ವಿಶ್ವಕಪ್: ಆಂಗ್ಲರನ್ನು ಬಗ್ಗು ಬಡಿದ ಭಾರತ, ಸತತ ಆರನೇ ಗೆಲುವು ಸಾಧಿಸಿದ ರೋಹಿತ್ ಪಡೆ !

ಲಕ್ನೋದಲ್ಲಿ ನಡೆದ ವಿಶ್ವಕಪ್ ನ ಆರನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೇಂಡ್ ತಂಡದ ವಿರುದ್ಧ 100 ರನ್ ಗಳ ಗೆಲುವು ಸಾಧಿಸುವ ಮೂಲಕ ಅಜೇಯ ಓಟದೊಂದಿಗೆ ಭಾರತ ಅಗ್ರಸ್ಥಾನ ಅಲಂಕರಿಸಿತು.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಭಾರತ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (87) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (9) ರನ್ ಗಳಿಸಿ ನಿರಾಸೆ ಮೂಡಿಸಿದರು.

ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ (0), ಶ್ರೇಯಸ್ ಅಯ್ಯರ್ (4), ಆಲ್ ರೌಂಡರ್ ರವೀಂದ್ರ ಜಡೇಜಾ (8) ರನ್ ಗಳಿಸಿ ಔಟಾದರು, ಕನ್ನಡಿಗ ಕೆ.ಎಲ್ . ರಾಹುಲ್ (39), ಸೂರ್ಯ ಕುಮಾರ್ ಯಾದವ್ (49) ಗಳಿಸುವ ಮೂಲಕ ತಂಡದ ಮೊತ್ತವನ್ನು 229 ರನ್ ಗೆ ಏರಿಸಿದರು.

230 ರನ್ ಗಳ ಗುರಿ ಬೆನ್ನತ್ತಿದ್ದ ಆಂಗ್ಲರನ್ನು ಭಾರತದ ಬೌಲರ್ ಗಳು ಆರಂಭದಲ್ಲೇ ಕಾಡಿದರು, ಬೈರ್ಸ್ಟೋ(14) ಹಾಗೂ ಮಲಾನ್ (16) ಗಳಿಸಿ ಭರವಸೆ ಮೂಡಿಸಿದ್ದರು ಆದರೆ ಕ್ರಮವಾಗಿ ಮೊಹಮ್ಮದ್ ಶಮಿ ಹಾಗೂ ಜಸ್ಪ್ರಿತ್ ಬುಮ್ರಾ ಆಘಾತ ನೀಡಿದರು.

ನಂತರ ಬಂದ ಜೋ ರೂಟ್ ಹಾಗೂ ಆಲ್ ರೌಂಡರ್ ಬೆನ್ ಸ್ಪೋಕ್ ಸೊನ್ನೆ ಸುತ್ತಿದರು, ನಾಯಕ ಜೋಸ್ ಬಟ್ಲರ್ (10) ಹಾಗೂ ಮೊಯಿನ್ ಆಲಿ (15) ರನ್ ಗಳಿಸಿ ಔಟಾದರು.

ಭಾರತದ ಪರವಾಗಿ ವೇಗಿ ಜಸ್ಪ್ರಿತ್ ಬುಮ್ರಾ (3), ಮೊಹಮ್ಮದ್ ಶಮಿ (4) ಕುಲದೀಪ್ ಯಾದವ್ (2) ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದು ವಿಕೆಟ್ ಪಡೆದು ಮಿಂಚಿದರು.

