Categories: ರಾಜ್ಯ

ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆ ಜಾರಿ: 70 ಸಾವಿರ ಯುವಕ – ಯುವತಿಯರು ಯೋಜನೆಗೆ ನೋಂದಣಿ- ಸಿಎಂ ಸಿದ್ದರಾಮಯ್ಯ

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದರು.

ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.

ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು, ಯುವತಿಯರು 130 ಕೋಟಿ 28 ಲಕ್ಷ ಉಚಿತ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. 1 ಕೋಟಿ 65 ಲಕ್ಷ ಕುಟುಂಬಗಳಿಗೆ ಉಚಿತವಾಗಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಈ ಕುಟುಂಬಗಳು ನಯಾಪೈಸೆ ವಿದ್ಯುತ್ ಬಿಲ್ ಕಟ್ಟುವ ಹಾಗಿಲ್ಲ. ಇದೇ ರೀತಿ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ಪ್ರತೀ ಕುಟುಂಬಗಳಿಗೆ ಕೊಡುತ್ತಿದ್ದೇವೆ. 1 ಕೋಟಿ 17 ಲಕ್ಷ ಮಹಿಳೆಯರಿಗೆ, ಯುವತಿಯರಿಗೆ ಪ್ರತೀ ತಿಂಗಳು 2,000 ರೂ ತಲುಪಿಸುತ್ತಿದ್ದೇವೆ‌.  ಇಂಥ ಸಾಧನೆ ಹಿಂದೆ ಯಾವ ಕಾಲದಲ್ಲೂ ಆಗಿಲ್ಲ. ಇದನ್ನೆಲ್ಲಾ ಮಾಡಿದ್ದು ನಾವು. ನಮ್ಮದು ನುಡಿದಂತೆ ಮಾಡಿ ತೋರಿಸಿದ ಸರ್ಕಾರ ಎಂದು ಹೇಳಿದ್ದಾರೆ.

ಇಂದು ಯುವನಿಧಿ ಜಾರಿ ಮಾಡಿದ್ದೇವೆ. ಯುವಕ ಯುವತಿಯರಿಗೆ ಹಣದ ಜತೆಗೆ ಉದ್ಯೋಗ ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯ ತರಬೇತಿಯನ್ನೂ ನೀಡಿ ಅವರಿಗೆ ಉದ್ಯೋಗ ಕೊಡಿಸುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ. ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಈ ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.

ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆಯನ್ನು ನಾವು ಜಾರಿ ಮಾಡಿದ್ದೇವೆ. ಈಗಾಗಲೇ 70 ಸಾವಿರ ಯುವಕ – ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ‌. ರಾಜೀವ್ ಗಾಂಧಿ ಅವರು ದೇಶದ ಯುವಕರ ಭವಿಷ್ಯಕ್ಕಾಗಿ ಸದಾ ತುಡಿಯುತ್ತಿದ್ದರು. ಅವರ ಆಶಯಕ್ಕೆ ಪೂರಕವಾಗಿ ಯುವನಿಧಿ ಯೋಜನೆ ಮತ್ತು ನಮ್ಮ ಸರ್ಕಾರ ಕೆಲಸ ಮಾಡಲಿದೆ. ಪ್ರತಿ ನಿರುದ್ಯೋಗಿ ಯುವಕ ಯುವತಿಯರು ಯೋಜನೆಗೆ ನೋಂದಾಯಿಸಿಕೊಂಡು ಅನುಕೂಲ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ತಿಳಿಸಿದರು. 1985ರಲ್ಲಿ ರಾಜೀವ್ ಗಾಂಧಿ ಅವರು ದೇಶದಲ್ಲಿ ಮೊದಲ ಬಾರಿಗೆ ವಿವೇಕಾನಂದ ಜಯಂತಿಯನ್ನು ಆರಂಭಿಸಿದರು ಎಂದರು.

ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಭಾಷಣ ಮಾಡಿದರೆ ಸಾಲದು. ಅದಕ್ಕೆ ಕಾರ್ಯಕ್ರಮಗಳನ್ನು ರೂಪಿಸಬೇಕು, ಜಾರಿಗೆ ತರಬೇಕು. ನಮ್ಮ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಅದನ್ನೇ. ಹೋರಾಟದ ಹಿನ್ನೆಲೆಯ ಜಿಲ್ಲೆ ಶಿವಮೊಗ್ಗದಿಂದಲೇ “ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ” ಆಗಲಿ. ಇದಕ್ಕಾಗಿ ಜನಚಳವಳಿ ನಡೆಯಲಿ ಎಂದು ಹೇಳಿದರು.

Ramesh Babu

Journalist

Recent Posts

ನಾಳೆ(ಮಾರ್ಚ್ 11ರಿಂದ) ರಾಜ್ಯ ಸರ್ಕಾರಿ ಆಸ್ಪತ್ರೆಗಳ ವೈದ್ಯರ‌ ಮುಷ್ಕರ: ಸರ್ಕಾರಿ ಆಸ್ಪತ್ರೆಗಳಲ್ಲಿ ಓಪಿಡಿ ಸೇವೆಗಳು ಸ್ಥಗಿತ ಸಾಧ್ಯತೆ

ಕರ್ನಾಟಕದ ಸರ್ಕಾರಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ಮಾರ್ಚ್ 11ರಿಂದ ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು…

18 minutes ago

ಮಾ.19 ರಿಂದ ಮಾ.22ರವರೆಗೆ ಮೇಲಿನ ಜೂಗಾನಹಳ್ಳಿಯಲ್ಲಿ ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟ್ ಆಯೋಜನೆ

ಮೇಲಿನ ಜೂಗಾನಹಳ್ಳಿ ಕ್ರಿಕೆಟರ್ಸ್ ವತಿಯಿಂದ (ದಿವಂಗತ ಡಾ. ಪುನಿತ್ ರಾಜ್‌ಕುಮಾರ್‌ ಸವಿನೆನಪಿಗಾಗಿ) ವಿಕ್ಕಿ ಬಾಲ್ ಕ್ರಿಕೆಟ್ ಟೂರ್ನಿಮೆಂಟನ್ನು ಮಾ.19 ರಿಂದ…

38 minutes ago

25 ವರ್ಷಗಳ ನಂತರ ತಮಗೆ ಶಿಕ್ಷಣ ನೀಡಿದ ಗುರುಗಳ ಪಾದಪೂಜೆ

ನನ್ನ ಶಾಲೆ ನನ್ನ ಜವಾಬ್ದಾರಿ ಎಂಬ ಧ್ಯೇಯ ವಾಕ್ಯದೊಂದಿಗೆ ತಾನು ಓದಿದ ಸರ್ಕಾರಿ ಶಾಲೆಯ ಪರಿಸ್ಥಿತಿ ಹೇಗಿದೆ ಎಂಬುದನ್ನು ಹಿಂದಿರುಗಿ…

3 hours ago

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರ: ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ

ಮುಂದಿದ್ದ ವಾಹನವನ್ನ ಹಿಂದಿಕ್ಕುವ ಭರದಲ್ಲಿ ನಿಯಂತ್ರಣ ತಪ್ಪಿದ ಸರಕು ಸಾಗಣೆಯ ಟೆಂಪೋ ವಿದ್ಯುತ್ ಪ್ರಸರಣ ಕೇಂದ್ರಕ್ಕೆ ಡಿಕ್ಕಿ ಹೊಡೆದಿರುವ ಘಟನೆ…

4 hours ago

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

13 hours ago