ವಿಶ್ವಕಪ್: ಅಫ್ಗನ್ನರ ಸದ್ದಡಗಿಸಿದ ನಾಯಕ ರೋಹಿತ್ – ಬುಮ್ರಾ

ನವದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವಿಶ್ವಕಪ್ ನ ಎರಡನೇ ಪಂದ್ಯದಲ್ಲಿ ಅಫ್ಗಾನಿಸ್ಥಾನದ ವಿರುದ್ಧ ನಾಯಕ ರೋಹಿತ್ ಶರ್ಮಾ ಅವರ ಅಧ್ಬುತ ಬ್ಯಾಟಿಂಗ್ ಹಾಗೂ ಬುಮ್ರಾ ಅವರ ಮಿಂಚಿನ ಬೌಲಿಂಗ್ ಪ್ರದರ್ಶನದಿಂದ ಭಾರತ ತಂಡ ಜಯ ಸಾಧಿಸಿತು.

ಟಾಸ್ ಗೆದ್ದ ಅಫ್ಗಾನಿಸ್ಥಾನದ ನಾಯಕ ಶಾಹಿದಿ ಬ್ಯಾಟಿಂಗ್ ಆಯ್ದುಕೊಂಡರು, ಬೃಹತ್ ಮೊತ್ತ ಕಲೆಹಾಕುವ ಯೋಚನೆಯಲ್ಲಿದ್ದ ಅಫ್ಗಾನಿಸ್ಥಾನಕ್ಕೆ ಉತ್ತಮ ಆರಂಭ ದೊರೆಯಲಿಲ್ಲ, ಆರಂಭಿಕ ಆಟಗಾರ ಇಬ್ರಾಹಿಂ ಜರ್ದನ್ (22) ಹಾಗೂ ಗುರ್ಬಜ್ (21) ರನ್ ಗಳಿಸಿದ್ದಾಗ ಬುಮ್ರಾ ಬ್ರೇಕ್ ಥ್ರೋ ನೀಡಿದರು, ರಹಮತ್(16) ರನ್ ಗಳಿಸಿದ್ದಾಗ ಶಾರ್ದುಲ್ ಠಾಕೂರ್ ವಿಕೆಟ್ ಪಡೆದರು.

ನಂತರ ಒಂದಾದ ನಾಯಕ ಶಾಹಿದಿ (80) ಹಾಗೂ ಹಜಮತ್ ಹುಲ್ಲಾ (62) ರನ್ ಗಳಿಸುವ ಮೂಲಕ ತಂಡವನ್ನು 272 ರನ್ ಗಡಿ ದಾಟಿಸಿದರು, ಭಾರತದ ಪರವಾಗಿ ವೇಗಿ ಜಸ್ಪ್ರಿತ್ ಬುಮ್ರಾ ನಾಲ್ಕು ವಿಕೆಟ್, ಹಾರ್ದಿಕ್ ಪಾಂಡ್ಯ 2 ವಿಕೆಟ್, ಕುಲದೀಪ್ ಯಾದವ್ ಹಾಗೂ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.

ಗುರಿ ಬೆನ್ನತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ 16 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ (131) ರನ್ ಹಾಗೂ ಆರಂಭಿಕ ಆಟಗಾರ ಇಶಾನ್ ಕಿಶನ್ 5 ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ (47) ರನ್ ಗಳಿಸುವ ಮೂಲಕ ಮೊದಲ ವಿಕೆಟ್ ಗೆ 156 ರನ್ ಗಳಿಸಿ ಜಯದತ್ತ ಮುನ್ನಡೆಸಿದರು.

ನಂತರ ಒಂದಾದ ಕಿಂಗ್ ಕೊಹ್ಲಿ (55) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (25)ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು, ಅಫ್ಗಾನಿಸ್ಥಾನದ ಪರವಾಗಿ ರಶೀದ್ ಖಾನ್ ಎರಡು ವಿಕೆಟ್ ಪಡೆದರು.

ವಿಶ್ವಕಪ್ ನಲ್ಲಿ ಅತ್ಯಂತ ಹೆಚ್ಚು ಶತಕ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ಹಾಗೂ ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿಕ್ಸರ್ ಸಿಡಿಸಿದ್ದ ಸ್ಪೋಟಕ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

6 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

13 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

16 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

17 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago