ಲಕ್ನೋದಲ್ಲಿ ನಡೆದ ವಿಶ್ವಕಪ್ ನ ಆರನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೇಂಡ್ ತಂಡದ ವಿರುದ್ಧ 100 ರನ್ ಗಳ ಗೆಲುವು ಸಾಧಿಸುವ ಮೂಲಕ ಅಜೇಯ ಓಟದೊಂದಿಗೆ ಭಾರತ ಅಗ್ರಸ್ಥಾನ ಅಲಂಕರಿಸಿತು.
ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಭಾರತ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (87) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (9) ರನ್ ಗಳಿಸಿ ನಿರಾಸೆ ಮೂಡಿಸಿದರು.
ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ (0), ಶ್ರೇಯಸ್ ಅಯ್ಯರ್ (4), ಆಲ್ ರೌಂಡರ್ ರವೀಂದ್ರ ಜಡೇಜಾ (8) ರನ್ ಗಳಿಸಿ ಔಟಾದರು, ಕನ್ನಡಿಗ ಕೆ.ಎಲ್ . ರಾಹುಲ್ (39), ಸೂರ್ಯ ಕುಮಾರ್ ಯಾದವ್ (49) ಗಳಿಸುವ ಮೂಲಕ ತಂಡದ ಮೊತ್ತವನ್ನು 229 ರನ್ ಗೆ ಏರಿಸಿದರು.
ನಂತರ ಬಂದ ಜೋ ರೂಟ್ ಹಾಗೂ ಆಲ್ ರೌಂಡರ್ ಬೆನ್ ಸ್ಪೋಕ್ ಸೊನ್ನೆ ಸುತ್ತಿದರು, ನಾಯಕ ಜೋಸ್ ಬಟ್ಲರ್ (10) ಹಾಗೂ ಮೊಯಿನ್ ಆಲಿ (15) ರನ್ ಗಳಿಸಿ ಔಟಾದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…