Categories: ರಾಜ್ಯ

ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆ ಜಾರಿ: 70 ಸಾವಿರ ಯುವಕ – ಯುವತಿಯರು ಯೋಜನೆಗೆ ನೋಂದಣಿ- ಸಿಎಂ ಸಿದ್ದರಾಮಯ್ಯ

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.

ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದರು.

ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.

ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು, ಯುವತಿಯರು 130 ಕೋಟಿ 28 ಲಕ್ಷ ಉಚಿತ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. 1 ಕೋಟಿ 65 ಲಕ್ಷ ಕುಟುಂಬಗಳಿಗೆ ಉಚಿತವಾಗಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಈ ಕುಟುಂಬಗಳು ನಯಾಪೈಸೆ ವಿದ್ಯುತ್ ಬಿಲ್ ಕಟ್ಟುವ ಹಾಗಿಲ್ಲ. ಇದೇ ರೀತಿ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ಪ್ರತೀ ಕುಟುಂಬಗಳಿಗೆ ಕೊಡುತ್ತಿದ್ದೇವೆ. 1 ಕೋಟಿ 17 ಲಕ್ಷ ಮಹಿಳೆಯರಿಗೆ, ಯುವತಿಯರಿಗೆ ಪ್ರತೀ ತಿಂಗಳು 2,000 ರೂ ತಲುಪಿಸುತ್ತಿದ್ದೇವೆ‌.  ಇಂಥ ಸಾಧನೆ ಹಿಂದೆ ಯಾವ ಕಾಲದಲ್ಲೂ ಆಗಿಲ್ಲ. ಇದನ್ನೆಲ್ಲಾ ಮಾಡಿದ್ದು ನಾವು. ನಮ್ಮದು ನುಡಿದಂತೆ ಮಾಡಿ ತೋರಿಸಿದ ಸರ್ಕಾರ ಎಂದು ಹೇಳಿದ್ದಾರೆ.

ಇಂದು ಯುವನಿಧಿ ಜಾರಿ ಮಾಡಿದ್ದೇವೆ. ಯುವಕ ಯುವತಿಯರಿಗೆ ಹಣದ ಜತೆಗೆ ಉದ್ಯೋಗ ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯ ತರಬೇತಿಯನ್ನೂ ನೀಡಿ ಅವರಿಗೆ ಉದ್ಯೋಗ ಕೊಡಿಸುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ. ಯುವಕ ಯುವತಿಯರು ಭ್ರಮ‌ನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಈ ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.

ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆಯನ್ನು ನಾವು ಜಾರಿ ಮಾಡಿದ್ದೇವೆ. ಈಗಾಗಲೇ 70 ಸಾವಿರ ಯುವಕ – ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ‌. ರಾಜೀವ್ ಗಾಂಧಿ ಅವರು ದೇಶದ ಯುವಕರ ಭವಿಷ್ಯಕ್ಕಾಗಿ ಸದಾ ತುಡಿಯುತ್ತಿದ್ದರು. ಅವರ ಆಶಯಕ್ಕೆ ಪೂರಕವಾಗಿ ಯುವನಿಧಿ ಯೋಜನೆ ಮತ್ತು ನಮ್ಮ ಸರ್ಕಾರ ಕೆಲಸ ಮಾಡಲಿದೆ. ಪ್ರತಿ ನಿರುದ್ಯೋಗಿ ಯುವಕ ಯುವತಿಯರು ಯೋಜನೆಗೆ ನೋಂದಾಯಿಸಿಕೊಂಡು ಅನುಕೂಲ ಪಡೆದುಕೊಳ್ಳಬೇಕು ಎಂದು ತಿಳಿಸಿದರು.

ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ತಿಳಿಸಿದರು. 1985ರಲ್ಲಿ ರಾಜೀವ್ ಗಾಂಧಿ ಅವರು ದೇಶದಲ್ಲಿ ಮೊದಲ ಬಾರಿಗೆ ವಿವೇಕಾನಂದ ಜಯಂತಿಯನ್ನು ಆರಂಭಿಸಿದರು ಎಂದರು.

ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಭಾಷಣ ಮಾಡಿದರೆ ಸಾಲದು. ಅದಕ್ಕೆ ಕಾರ್ಯಕ್ರಮಗಳನ್ನು ರೂಪಿಸಬೇಕು, ಜಾರಿಗೆ ತರಬೇಕು. ನಮ್ಮ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಅದನ್ನೇ. ಹೋರಾಟದ ಹಿನ್ನೆಲೆಯ ಜಿಲ್ಲೆ ಶಿವಮೊಗ್ಗದಿಂದಲೇ “ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ” ಆಗಲಿ. ಇದಕ್ಕಾಗಿ ಜನಚಳವಳಿ ನಡೆಯಲಿ ಎಂದು ಹೇಳಿದರು.

Ramesh Babu

Journalist

Recent Posts

ಕ್ರೀಡಾ ಪ್ರತಿಭೆಗಳ ಅನಾವರಣಕ್ಕೆ ನ್ಯಾಷನಲ್ ಪ್ರೈಡ್ ಶಾಲೆಯಲ್ಲಿ ಹೊಸ ವೇದಿಕೆ ಒಂದೇ ಆವರಣದಲ್ಲಿ ಬಾಕ್ಸಿಂಗ್, ಕುಸ್ತಿ, ಜೂಡೋ, ಕಬ್ಬಡಿ, ಬ್ಯಾಡ್ಮಿಂಟನ್, ಸ್ಕೇಟಿಂಗ್ ಸೌಲಭ್ಯ

ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…

3 hours ago

ಶಾಲೆ ಬಿಟ್ಟ ಮಕ್ಕಳ ಪತ್ತೆಗೆ ಅಭಿಯಾನ: ವಲಸೆ ಕಾರ್ಮಿಕರ ಮಕ್ಕಳನ್ನು ಶಾಲೆಗೆ ಕರೆತರಲು ಕ್ರಮ

  ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…

8 hours ago

ಪಾಕಿಸ್ತಾನಿ ಗ್ಯಾಂಗ್‌ ಜೊತೆ ಸಂಪರ್ಕ ಆರೋಪ: ದೊಡ್ಡಬಳ್ಳಾಪುರದಲ್ಲಿ ವ್ಯಕ್ತಿ ಬಂಧನ

ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್‌ಸ್ಟರ್‌ಗಳೊಂದಿಗೆ ಇನ್‌ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…

1 day ago

ದೊಡ್ಡಬಳ್ಳಾಪುರದಲ್ಲಿ ವರಮಹಾಲಕ್ಷ್ಮಿ ಹಬ್ಬದ ಸಂಭ್ರಮ

ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…

2 days ago

ಘಾಟಿ ಕ್ಷೇತ್ರದಲ್ಲಿ ವರಮಹಾಲಕ್ಷ್ಮಿ ಸಂಭ್ರಮ; ಮಹಿಳೆಯರಿಗೆ ಬಳೆ, ಅರಶಿನ–ಕುಂಕುಮ ವಿತರಣೆ

ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…

2 days ago

ವರಮಹಾಲಕ್ಷ್ಮಿ ಹಬ್ಬ…..

ವರಮಹಾಲಕ್ಷ್ಮಿ ಹಬ್ಬ..... ಅವರವರ ನಂಬಿಕೆ, ಆಚರಣೆಗಳು ಅವರವರ ವೈಯಕ್ತಿಕ ಹಕ್ಕು ಮತ್ತು ಸ್ವಾತಂತ್ರ್ಯ. ಅದನ್ನು ಗೌರವಿಸುತ್ತಾ, ಅವರವರ ವಿವೇಚನೆಗೆ ಬಿಡುತ್ತಾ,....…

3 days ago