ವಿಶೇಷ ಚೇತನರಿಗೆ ಗುಣಮಟ್ಟದ ಸೇವೆಗಳನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ- ಆಯುಕ್ತ ದಾಸ್ ಸೂರ್ಯವಂಶಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿರುವ ವಿಕಲಚೇತನ ಪುನರ್ವಸತಿ ಕೇಂದ್ರದಲ್ಲಿ ಸಿಬಿಎಂ ಇಂಡಿಯಾ ಟ್ರಸ್ಟ್ ನಿಂದ ಆರ್ ಸಿಐನ 5ನೇ ಹಂತದ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಅಂಗವಿಕಲ ಹಕ್ಕುಗಳ ಅಧಿನಿಯಮದ ಆಯೋಗದ ಆಯುಕ್ತರಾದ ದಾಸ್ ಸೂರ್ಯವಂಶಿ ಅವರು ಉದ್ಘಾಟನೆ ಮಾಡಿದರು.

ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ, ಅನುಷ್ಠಾನ ಸಂಸ್ಥೆ ಬೆಂಗಳೂರು ಬ್ಯಾಪ್ಟಿಸ್ಟ್ ಆಸ್ಪತ್ರೆಯ ಅವರ ಸಹಯೋಗದಿಂದ ನಡೆಯುತ್ತಿರುವ ಪುನರ್ವಸತಿ ಕೇಂದ್ರ. ಸಮುದಾಯ ಆಧಾರಿತ ಅಂತರ್ಗತ ಅಭಿವೃದ್ಧಿ ಹಾಗೂ ಪುನರ್ವಸತಿ ಕೌನ್ಸಿಲ್ (CBID-RCI) ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು

ರಾಜ್ಯ ಅಂಗವಿಕಲ ಹಕ್ಕುಗಳ ಅಧಿನಿಯಮದ ಆಯೋಗದ ಆಯುಕ್ತರಾದ ದಾಸ್ ಸೂರ್ಯವಂಶಿ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರವು ( ಅನುಷ್ಠಾನ ಸಂಸ್ಥೆ ಬೆಂಗಳೂರು ಬ್ಯಾಪ್ಟಿಸ್ಟ್ ಆಸ್ಪತ್ರೆ) ಮಾದರಿ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ವಿಶೇಷ ಚೇತನ ಸಮುದಾಯಕ್ಕೆ ತಳಮಟ್ಟದಲ್ಲಿ ಸೇವೆಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪುನರ್ವಸತಿ ಕೇಂದ್ರಗಳನ್ನು ತೆರೆದು ವಿಶೇಷ ಚೇತನ ಮಕ್ಕಳಿಗೆ ವೈದ್ಯಕೀಯ ಹಾಗೂ ಸಮುದಾಯ ಆಧಾರಿತ ಸೇವೆಗಳನ್ನು ಉಚಿತವಾಗಿ ಒದಗಿಸುತ್ತಿರುವುದು ಅಮೋಘ ಸೇವೆಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರವು ಪ್ರಾದೇಶಿಕ ವಿಕಲಚೇತನ ಪುನರ್ವಸತಿ ಕೇಂದ್ರವಾಗಿ ಬದಲಾವಣೆ ಆಗಿರುವುದು ಈ ವಿಭಾಗದ ಜಿಲ್ಲೆಗಳಿಗೆ ಬಹು ಉಪಯುಕ್ತವಾಗಿದ್ದು, ಇದರ ಸೇವೆಗಳನ್ನು ಈ ಪ್ರಾದೇಶಿಕ ವಿಭಾಗದ ಇತರೆ ಜಿಲ್ಲೆಗಳಿಗೆ ಮಾದರಿಯಾಗಿದೆ.

ಡಿಸೆಂಬರ್ ತಿಂಗಳಿನಿಂದ ರಾಜ್ಯದಲ್ಲಿ ಮೊದಲ ಬಾರಿಗೆ ವಿಕಲಚೇತನರಿಗಾಗಿ ನೇರಳೆ ಹಬ್ಬ (Purple Festival)ವನ್ನು ಆಚರಿಸಿ ಒಂದು ಲಕ್ಷ ವಿಕಲಚೇತನರಿಗೆ ವಿವಿಧ ರೀತಿಯ ಸೇವೆಗಳನ್ನು ಒದಗಿಸಲು ಯೋಚಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಸಹಕಾರ ಮುಖ್ಯವಾಗಿರುತ್ತದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಿದರು.

ಹಾಗೆಯೇ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ವಿಕಲಚೇತನರು ಸ್ವ-ಸಹಾಯ ಸಂಘಗಳನ್ನು ಸ್ಥಾಪಿಸಿ ಸರ್ಕಾರದ ಯೋಜನೆಗಳ ಲಾಭಗಳನ್ನು ಪಡೆದು ಆರ್ಥಿಕವಾಗಿ ಸಬಲರಾಗಬೇಕಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸತೀಶ್ ಪಾಣಿ, ಸಿಬಿಎಂ ಇಂಡಿಯಾ ಟ್ರಸ್ಟ್ ನಿರ್ದೇಶಕರಾದ ಪೆರೋಲಿನ್ ಸೋಜಿ, ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ಕಾರ್ಯದರ್ಶಿಗಳಾದ ಕ್ಯಾರಲಿನ್ ಎಲಿಜಬೆತ್, ಸಂಯೋಜಕರು ಶಿವಾನಂದ ಹಾಗೂ ತರಬೇತಿ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

2 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಕ್ಷಯರೋಗದ ಆತಂಕ: ಏಳು ತಿಂಗಳಲ್ಲಿ 26,531 ಮಂದಿಗೆ ಕಫ ಪರೀಕ್ಷೆ; 434 ಪ್ರಕರಣಗಳು ಪತ್ತೆ, 530 ಸಕ್ರಿಯ ರೋಗಿಗಳು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…

2 days ago

ಘಾಟಿ ಕ್ಷೇತ್ರದಲ್ಲಿ ನಾಗರ ಪಂಚಮಿ ಸಂಭ್ರಮ

ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…

3 days ago

ದೊಡ್ಡಬಳ್ಳಾಪುರದಲ್ಲಿ ಆ.18ರಂದು ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…

4 days ago

ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷ, ಸದಸ್ಯರ ನೇಮಕ: ಯೋಜಿತ ನಗರಾಭಿವೃದ್ಧಿಗೆ ಆದ್ಯತೆ- ಸದಸ್ಯ ಎಸ್.ಡಿ. ಮುನಿರಾಜು

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…

4 days ago