ವಿಶೇಷ ಚೇತನರಿಗೆ ಗುಣಮಟ್ಟದ ಸೇವೆಗಳನ್ನು ಒದಗಿಸುವುದು ನಮ್ಮ ಮುಖ್ಯ ಉದ್ದೇಶ- ಆಯುಕ್ತ ದಾಸ್ ಸೂರ್ಯವಂಶಿ

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ವತಿಯಿಂದ ದೇವನಹಳ್ಳಿ ಟೌನ್ ನಲ್ಲಿರುವ ವಿಕಲಚೇತನ ಪುನರ್ವಸತಿ ಕೇಂದ್ರದಲ್ಲಿ ಸಿಬಿಎಂ ಇಂಡಿಯಾ ಟ್ರಸ್ಟ್ ನಿಂದ ಆರ್ ಸಿಐನ 5ನೇ ಹಂತದ ತರಬೇತಿ ಕಾರ್ಯಕ್ರಮವನ್ನು ರಾಜ್ಯ ಅಂಗವಿಕಲ ಹಕ್ಕುಗಳ ಅಧಿನಿಯಮದ ಆಯೋಗದ ಆಯುಕ್ತರಾದ ದಾಸ್ ಸೂರ್ಯವಂಶಿ ಅವರು ಉದ್ಘಾಟನೆ ಮಾಡಿದರು.

ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರ, ಅನುಷ್ಠಾನ ಸಂಸ್ಥೆ ಬೆಂಗಳೂರು ಬ್ಯಾಪ್ಟಿಸ್ಟ್ ಆಸ್ಪತ್ರೆಯ ಅವರ ಸಹಯೋಗದಿಂದ ನಡೆಯುತ್ತಿರುವ ಪುನರ್ವಸತಿ ಕೇಂದ್ರ. ಸಮುದಾಯ ಆಧಾರಿತ ಅಂತರ್ಗತ ಅಭಿವೃದ್ಧಿ ಹಾಗೂ ಪುನರ್ವಸತಿ ಕೌನ್ಸಿಲ್ (CBID-RCI) ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು

ರಾಜ್ಯ ಅಂಗವಿಕಲ ಹಕ್ಕುಗಳ ಅಧಿನಿಯಮದ ಆಯೋಗದ ಆಯುಕ್ತರಾದ ದಾಸ್ ಸೂರ್ಯವಂಶಿ ಅವರು ಮಾತನಾಡಿ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರವು ( ಅನುಷ್ಠಾನ ಸಂಸ್ಥೆ ಬೆಂಗಳೂರು ಬ್ಯಾಪ್ಟಿಸ್ಟ್ ಆಸ್ಪತ್ರೆ) ಮಾದರಿ ಸಂಸ್ಥೆಯಾಗಿ ಕಾರ್ಯನಿರ್ವಹಿಸುತ್ತಿದೆ. ವಿಶೇಷ ಚೇತನ ಸಮುದಾಯಕ್ಕೆ ತಳಮಟ್ಟದಲ್ಲಿ ಸೇವೆಗಳನ್ನು ಒದಗಿಸಬೇಕೆಂಬ ಉದ್ದೇಶದಿಂದ ತಾಲ್ಲೂಕು ಹಾಗೂ ಹೋಬಳಿ ಮಟ್ಟದಲ್ಲಿ ಪುನರ್ವಸತಿ ಕೇಂದ್ರಗಳನ್ನು ತೆರೆದು ವಿಶೇಷ ಚೇತನ ಮಕ್ಕಳಿಗೆ ವೈದ್ಯಕೀಯ ಹಾಗೂ ಸಮುದಾಯ ಆಧಾರಿತ ಸೇವೆಗಳನ್ನು ಉಚಿತವಾಗಿ ಒದಗಿಸುತ್ತಿರುವುದು ಅಮೋಘ ಸೇವೆಯಾಗಿದೆ.

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರವು ಪ್ರಾದೇಶಿಕ ವಿಕಲಚೇತನ ಪುನರ್ವಸತಿ ಕೇಂದ್ರವಾಗಿ ಬದಲಾವಣೆ ಆಗಿರುವುದು ಈ ವಿಭಾಗದ ಜಿಲ್ಲೆಗಳಿಗೆ ಬಹು ಉಪಯುಕ್ತವಾಗಿದ್ದು, ಇದರ ಸೇವೆಗಳನ್ನು ಈ ಪ್ರಾದೇಶಿಕ ವಿಭಾಗದ ಇತರೆ ಜಿಲ್ಲೆಗಳಿಗೆ ಮಾದರಿಯಾಗಿದೆ.

ಡಿಸೆಂಬರ್ ತಿಂಗಳಿನಿಂದ ರಾಜ್ಯದಲ್ಲಿ ಮೊದಲ ಬಾರಿಗೆ ವಿಕಲಚೇತನರಿಗಾಗಿ ನೇರಳೆ ಹಬ್ಬ (Purple Festival)ವನ್ನು ಆಚರಿಸಿ ಒಂದು ಲಕ್ಷ ವಿಕಲಚೇತನರಿಗೆ ವಿವಿಧ ರೀತಿಯ ಸೇವೆಗಳನ್ನು ಒದಗಿಸಲು ಯೋಚಿಸಲಾಗುತ್ತಿದೆ. ಈ ಕಾರ್ಯಕ್ರಮಕ್ಕೆ ಸರ್ಕಾರ ಮತ್ತು ಸರ್ಕಾರೇತರ ಸಂಸ್ಥೆಗಳ ಸಹಕಾರ ಮುಖ್ಯವಾಗಿರುತ್ತದೆ ಎಂದು ಕಾರ್ಯಕ್ರಮದಲ್ಲಿ ತಿಳಿಸಿದರು.

ಹಾಗೆಯೇ ಪ್ರತಿ ಗ್ರಾಮ ಪಂಚಾಯಿತಿಯಲ್ಲಿ ವಿಕಲಚೇತನರು ಸ್ವ-ಸಹಾಯ ಸಂಘಗಳನ್ನು ಸ್ಥಾಪಿಸಿ ಸರ್ಕಾರದ ಯೋಜನೆಗಳ ಲಾಭಗಳನ್ನು ಪಡೆದು ಆರ್ಥಿಕವಾಗಿ ಸಬಲರಾಗಬೇಕಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಅಂಗವಿಕಲ ಕಲ್ಯಾಣಾಧಿಕಾರಿ ಸತೀಶ್ ಪಾಣಿ, ಸಿಬಿಎಂ ಇಂಡಿಯಾ ಟ್ರಸ್ಟ್ ನಿರ್ದೇಶಕರಾದ ಪೆರೋಲಿನ್ ಸೋಜಿ, ಜಿಲ್ಲಾ ವಿಕಲಚೇತನ ಪುನರ್ವಸತಿ ಕೇಂದ್ರದ ಕಾರ್ಯದರ್ಶಿಗಳಾದ ಕ್ಯಾರಲಿನ್ ಎಲಿಜಬೆತ್, ಸಂಯೋಜಕರು ಶಿವಾನಂದ ಹಾಗೂ ತರಬೇತಿ ಪ್ರಶಿಕ್ಷಣಾರ್ಥಿಗಳು ಉಪಸ್ಥಿತರಿದ್ದರು.

Ramesh Babu

Journalist

Recent Posts

ಗಜಮುಖನ ಆರಾಧನೆಯಲ್ಲಿ ಮಿಂದೆದ್ದ ದೊಡ್ಡಬಳ್ಳಾಪುರ: ಬೆಸ್ತರಪೇಟೆಯಲ್ಲಿ 14 ಅಡಿ ಎತ್ತರದ ಹಿಂದೂ ಮಹಾಗಣಪತಿ ಪ್ರತಿಷ್ಠಾಪನೆ: 7ನೇ ವರ್ಷದ ಗಣೇಶೋತ್ಸವಕ್ಕೆ ಅದ್ಧೂರಿ ಮೆರುಗು

ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…

19 minutes ago

ಗಣೇಶ ವಿಸರ್ಜನೆಗೆ ಗುಂಡಮಗೆರೆ ಕೆರೆ ಬಳಿ ವಿಶೇಷ ವ್ಯವಸ್ಥೆ

ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…

1 hour ago

ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ: ತೂಬಗೆರೆಯಲ್ಲೂ ಕಳೆಗಟ್ಟಿದ ಗೌರಿ ಗಣೇಶ ಹಬ್ಬದ ಆಚರಣೆ: 20 ಅಡಿ ಗಣೇಶ ಮೂರ್ತಿ ಪ್ರತಿಷ್ಠಾಪನೆ

ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…

6 hours ago

ಅಕ್ಷರ ಜ್ಞಾನದ ಬೆಳಕಿನಲ್ಲಿ ಗ್ರಾಮಾಂತರ; ಸಂಪೂರ್ಣ ಸಾಕ್ಷರತೆಯತ್ತ ದಾಪುಗಾಲು!

ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…

12 hours ago

185 ವರ್ಷಗಳ ಹಳೆಯ ಪೊಲೀಸ್ ಬಿಲ್ಲೆ ಪತ್ತೆ: ಇತಿಹಾಸ ಸಂರಕ್ಷಣೆಯಲ್ಲಿ ಇನ್ಸ್‌ಪೆಕ್ಟರ್ ರಾವ್ ಗಣೇಶ್ ಜನಾರ್ಧನ್ ವಿಶಿಷ್ಟ ಹೆಜ್ಜೆ

ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…

1 day ago

ಸಿದ್ದರಾಮಯ್ಯ ಸಹಕಾರದಿಂದ 2028ಕ್ಕೆ ಡಿಕೆಶಿ ಮತ್ತೆ ಸಿಎಂ ಆಗ್ತಾರೆ – ಗೌರಿ-ಗಣೇಶ ಹಬ್ಬದಂದು ಮಳೆ ಬರಲಿ ಎಂದು ಪ್ರಾರ್ಥನೆ ಮಾಡೋಣ – ಸಚಿವ ಚಲುವರಾಯಸ್ವಾಮಿ

ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…

1 day ago