ವಿಶ್ವಕಪ್: ಅಫ್ಗನ್ನರ ಸದ್ದಡಗಿಸಿದ ನಾಯಕ ರೋಹಿತ್ – ಬುಮ್ರಾ

ನವದೆಹಲಿಯ ಅರುಣ್ ಜೇಟ್ಲಿ ಮೈದಾನದಲ್ಲಿ ನಡೆದ ವಿಶ್ವಕಪ್ ನ ಎರಡನೇ ಪಂದ್ಯದಲ್ಲಿ ಅಫ್ಗಾನಿಸ್ಥಾನದ ವಿರುದ್ಧ ನಾಯಕ ರೋಹಿತ್ ಶರ್ಮಾ ಅವರ ಅಧ್ಬುತ ಬ್ಯಾಟಿಂಗ್ ಹಾಗೂ ಬುಮ್ರಾ ಅವರ ಮಿಂಚಿನ ಬೌಲಿಂಗ್ ಪ್ರದರ್ಶನದಿಂದ ಭಾರತ ತಂಡ ಜಯ ಸಾಧಿಸಿತು.

ಟಾಸ್ ಗೆದ್ದ ಅಫ್ಗಾನಿಸ್ಥಾನದ ನಾಯಕ ಶಾಹಿದಿ ಬ್ಯಾಟಿಂಗ್ ಆಯ್ದುಕೊಂಡರು, ಬೃಹತ್ ಮೊತ್ತ ಕಲೆಹಾಕುವ ಯೋಚನೆಯಲ್ಲಿದ್ದ ಅಫ್ಗಾನಿಸ್ಥಾನಕ್ಕೆ ಉತ್ತಮ ಆರಂಭ ದೊರೆಯಲಿಲ್ಲ, ಆರಂಭಿಕ ಆಟಗಾರ ಇಬ್ರಾಹಿಂ ಜರ್ದನ್ (22) ಹಾಗೂ ಗುರ್ಬಜ್ (21) ರನ್ ಗಳಿಸಿದ್ದಾಗ ಬುಮ್ರಾ ಬ್ರೇಕ್ ಥ್ರೋ ನೀಡಿದರು, ರಹಮತ್(16) ರನ್ ಗಳಿಸಿದ್ದಾಗ ಶಾರ್ದುಲ್ ಠಾಕೂರ್ ವಿಕೆಟ್ ಪಡೆದರು.

ನಂತರ ಒಂದಾದ ನಾಯಕ ಶಾಹಿದಿ (80) ಹಾಗೂ ಹಜಮತ್ ಹುಲ್ಲಾ (62) ರನ್ ಗಳಿಸುವ ಮೂಲಕ ತಂಡವನ್ನು 272 ರನ್ ಗಡಿ ದಾಟಿಸಿದರು, ಭಾರತದ ಪರವಾಗಿ ವೇಗಿ ಜಸ್ಪ್ರಿತ್ ಬುಮ್ರಾ ನಾಲ್ಕು ವಿಕೆಟ್, ಹಾರ್ದಿಕ್ ಪಾಂಡ್ಯ 2 ವಿಕೆಟ್, ಕುಲದೀಪ್ ಯಾದವ್ ಹಾಗೂ ಠಾಕೂರ್ ತಲಾ ಒಂದು ವಿಕೆಟ್ ಪಡೆದರು.

ಗುರಿ ಬೆನ್ನತ್ತಿದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ 16 ಬೌಂಡರಿ ಹಾಗೂ 5 ಸಿಕ್ಸರ್ ನೆರವಿನಿಂದ (131) ರನ್ ಹಾಗೂ ಆರಂಭಿಕ ಆಟಗಾರ ಇಶಾನ್ ಕಿಶನ್ 5 ಬೌಂಡರಿ ಹಾಗೂ ಎರಡು ಸಿಕ್ಸರ್ ನೆರವಿನಿಂದ (47) ರನ್ ಗಳಿಸುವ ಮೂಲಕ ಮೊದಲ ವಿಕೆಟ್ ಗೆ 156 ರನ್ ಗಳಿಸಿ ಜಯದತ್ತ ಮುನ್ನಡೆಸಿದರು.

ನಂತರ ಒಂದಾದ ಕಿಂಗ್ ಕೊಹ್ಲಿ (55) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (25)ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು, ಅಫ್ಗಾನಿಸ್ಥಾನದ ಪರವಾಗಿ ರಶೀದ್ ಖಾನ್ ಎರಡು ವಿಕೆಟ್ ಪಡೆದರು.

