ವಿಶೇಷ ಚೇತನರಿಗೆ ಗುಣಮಟ್ಟದ ಸೇವೆಗಳನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ- ಆಯುಕ್ತ ದಾಸ್ ಸೂರ್ಯವಂಶಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿರುವ ವಿಕಲಚೇತನ ಪುನರ್ವಸತಿ ಕೇಂದ್ರದಲ್ಲಿ ಸಿಬಿಎಂ ಇಂಡಿಯಾ ಟ್ರಸ್ಟ್ ನಿಂದ ಆರ್ ಸಿಐನ 5ನೇ ಹಂತದ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಅಂಗವಿಕಲ ಹಕ್ಕುಗಳ ಅಧಿನಿಯಮದ ಆಯೋಗದ ಆಯುಕ್ತರಾದ ದಾಸ್ ಸೂರ್ಯವಂಶಿ ಅವರು ಉದ್ಘಾಟನೆ ಮಾಡಿದರು.

ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ, ಅನುಷ್ಠಾನ ಸಂಸ್ಥೆ ಬೆಂಗಳೂರು ಬ್ಯಾಪ್ಟಿಸ್ಟ್ ಆಸ್ಪತ್ರೆಯ ಅವರ ಸಹಯೋಗದಿಂದ ನಡೆಯುತ್ತಿರುವ ಪುನರ್ವಸತಿ ಕೇಂದ್ರ. ಸಮುದಾಯ ಆಧಾರಿತ ಅಂತರ್ಗತ ಅಭಿವೃದ್ಧಿ ಹಾಗೂ ಪುನರ್ವಸತಿ ಕೌನ್ಸಿಲ್ (CBID-RCI) ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು

ರಾಜ್ಯ ಅಂಗವಿಕಲ ಹಕ್ಕುಗಳ ಅಧಿನಿಯಮದ ಆಯೋಗದ ಆಯುಕ್ತರಾದ ದಾಸ್ ಸೂರ್ಯವಂಶಿ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರವು ( ಅನುಷ್ಠಾನ ಸಂಸ್ಥೆ ಬೆಂಗಳೂರು ಬ್ಯಾಪ್ಟಿಸ್ಟ್ ಆಸ್ಪತ್ರೆ) ಮಾದರಿ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ವಿಶೇಷ ಚೇತನ ಸಮುದಾಯಕ್ಕೆ ತಳಮಟ್ಟದಲ್ಲಿ ಸೇವೆಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪುನರ್ವಸತಿ ಕೇಂದ್ರಗಳನ್ನು ತೆರೆದು ವಿಶೇಷ ಚೇತನ ಮಕ್ಕಳಿಗೆ ವೈದ್ಯಕೀಯ ಹಾಗೂ ಸಮುದಾಯ ಆಧಾರಿತ ಸೇವೆಗಳನ್ನು ಉಚಿತವಾಗಿ ಒದಗಿಸುತ್ತಿರುವುದು ಅಮೋಘ ಸೇವೆಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರವು ಪ್ರಾದೇಶಿಕ ವಿಕಲಚೇತನ ಪುನರ್ವಸತಿ ಕೇಂದ್ರವಾಗಿ ಬದಲಾವಣೆ ಆಗಿರುವುದು ಈ ವಿಭಾಗದ ಜಿಲ್ಲೆಗಳಿಗೆ ಬಹು ಉಪಯುಕ್ತವಾಗಿದ್ದು, ಇದರ ಸೇವೆಗಳನ್ನು ಈ ಪ್ರಾದೇಶಿಕ ವಿಭಾಗದ ಇತರೆ ಜಿಲ್ಲೆಗಳಿಗೆ ಮಾದರಿಯಾಗಿದೆ.

ಡಿಸೆಂಬರ್ ತಿಂಗಳಿನಿಂದ ರಾಜ್ಯದಲ್ಲಿ ಮೊದಲ ಬಾರಿಗೆ ವಿಕಲಚೇತನರಿಗಾಗಿ ನೇರಳೆ ಹಬ್ಬ (Purple Festival)ವನ್ನು ಆಚರಿಸಿ ಒಂದು ಲಕ್ಷ ವಿಕಲಚೇತನರಿಗೆ ವಿವಿಧ ರೀತಿಯ ಸೇವೆಗಳನ್ನು ಒದಗಿಸಲು ಯೋಚಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಸಹಕಾರ ಮುಖ್ಯವಾಗಿರುತ್ತದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಿದರು.

