಿ ಭೂಮಿ ಹೊಂದಿರುವವರಿಗೆ ನೀರಾವರಿ ಸೌಲಭ್ಯವನ್ನು ಒದಗಿಸಲು ಸಾಲ-ಸಹಾಯಧನವನ್ನು ನೀಡಲಾಗುವುದು.
2) ಅರ್ಜಿದಾರರಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು.
3) ಅರ್ಜಿದಾರರು 21 ವರ್ಷ ಮೇಲ್ಪಟ್ಟು 50 ವರ್ಷದ ಒಳಗಿನವರಾಗಿರಬೇಕು.
4) ಈ ಯೋಜನೆಯಡಿ ಗರಿಷ್ಠ ರೂ.2,00,000/-ಗಳ ಸಾಲವನ್ನು ವಾರ್ಷಿಕ ಶೇ.4ರ ಬಡ್ಡಿದರದಲ್ಲಿ ಒದಗಿಸಲಾಗುವುದು ಹಾಗೂ ವಿದ್ಯುದೀಕರಣಕ್ಕಾಗಿ ರೂ.50,000/-ಗಳಸಹಾಯಧನ ನೀಡಲಾಗುವುದು. 6 ತಿಂಗಳ ವಿರಾಮಾವಧಿ ಇರುತ್ತದೆ ನಂತರ ಸಾಲವನ್ನು 34 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

ಅರಿವು ಶೈಕ್ಷಣಿಕ ಸಾಲ ಯೋಜನೆಯ ಅರ್ಹತೆಗಳು

ಈ ಯೋಜನೆಯಲ್ಲಿ ಸಿ.ಇ.ಟಿ./ಎನ್.ಇ.ಇ.ಟಿ ಪ್ರವೇಶ ಪರೀಕ್ಷೆಯಲ್ಲಿ ಉತ್ತೀರ್ಣರಾಗಿ ವೃತ್ತಿಪರ ಕೋರ್ಸ್ ಹಾಗೂ ಪಿ.ಹೆಚ್.ಡಿನಲ್ಲಿ ವ್ಯಾಸಂಗ ಮಾಡುವ ಆರ್ಯ ವೈಶ್ಯ ವಿದ್ಯಾರ್ಥಿಗಳಿಗೆ ವಾರ್ಷಿಕ ರೂ.1,00,000/-ಗಳ ಸಾಲವನ್ನು ಶೇ.2ರ ಬಡ್ಡಿದರದಲ್ಲಿ ಶೈಕ್ಷಣಿಕ ಸಾಲ ನೀಡಲಾಗುವುದು. ವ್ಯಾಸಂಗ ಪೂರ್ಣಗೊಂಡ ನಂತರ 04 ತಿಂಗಳ ವಿರಾಮಾವಧಿ ಇರುತ್ತದೆ. ನಂತರ ಸಾಲವನ್ನು 36 ಮಾಸಿಕ ಕಂತುಗಳಲ್ಲಿ ಮರುಪಾವತಿಸಬೇಕು.

1) ಅರ್ಜಿದಾರರು 18 ವರ್ಷ ಮೇಲ್ಪಟ್ಟು 35 ವರ್ಷದ ಒಳಗಿನವರಾಗಿರಬೇಕು.
2) ಅರ್ಜಿದಾರರ ಕುಟುಂಬದ ವಾರ್ಷಿಕ ವರಮಾನ ಗ್ರಾಮಾಂತರ ಮತ್ತು ನಗರ ಪ್ರದೇಶದವರಿಗೆ ರೂ.6,00,000/-ಗಳ ಮಿತಿಯೊಳಗಿರಬೇಕು. (ಈ ಯೋಜನೆಗೆ ಸಂಬಂಧಪಟ್ಟಂತೆ ಸಿ.ಇ.ಟಿ ಪರೀಕ್ಷೆಯ ಕೌನ್ಸಿಲಿಂಗ್ ಮುಗಿದ ನಂತರ ಅರ್ಜಿಗಳನ್ನು ಸ್ವೀಕರಿಸಲಾಗುವುದು)

ಸಂಪರ್ಕ ವಿವರ

ಬೆಂಗಳೂರು ಗ್ರಾಮಾಂತರ ಜಿಲ್ಲಾ ಕಚೇರಿ ಸಂಖ್ಯೆ:-080-29605761.
ನಿಗಮದ ಸಹಾಯವಾಣಿ: 94484 51111 (ಬೆಳಿಗ್ಗೆ 10.00 ರಿಂದ ಸಂಜೆ 5.30 ವರೆಗೆ ಸಂಪರ್ಕಿಸಬಹುದಾಗಿದೆ). ಯೋಜನೆಗಳ ಮಾರ್ಗಸೂಚಿಗಳು, ಸಲ್ಲಿಸಬೇಕಾದ ದಾಖಲೆಗಳು, ಜಿಲ್ಲಾ ವ್ಯವಸ್ಥಾಪಕ ಕಚೇರಿ, ಬೆಂಗಳೂರು ಎಂದು ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Ramesh Babu

Journalist

Recent Posts

ಸಾಹಿತ್ಯ ಪರಿಷತ್ ಚುನಾವಣೆ…..

ಸಾಹಿತ್ಯ ಪರಿಷತ್ ಚುನಾವಣೆ..... ನನ್ನ ಮತ........? ಕನ್ನಡ ಸಾಹಿತ್ಯ ಪರಿಷತ್ತಿನ ಚುನಾವಣೆ ಕನ್ನಡದ ಅಸ್ಮಿತೆಗೊಂದು ಸವಾಲು. ಭ್ರಷ್ಟರ ವಿರುದ್ಧ ಪ್ರಾಮಾಣಿಕರು,…

4 hours ago

ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಬೆಂಗಳೂರು ಗ್ರಾಮಾಂತರದ ಇಬ್ಬರು ಶಿಕ್ಷಕರು ಆಯ್ಕೆ

ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…

14 hours ago

ಮೇಕೆದಾಟು ಯೋಜನೆ ಶೀಘ್ರ ಜಾರಿಗೆ ಸಚಿವರ ದೃಢ ಸಂಕಲ್ಪ: ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…

16 hours ago

ಶ್ರೀರಂಗವನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಸಂಭ್ರಮ

ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…

16 hours ago

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2026: ಹಕ್ಕು,ಆಕ್ಷೇಪಣೆ ಸಲ್ಲಿಕೆಗೆ ಸೆ. 23 ವರೆಗೆ ಅವಕಾಶ-ಡಿಸಿ ಅನುರಾಧ

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…

18 hours ago

ರೈಲು ಡಿಕ್ಕಿಗೆ ಅಪರಿಚಿತ ವ್ಯಕ್ತಿ ಬಲಿ

ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…

21 hours ago