ವಿಶ್ವಕಪ್: ಆಂಗ್ಲರನ್ನು ಬಗ್ಗು ಬಡಿದ ಭಾರತ, ಸತತ ಆರನೇ ಗೆಲುವು ಸಾಧಿಸಿದ ರೋಹಿತ್ ಪಡೆ !

ಲಕ್ನೋದಲ್ಲಿ ನಡೆದ ವಿಶ್ವಕಪ್ ನ ಆರನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೇಂಡ್ ತಂಡದ ವಿರುದ್ಧ 100 ರನ್ ಗಳ ಗೆಲುವು ಸಾಧಿಸುವ ಮೂಲಕ ಅಜೇಯ ಓಟದೊಂದಿಗೆ ಭಾರತ ಅಗ್ರಸ್ಥಾನ ಅಲಂಕರಿಸಿತು.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಭಾರತ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (87) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (9) ರನ್ ಗಳಿಸಿ ನಿರಾಸೆ ಮೂಡಿಸಿದರು.

ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ (0), ಶ್ರೇಯಸ್ ಅಯ್ಯರ್ (4), ಆಲ್ ರೌಂಡರ್ ರವೀಂದ್ರ ಜಡೇಜಾ (8) ರನ್ ಗಳಿಸಿ ಔಟಾದರು, ಕನ್ನಡಿಗ ಕೆ.ಎಲ್ . ರಾಹುಲ್ (39), ಸೂರ್ಯ ಕುಮಾರ್ ಯಾದವ್ (49) ಗಳಿಸುವ ಮೂಲಕ ತಂಡದ ಮೊತ್ತವನ್ನು 229 ರನ್ ಗೆ ಏರಿಸಿದರು.

230 ರನ್ ಗಳ ಗುರಿ ಬೆನ್ನತ್ತಿದ್ದ ಆಂಗ್ಲರನ್ನು ಭಾರತದ ಬೌಲರ್ ಗಳು ಆರಂಭದಲ್ಲೇ ಕಾಡಿದರು, ಬೈರ್ಸ್ಟೋ(14) ಹಾಗೂ ಮಲಾನ್ (16) ಗಳಿಸಿ ಭರವಸೆ ಮೂಡಿಸಿದ್ದರು ಆದರೆ ಕ್ರಮವಾಗಿ ಮೊಹಮ್ಮದ್ ಶಮಿ ಹಾಗೂ ಜಸ್ಪ್ರಿತ್ ಬುಮ್ರಾ ಆಘಾತ ನೀಡಿದರು.

ನಂತರ ಬಂದ ಜೋ ರೂಟ್ ಹಾಗೂ ಆಲ್ ರೌಂಡರ್ ಬೆನ್ ಸ್ಪೋಕ್ ಸೊನ್ನೆ ಸುತ್ತಿದರು, ನಾಯಕ ಜೋಸ್ ಬಟ್ಲರ್ (10) ಹಾಗೂ ಮೊಯಿನ್ ಆಲಿ (15) ರನ್ ಗಳಿಸಿ ಔಟಾದರು.

ಭಾರತದ ಪರವಾಗಿ ವೇಗಿ ಜಸ್ಪ್ರಿತ್ ಬುಮ್ರಾ (3), ಮೊಹಮ್ಮದ್ ಶಮಿ (4) ಕುಲದೀಪ್ ಯಾದವ್ (2) ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದು ವಿಕೆಟ್ ಪಡೆದು ಮಿಂಚಿದರು.

Ramesh Babu

Journalist

Recent Posts

ರೋಗಿಗಳೊಂದಿಗೆ ದುರ್ವರ್ತನೆ ಆರೋಪ: ಕೊನಘಟ್ಟ ಸರ್ಕಾರಿ ಆಸ್ಪತ್ರೆ ವೈದ್ಯೆ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ದೊಡ್ಡಬಳ್ಳಾಪುರ: ತಾಲೂಕಿನ ಕೊನಘಟ್ಟ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಫರ್ಹಾನಾ ಅವರ ವಿರುದ್ಧ ರೋಗಿಗಳೊಂದಿಗೆ ಸೂಕ್ತವಾಗಿ ವರ್ತಿಸುತ್ತಿಲ್ಲ…

2 hours ago

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

4 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

1 day ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

2 days ago