Ramesh Babu

Journalist

Recent Posts

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟ: 10 ಸಾವಿರ ಕಾಂಡೋಮ್ ಗಳು ಕೇವಲ 3 ದಿನದಲ್ಲಿ ಖಾಲಿ: ಇನ್ನೂ ಹೆಚ್ಚಿನ ಕಾಂಡೋಮ್ ಗಳು ಬೇಕು ಎಂಬ ಬೇಡಿಕೆ

ಚಳಿಗಾಲದ ಒಲಿಂಪಿಕ್ಸ್ 2026 ಕ್ರೀಡಾಕೂಟದಲ್ಲಿ ಪಾಲ್ಗೊಳ್ಳುವವರಿಗಾಗಿ ಕ್ರೀಡಾಗ್ರಾಮದಲ್ಲಿ ಸರಬರಾಜು ಮಾಡಲಾಗಿದ್ದ ಬರೊಬ್ಬರಿ 10 ಸಾವಿರ ಕಾಂಡೋಮ್ ಗಳು ಕೇವಲ 3…

37 minutes ago

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿ ಶಾಲಾ ಕಟ್ಟಡದಿಂದ ಬಿದ್ದು ಸಾ*ವು!

ಚಿತ್ರದುರ್ಗಾ: ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಯೊಬ್ಬ ಶಾಲಾ ಕಟ್ಟಡದ ಮೇಲಿಂದ ಬಿದ್ದು ಅನುಮಾನಸ್ಪದವಾಗಿ ಸಾ*ವನ್ನಪ್ಪಿದ ಘಟನೆ ವರದಿಯಾಗಿದೆ. ಚಿತ್ರದುರ್ಗ ಜಿಲ್ಲೆಯ ಭರಮಸಾಗರ ಗ್ರಾಮದಲ್ಲಿ…

8 hours ago

ಎಂಎಸ್ ಜಿಪಿ ಘಟಕಕ್ಕೆ ಬಂದ ಹೆಚ್ಚುವರಿ ಕಸದ ಲಾರಿಗಳು: ಶಾಸಕ ಧೀರಜ್ ಮುನಿರಾಜು ನೇತೃತ್ವದಲ್ಲಿ ಲಾರಿಗಳಿಗೆ ತಡೆ

ದೊಡ್ಡಬಳ್ಳಾಪುರ ತಾಲ್ಲೂಕಿನ ಚಿಕ್ಕಮಂಕಳಾದ ಬಳಿಯ ಬೆಂಗಳೂರು ಕಸದ ವಿಲೇವಾರಿ ಘಟಕ ಎಂಎಸ್ ಜಿಪಿ ಘಟಕಕ್ಕೆ ಮಂಗಳವಾರ ಹೆಚ್ಚುವರಿ ಕಸದ ಲಾರಿಗಳು…

21 hours ago

40 ಸಾವಿರ ಲಂಚ ಪಡೆಯುವಾಗ ವಿಶೇಷ ಭೂಸ್ವಾಧೀನಾಧಿಕಾರಿ ಸೇರಿದಂತೆ ಇಬ್ಬರು ಲೋಕಾಯುಕ್ತ ಬಲೆಗೆ.!

ಶಿವಮೊಗ್ಗ : ರಾಷ್ಟ್ರೀಯ ಹೆದ್ದಾರಿಯ ವಿಶೇಷ ಭೂ ಸ್ವಾಧೀನಾಧಿಕಾರಿ ಹಾಗೂ ಶಿವಮೊಗ್ಗ ಹಿಂದಿನ ಅಪರ ಜಿಲ್ಲಾಧಿಕಾರಿಯಾಗಿದ್ದ ಸಿದ್ದಲಿಂಗ ರೆಡ್ಡಿ ಮತ್ತು…

21 hours ago

Accident Update: ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ‌ ಪ್ರಕರಣ: ಬೈಕ್ ಸವಾರ ಸಾವು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಇಂದು ಸಂಜೆ ಸುಮಾರು…

22 hours ago

ಗುಂಡಮ್ಮಗೆರೆ ಕ್ರಾಸ್ ಬಳಿ ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ: ಬೈಕ್ ಸವಾರನಿಗೆ ಗಂಭೀರ ಗಾಯ: ಆಸ್ಪತ್ರೆಗೆ ದಾಖಲು

ಬೈಕ್ -ಖಾಸಗಿ ಕಂಪನಿ ಬಸ್ ನಡುವೆ ಅಪಘಾತ ಸಂಭವಿಸಿದ್ದು, ಬೈಕ್ ಸವಾರನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ ಸುಮಾರು…

22 hours ago