ವಿಶ್ವಕಪ್ ನಲ್ಲಿ ಅತ್ಯಂತ ಹೆಚ್ಚು ಶತಕ ಸಿಡಿಸಿದ್ದ ಸಚಿನ್ ತೆಂಡೂಲ್ಕರ್ ಹಾಗೂ ವಿಶ್ವದಲ್ಲಿ ಅತ್ಯಂತ ಹೆಚ್ಚು ಸಿಕ್ಸರ್ ಸಿಡಿಸಿದ್ದ ಸ್ಪೋಟಕ ಬ್ಯಾಟ್ಸ್ಮನ್ ಕ್ರಿಸ್ ಗೇಲ್ ಅವರ ದಾಖಲೆಯನ್ನು ಹಿಟ್ ಮ್ಯಾನ್ ಖ್ಯಾತಿಯ ರೋಹಿತ್ ಶರ್ಮಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ

ದೊಡ್ಡಬಳ್ಳಾಪುರ ಹೊರವಲಯದಲ್ಲಿರುವ ನಾಗದೇನಹಳ್ಳಿಯ ಸಮೀಪದ‌ ಪ್ರತಿಷ್ಠಿತ ಗೀತಂ ವಿಶ್ವವಿದ್ಯಾಲಯದಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿನಿ ಹಾಸ್ಟೆಲ್ ಕಟ್ಟಡದ ಮೇಲಿಂದ ಬಿದ್ದು ಆತ್ಮಹತ್ಯೆ…

2 hours ago

ಪೊಲೀಸ್‌ ಡ್ರೆಸ್‌ನಲ್ಲಿ ಬಂದು ದರೋಡೆ – 20 ಲಕ್ಷ ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿ.!

ಸಬ್ ಇನ್ಸ್‌ಪೆಕ್ಟರ್‌ ಡ್ರೆಸ್‌ನಲ್ಲಿ ಬಂದು 20 ಲಕ್ಷ ರೂ. ನಗದು, ಅರ್ಧ ಕೆಜಿ ಚಿನ್ನಾಭರಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ…

5 hours ago

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​

2026-27ನೇ ಸಾಲಿನ ರಾಜ್ಯ ಬಜೆಟ್ ಮಂಡನೆಗೆ ದಿನಾಂಕ ಫಿಕ್ಸ್​​ ಆಗಿದೆ. ಸಿಎಂ ಕುರ್ಚಿ ಕಾಳಗದ ನಡುವೆಯೇ ಹಣಕಾಸು ಖಾತೆಯನ್ನ ಹೊಂದಿರುವ…

16 hours ago

ನಟ ವಿಜಯ್ ದೇವರಕೊಂಡ – ಕೊಡಗಿನ ಬೆಡಗಿ ರಶ್ಮಿಕಾ ಮಂದಣ್ಣ ಅವರದ್ದು ಎನ್ನಲಾದ ವಿವಾಹ ಆಮಂತ್ರಣ ಪತ್ರಿಕೆ ಸೋಷಿಯಲ್ ಮೀಡಿಯಾದಲ್ಲಿ ಫುಲ್ ವೈರಲ್

ಕೊಡಗಿನ ಬೆಡಗಿ ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಮತ್ತು ಟಾಲಿವುಡ್ ನಟ ವಿಜಯ್ ದೇವರಕೊಂಡ ಹಲವು ವರ್ಷಗಳಿಂದ ಡೇಟಿಂಗ್‌ನಲ್ಲಿದ್ದಾರೆ ಎನ್ನುವುದು…

17 hours ago

ಜಿಲ್ಲಾ ಮಟ್ಟದ ಕೈಗಾರಿಕಾ ಸಂವಾದ ಸಭೆ: ಸ್ಥಳೀಯರಿಗೆ ಉದ್ಯೋಗಾವಕಾಶ ಮೊದಲ ಆದ್ಯತೆ ಆಗಲಿ- ಸಚಿವ ಕೆ.ಎಚ್ ಮುನಿಯಪ್ಪ

ಕಂಪನಿಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕ ಮಾಡಿಕೊಳ್ಳುವ ಸಂದರ್ಭದಲ್ಲಿ ಸ್ಥಳೀಯ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲು ಜಿಲ್ಲಾ ಉಸ್ತುವಾರಿ ಸಚಿವರಾದ…

19 hours ago

ಆಸ್ತಿ ವಿವರ ಮುಚ್ಚಿಟ್ಟು ಸುಳ್ಳು ಪ್ರಮಾಣಪತ್ರ ಸಲ್ಲಿಕೆ ವಿಚಾರ: ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರ ಕಾಂಗ್ರೆಸ್​ ಶಾಸಕ ಎಸ್‌.ಎನ್‌. ಸುಬ್ಬಾರೆಡ್ಡಿ ಆಯ್ಕೆ ಅಸಿಂಧುಗೊಳಿಸಿ ಕರ್ನಾಟಕ ಹೈಕೋರ್ಟ್ ಆದೇಶ

ಬಾಗೇಪಲ್ಲಿ ಕಾಂಗ್ರೆಸ್‌ ಶಾಸಕ ಎಸ್ ಎನ್ ಸುಬ್ಬಾರೆಡ್ಡಿ ಆಯ್ಕೆ ಅಸಿಂಧು ಎಂದು ಕರ್ನಾಟಕ ಹೈಕೋರ್ಟ್‌ ಆದೇಶ ನೀಡಿದೆ. ಚುನಾವಣಾ ಆಯೋಗ…

21 hours ago