ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ಘೋಷಿಸಿದ್ದರು. ಇವರ ಜನ್ಮ ದಿನದಂದೇ ನನ್ನ ಯುವಕ ಯುವತಿಯರು ಭ್ರಮನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಯುವನಿಧಿ ಜಾರಿ ಮಾಡುತ್ತಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಶಿವಮೊಗ್ಗದಲ್ಲಿ ಲಕ್ಷಾಂತರ ಯುವಸಮೂಹದ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಐತಿಹಾಸಿಕ ಗ್ಯಾರಂಟಿ “ಯುವನಿಧಿ” ಯೋಜನೆಗೆ ಚಾಲನೆ ನೀಡಿ ಮಾತನಾಡಿದರು.
ನಾನು ಮತ್ತು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸುರ್ಜೇವಾಲ ಅವರು ಚುನಾವಣಾ ಪೂರ್ವ ಪ್ರಣಾಳಿಕೆಯಲ್ಲಿ ಘೋಷಿಸಿದಂತೆ ಐದೂ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದ್ದೇವೆ ಎಂದರು.
ನಿರುದ್ಯೋಗ ಸಮಸ್ಯೆ, ರೈತರ ಸಮಸ್ಯೆ ಹೆಚ್ಚಾಗಿ, ಆಹಾರ ಪದಾರ್ಥಗಳ ಬೆಲೆ ಗಗನಕ್ಕೆ ಏರಿರುವ ಸಂದರ್ಭದಲ್ಲಿ ಸಮಾಜದ ಎಲ್ಲಾ ವರ್ಗಗಳ ಸಮಸ್ಯೆಗೆ ಪರಿಹಾರವಾಗಿ ನಾವು ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆವು. ಪ್ರಣಾಳಿಕೆಯಲ್ಲಿ ಘೋಷಿಸಿದೆವು. ಘೋಷಿಸಿದಂತೆ ಜಾರಿ ಮಾಡಿದ್ದೇವೆ ಎಂದು ತಿಳಿಸಿದರು.
ಮೊದಲ ಗ್ಯಾರಂಟಿ ಶಕ್ತಿ ಯೋಜನೆಯಿಂದಾಗಿ ಮಹಿಳೆಯರು, ಯುವತಿಯರು 130 ಕೋಟಿ 28 ಲಕ್ಷ ಉಚಿತ ಟಿಕೆಟ್ ಪಡೆದು ಪ್ರಯಾಣ ಮಾಡಿದ್ದಾರೆ. 1 ಕೋಟಿ 65 ಲಕ್ಷ ಕುಟುಂಬಗಳಿಗೆ ಉಚಿತವಾಗಿ 200 ಯೂನಿಟ್ ವರೆಗೂ ಉಚಿತ ವಿದ್ಯುತ್ ನೀಡುತ್ತಿದ್ದೇವೆ. ಈ ಕುಟುಂಬಗಳು ನಯಾಪೈಸೆ ವಿದ್ಯುತ್ ಬಿಲ್ ಕಟ್ಟುವ ಹಾಗಿಲ್ಲ. ಇದೇ ರೀತಿ 5 ಕೆಜಿ ಅಕ್ಕಿ, 5 ಕೆಜಿ ಅಕ್ಕಿಯ ಬದಲಿಗೆ ಹಣವನ್ನು ಪ್ರತೀ ಕುಟುಂಬಗಳಿಗೆ ಕೊಡುತ್ತಿದ್ದೇವೆ. 1 ಕೋಟಿ 17 ಲಕ್ಷ ಮಹಿಳೆಯರಿಗೆ, ಯುವತಿಯರಿಗೆ ಪ್ರತೀ ತಿಂಗಳು 2,000 ರೂ ತಲುಪಿಸುತ್ತಿದ್ದೇವೆ. ಇಂಥ ಸಾಧನೆ ಹಿಂದೆ ಯಾವ ಕಾಲದಲ್ಲೂ ಆಗಿಲ್ಲ. ಇದನ್ನೆಲ್ಲಾ ಮಾಡಿದ್ದು ನಾವು. ನಮ್ಮದು ನುಡಿದಂತೆ ಮಾಡಿ ತೋರಿಸಿದ ಸರ್ಕಾರ ಎಂದು ಹೇಳಿದ್ದಾರೆ.
ಇಂದು ಯುವನಿಧಿ ಜಾರಿ ಮಾಡಿದ್ದೇವೆ. ಯುವಕ ಯುವತಿಯರಿಗೆ ಹಣದ ಜತೆಗೆ ಉದ್ಯೋಗ ಪಡೆದುಕೊಳ್ಳಲು ಅಗತ್ಯವಾದ ಕೌಶಲ್ಯ ತರಬೇತಿಯನ್ನೂ ನೀಡಿ ಅವರಿಗೆ ಉದ್ಯೋಗ ಕೊಡಿಸುವ ದಿಕ್ಕಿನಲ್ಲಿ ನಮ್ಮ ಪ್ರಯತ್ನ ಮುಂದುವರೆಯಲಿದೆ. ಯುವಕ ಯುವತಿಯರು ಭ್ರಮನಿರಸನರಾಗದಂತೆ ಅವರ ಭವಿಷ್ಯಕ್ಕೆ ಶಕ್ತಿ ತುಂಬುವ ಸಲುವಾಗಿ ಈ ಯುವನಿಧಿ ಯೋಜನೆ ಜಾರಿ ಮಾಡಿದ್ದೇವೆ ಎಂದರು.
ವಿವೇಕಾನಂದರ ಜನ್ಮ ದಿನದಂದೇ ಯುವನಿಧಿ ಯೋಜನೆಯನ್ನು ನಾವು ಜಾರಿ ಮಾಡಿದ್ದೇವೆ. ಈಗಾಗಲೇ 70 ಸಾವಿರ ಯುವಕ – ಯುವತಿಯರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ದಾರೆ. ರಾಜೀವ್ ಗಾಂಧಿ ಅವರು ದೇಶದ ಯುವಕರ ಭವಿಷ್ಯಕ್ಕಾಗಿ ಸದಾ ತುಡಿಯುತ್ತಿದ್ದರು. ಅವರ ಆಶಯಕ್ಕೆ ಪೂರಕವಾಗಿ ಯುವನಿಧಿ ಯೋಜನೆ ಮತ್ತು ನಮ್ಮ ಸರ್ಕಾರ ಕೆಲಸ ಮಾಡಲಿದೆ. ಪ್ರತಿ ನಿರುದ್ಯೋಗಿ ಯುವಕ ಯುವತಿಯರು ಯೋಜನೆಗೆ ನೋಂದಾಯಿಸಿಕೊಂಡು ಅನುಕೂಲ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಯಾವ ಧರ್ಮದಲ್ಲಿ ಹಸಿದವರಿಗೆ ಅನ್ನ ಕೊಡುವುದಿಲ್ಲವೋ ಅಂಥ ಧರ್ಮದಲ್ಲಿ ನನಗೆ ನಂಬಿಕೆ ಇಲ್ಲ ಎಂದು ವಿವೇಕಾನಂದರು ತಿಳಿಸಿದರು. 1985ರಲ್ಲಿ ರಾಜೀವ್ ಗಾಂಧಿ ಅವರು ದೇಶದಲ್ಲಿ ಮೊದಲ ಬಾರಿಗೆ ವಿವೇಕಾನಂದ ಜಯಂತಿಯನ್ನು ಆರಂಭಿಸಿದರು ಎಂದರು.
ಸಾಮಾಜಿಕ ನ್ಯಾಯದ ಬಗ್ಗೆ ಕೇವಲ ಭಾಷಣ ಮಾಡಿದರೆ ಸಾಲದು. ಅದಕ್ಕೆ ಕಾರ್ಯಕ್ರಮಗಳನ್ನು ರೂಪಿಸಬೇಕು, ಜಾರಿಗೆ ತರಬೇಕು. ನಮ್ಮ ಕಾಂಗ್ರೆಸ್ ಸರ್ಕಾರ ಮಾಡುತ್ತಿರುವುದು ಅದನ್ನೇ. ಹೋರಾಟದ ಹಿನ್ನೆಲೆಯ ಜಿಲ್ಲೆ ಶಿವಮೊಗ್ಗದಿಂದಲೇ “ರಾಜ್ಯ ಸರ್ವ ಜನಾಂಗದ ಶಾಂತಿಯ ತೋಟ” ಆಗಲಿ. ಇದಕ್ಕಾಗಿ ಜನಚಳವಳಿ ನಡೆಯಲಿ ಎಂದು ಹೇಳಿದರು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…