ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದರು.
ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.
ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು, ಯುವತಿಯರು 130 ಕೋಟಿ 28 ಲಕ್ಷ ಉಚಿತ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. 1 ಕೋಟಿ 65 ಲಕ್ಷ ಕುಟುಂಬಗಳಿಗೆ ಉಚಿತವಾಗಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಈ ಕುಟುಂಬಗಳು ನಯಾಪೈಸೆ ವಿದ್ಯುತ್ ಬಿಲ್ ಕಟ್ಟುವ ಹಾಗಿಲ್ಲ. ಇದೇ ರೀತಿ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ಪ್ರತೀ ಕುಟುಂಬಗಳಿಗೆ ಕೊಡುತ್ತಿದ್ದೇವೆ. 1 ಕೋಟಿ 17 ಲಕ್ಷ ಮಹಿಳೆಯರಿಗೆ, ಯುವತಿಯರಿಗೆ ಪ್ರತೀ ತಿಂಗಳು 2,000 ರೂ ತಲುಪಿಸುತ್ತಿದ್ದೇವೆ. ಇಂಥ ಸಾಧನೆ ಹಿಂದೆ ಯಾವ ಕಾಲದಲ್ಲೂ ಆಗಿಲ್ಲ. ಇದನ್ನೆಲ್ಲಾ ಮಾಡಿದ್ದು ನಾವು. ನಮ್ಮದು ನುಡಿದಂತೆ ಮಾಡಿ ತೋರಿಸಿದ ಸರ್ಕಾರ ಎಂದು ಹೇಳಿದ್ದಾರೆ.
ಇಂದು ಯುವನಿಧಿ ಜಾರಿ ಮಾಡಿದ್ದೇವೆ. ಯುವಕ ಯುವತಿಯರಿಗೆ ಹಣದ ಜತೆಗೆ ಉದ್ಯೋಗ ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯ ತರಬೇತಿಯನ್ನೂ ನೀಡಿ ಅವರಿಗೆ ಉದ್ಯೋಗ ಕೊಡಿಸುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ. ಯುವಕ ಯುವತಿಯರು ಭ್ರಮನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಈ ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.
ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆಯನ್ನು ನಾವು ಜಾರಿ ಮಾಡಿದ್ದೇವೆ. ಈಗಾಗಲೇ 70 ಸಾವಿರ ಯುವಕ – ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾಜೀವ್ ಗಾಂಧಿ ಅವರು ದೇಶದ ಯುವಕರ ಭವಿಷ್ಯಕ್ಕಾಗಿ ಸದಾ ತುಡಿಯುತ್ತಿದ್ದರು. ಅವರ ಆಶಯಕ್ಕೆ ಪೂರಕವಾಗಿ ಯುವನಿಧಿ ಯೋಜನೆ ಮತ್ತು ನಮ್ಮ ಸರ್ಕಾರ ಕೆಲಸ ಮಾಡಲಿದೆ. ಪ್ರತಿ ನಿರುದ್ಯೋಗಿ ಯುವಕ ಯುವತಿಯರು ಯೋಜನೆಗೆ ನೋಂದಾಯಿಸಿಕೊಂಡು ಅನುಕೂಲ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ತಿಳಿಸಿದರು. 1985ರಲ್ಲಿ ರಾಜೀವ್ ಗಾಂಧಿ ಅವರು ದೇಶದಲ್ಲಿ ಮೊದಲ ಬಾರಿಗೆ ವಿವೇಕಾನಂದ ಜಯಂತಿಯನ್ನು ಆರಂಭಿಸಿದರು ಎಂದರು.
ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಭಾಷಣ ಮಾಡಿದರೆ ಸಾಲದು. ಅದಕ್ಕೆ ಕಾರ್ಯಕ್ರಮಗಳನ್ನು ರೂಪಿಸಬೇಕು, ಜಾರಿಗೆ ತರಬೇಕು. ನಮ್ಮ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಅದನ್ನೇ. ಹೋರಾಟದ ಹಿನ್ನೆಲೆಯ ಜಿಲ್ಲೆ ಶಿವಮೊಗ್ಗದಿಂದಲೇ “ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ” ಆಗಲಿ. ಇದಕ್ಕಾಗಿ ಜನಚಳವಳಿ ನಡೆಯಲಿ ಎಂದು ಹೇಳಿದರು.
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…
ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…