ವಿಶ್ವಕಪ್: ಆಂಗ್ಲರನ್ನು ಬಗ್ಗು ಬಡಿದ ಭಾರತ, ಸತತ ಆರನೇ ಗೆಲುವು ಸಾಧಿಸಿದ ರೋಹಿತ್ ಪಡೆ !

ಲಕ್ನೋದಲ್ಲಿ ನಡೆದ ವಿಶ್ವಕಪ್ ನ ಆರನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೇಂಡ್ ತಂಡದ ವಿರುದ್ಧ 100 ರನ್ ಗಳ ಗೆಲುವು ಸಾಧಿಸುವ ಮೂಲಕ ಅಜೇಯ ಓಟದೊಂದಿಗೆ ಭಾರತ ಅಗ್ರಸ್ಥಾನ ಅಲಂಕರಿಸಿತು.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಭಾರತ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (87) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (9) ರನ್ ಗಳಿಸಿ ನಿರಾಸೆ ಮೂಡಿಸಿದರು.

ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ (0), ಶ್ರೇಯಸ್ ಅಯ್ಯರ್ (4), ಆಲ್ ರೌಂಡರ್ ರವೀಂದ್ರ ಜಡೇಜಾ (8) ರನ್ ಗಳಿಸಿ ಔಟಾದರು, ಕನ್ನಡಿಗ ಕೆ.ಎಲ್ . ರಾಹುಲ್ (39), ಸೂರ್ಯ ಕುಮಾರ್ ಯಾದವ್ (49) ಗಳಿಸುವ ಮೂಲಕ ತಂಡದ ಮೊತ್ತವನ್ನು 229 ರನ್ ಗೆ ಏರಿಸಿದರು.

230 ರನ್ ಗಳ ಗುರಿ ಬೆನ್ನತ್ತಿದ್ದ ಆಂಗ್ಲರನ್ನು ಭಾರತದ ಬೌಲರ್ ಗಳು ಆರಂಭದಲ್ಲೇ ಕಾಡಿದರು, ಬೈರ್ಸ್ಟೋ(14) ಹಾಗೂ ಮಲಾನ್ (16) ಗಳಿಸಿ ಭರವಸೆ ಮೂಡಿಸಿದ್ದರು ಆದರೆ ಕ್ರಮವಾಗಿ ಮೊಹಮ್ಮದ್ ಶಮಿ ಹಾಗೂ ಜಸ್ಪ್ರಿತ್ ಬುಮ್ರಾ ಆಘಾತ ನೀಡಿದರು.

ನಂತರ ಬಂದ ಜೋ ರೂಟ್ ಹಾಗೂ ಆಲ್ ರೌಂಡರ್ ಬೆನ್ ಸ್ಪೋಕ್ ಸೊನ್ನೆ ಸುತ್ತಿದರು, ನಾಯಕ ಜೋಸ್ ಬಟ್ಲರ್ (10) ಹಾಗೂ ಮೊಯಿನ್ ಆಲಿ (15) ರನ್ ಗಳಿಸಿ ಔಟಾದರು.

ಭಾರತದ ಪರವಾಗಿ ವೇಗಿ ಜಸ್ಪ್ರಿತ್ ಬುಮ್ರಾ (3), ಮೊಹಮ್ಮದ್ ಶಮಿ (4) ಕುಲದೀಪ್ ಯಾದವ್ (2) ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದು ವಿಕೆಟ್ ಪಡೆದು ಮಿಂಚಿದರು.

Ramesh Babu

Journalist

Recent Posts

ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆ

ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…

9 hours ago

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ: ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು ಸಕಲ ಸಿದ್ಧತೆ: ಯಾವೆಲ್ಲಾ ಸಿದ್ಧತೆ ನಡೆಸಲಾಗಿದೆ ಎಂಬ ಮಾಹಿತಿ ಇಲ್ಲಿದೆ ನೋಡಿ…

ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…

10 hours ago

ಗೃಹಲಕ್ಷ್ಮಿ ಹಣ ಶೀಘ್ರ ಬಿಡುಗಡೆ- ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…

16 hours ago

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ

ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್​​ಪಿ ಗುಂಜನ್…

17 hours ago

ವಿಶ್ವದ ಅತಿಮುಖ್ಯ ನಗರ, ಭಾರತದ ಆಡಳಿತ ಶಕ್ತಿ ಕೇಂದ್ರ ದೆಹಲಿಯಲ್ಲಿ ವಾಯು ಮಾಲಿನ್ಯ….

ದೆಹಲಿ ವಾಯು ಮಾಲಿನ್ಯ...... ನಮ್ಮ ನಗರ ಯಾವಾಗ ?...... ಎಚ್ಚರಿಕೆಯ ಗಂಟೆ ನಿರಂತರವಾಗಿ ಹೊಡೆದುಕೊಳ್ಳುತ್ತಿರುವಾಗ ನಾವು ನಿದ್ದೆ ಮಾಡುವುದಾದರೂ ಹೇಗೆ…

23 hours ago

ಸಿದ್ದೇನಾಯಕನಹಳ್ಳಿಯಲ್ಲಿ ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಪುತ್ಥಳಿ ಅನಾವರಣ: ಸಚಿವ ಕೆ.ಎಚ್ ಮುನಿಯಪ್ಪ ಭಾಗಿ

ಡಾ. ಬಿ.ಆರ್ ಅಂಬೇಡ್ಕರ್ ಸ್ನೇಹದ ಬಳಗದವರಿಂದ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ನಗರದ 5ನೇ ವಾರ್ಡ್ ಸಿದ್ದೇನಾಯಕನಹಳ್ಳಿಯಲ್ಲಿ ನಿರ್ಮಿಸಿರುವ ಬಾಬಾಸಾಹೇಬ್…

1 day ago