ಹಾಗೆಯೇ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ವಿಕಲಚೇತನರು ಸ್ವ-ಸಹಾಯ ಸಂಘಗಳನ್ನು ಸ್ಥಾಪಿಸಿ ಸರ್ಕಾರದ ಯೋಜನೆಗಳ ಲಾಭಗಳನ್ನು ಪಡೆದು ಆರ್ಥಿಕವಾಗಿ ಸಬಲರಾಗಬೇಕಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸತೀಶ್ ಪಾಣಿ, ಸಿಬಿಎಂ ಇಂಡಿಯಾ ಟ್ರಸ್ಟ್ ನಿರ್ದೇಶಕರಾದ ಪೆರೋಲಿನ್ ಸೋಜಿ, ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ಕಾರ್ಯದರ್ಶಿಗಳಾದ ಕ್ಯಾರಲಿನ್ ಎಲಿಜಬೆತ್, ಸಂಯೋಜಕರು ಶಿವಾನಂದ ಹಾಗೂ ತರಬೇತಿ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯ ಹತ್ಯೆ

ಶಿವಮೊಗ್ಗದಲ್ಲಿ ಸ್ಪೆಷಲ್ ಕ್ಲಾಸ್ ಮುಗಿಸಿ ಮನೆಗೆ ಬರುತ್ತಿದ್ದ ಸಂಕೇತ್ ಎಂಬ ವಿದ್ಯಾರ್ಥಿಯನ್ನು ಹತ್ಯೆ ಮಾಡಲಾಗಿದೆ. ನನ್ನ ಮೊಮ್ಮಗ ಯಾರ ತಂಟೆಗೂ…

6 hours ago

ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು..! ಕುಟುಂಬದ ಹುಡುಗಿಯೊಬ್ಬಳ ಮಿಸ್ಸಿಂಗ್ ವಿಚಾರಕ್ಕೆ ಹಲ್ಲೆ.!

ವ್ಯಕ್ತಿಯ ಮೇಲೆ ಅತ್ಯಂತ ಕ್ರೂರವಾಗಿ ದೌರ್ಜನ್ಯ ನಡೆಸಿರುವ ಘಟನೆ ಮಂಡ್ಯದಲ್ಲಿ ನಡೆದಿದೆ... ಸೈಜುಗಲ್ಲಿನಿಂದ ಮನಸೋ ಇಚ್ಚೆ ಜಜ್ಜಿದ ಕಿಡಿಗೇಡಿಗಳು. ಮಂಡ್ಯದ…

6 hours ago

” ಮೊಬೈಲ್ ಬಿಡಿ – ಪುಸ್ತಕ ಹಿಡಿ “……..

" ಮೊಬೈಲ್ ಬಿಡಿ - ಪುಸ್ತಕ ಹಿಡಿ "........ ಕರ್ನಾಟಕ ಸರ್ಕಾರದ ಶಿಕ್ಷಣ ಇಲಾಖೆ ಹೀಗೊಂದು ಅಭಿಯಾನ ಶುರು ಮಾಡಿದೆ.…

9 hours ago

ಬೈಕ್-ಟಿಪ್ಪರ್ ನಡುವೆ ಅಪಘಾತ: ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವು, ಮತ್ತೋರ್ವನಿಗೆ ಗಂಭೀರ ಗಾಯ; ಆಸ್ಪತ್ರೆಗೆ ದಾಖಲು

ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…

20 hours ago

ರೈತರು ಇ-ಕೆವೈಸಿ ಮಾಡಿಸಲು ಕೃಷಿ ಇಲಾಖೆ ಸೂಚನೆ

ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…

22 hours ago

ಮನರೇಗಾ ಉಳಿಸಲು ಗ್ರಾ.ಪಂ ಮಟ್ಟದಲ್ಲೂ ಹೋರಾಟ- ಜಿಲ್ಲಾ ಎಸ್.ಟಿ ಕಾಂಗ್ರೆಸ್ ಅಧ್ಯಕ್ಷ ಮುನಿಕೃಷ್ಣಪ್ಪ

ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…

1 day ago