ವಿಶ್ವಕಪ್: ಆಂಗ್ಲರನ್ನು ಬಗ್ಗು ಬಡಿದ ಭಾರತ, ಸತತ ಆರನೇ ಗೆಲುವು ಸಾಧಿಸಿದ ರೋಹಿತ್ ಪಡೆ !

ಲಕ್ನೋದಲ್ಲಿ ನಡೆದ ವಿಶ್ವಕಪ್ ನ ಆರನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೇಂಡ್ ತಂಡದ ವಿರುದ್ಧ 100 ರನ್ ಗಳ ಗೆಲುವು ಸಾಧಿಸುವ ಮೂಲಕ ಅಜೇಯ ಓಟದೊಂದಿಗೆ ಭಾರತ ಅಗ್ರಸ್ಥಾನ ಅಲಂಕರಿಸಿತು.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಭಾರತ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (87) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (9) ರನ್ ಗಳಿಸಿ ನಿರಾಸೆ ಮೂಡಿಸಿದರು.

ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ (0), ಶ್ರೇಯಸ್ ಅಯ್ಯರ್ (4), ಆಲ್ ರೌಂಡರ್ ರವೀಂದ್ರ ಜಡೇಜಾ (8) ರನ್ ಗಳಿಸಿ ಔಟಾದರು, ಕನ್ನಡಿಗ ಕೆ.ಎಲ್ . ರಾಹುಲ್ (39), ಸೂರ್ಯ ಕುಮಾರ್ ಯಾದವ್ (49) ಗಳಿಸುವ ಮೂಲಕ ತಂಡದ ಮೊತ್ತವನ್ನು 229 ರನ್ ಗೆ ಏರಿಸಿದರು.

230 ರನ್ ಗಳ ಗುರಿ ಬೆನ್ನತ್ತಿದ್ದ ಆಂಗ್ಲರನ್ನು ಭಾರತದ ಬೌಲರ್ ಗಳು ಆರಂಭದಲ್ಲೇ ಕಾಡಿದರು, ಬೈರ್ಸ್ಟೋ(14) ಹಾಗೂ ಮಲಾನ್ (16) ಗಳಿಸಿ ಭರವಸೆ ಮೂಡಿಸಿದ್ದರು ಆದರೆ ಕ್ರಮವಾಗಿ ಮೊಹಮ್ಮದ್ ಶಮಿ ಹಾಗೂ ಜಸ್ಪ್ರಿತ್ ಬುಮ್ರಾ ಆಘಾತ ನೀಡಿದರು.

ನಂತರ ಬಂದ ಜೋ ರೂಟ್ ಹಾಗೂ ಆಲ್ ರೌಂಡರ್ ಬೆನ್ ಸ್ಪೋಕ್ ಸೊನ್ನೆ ಸುತ್ತಿದರು, ನಾಯಕ ಜೋಸ್ ಬಟ್ಲರ್ (10) ಹಾಗೂ ಮೊಯಿನ್ ಆಲಿ (15) ರನ್ ಗಳಿಸಿ ಔಟಾದರು.

ಭಾರತದ ಪರವಾಗಿ ವೇಗಿ ಜಸ್ಪ್ರಿತ್ ಬುಮ್ರಾ (3), ಮೊಹಮ್ಮದ್ ಶಮಿ (4) ಕುಲದೀಪ್ ಯಾದವ್ (2) ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದು ವಿಕೆಟ್ ಪಡೆದು ಮಿಂಚಿದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

3 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

12 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

16 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago