ವಿಶ್ವಕಪ್: ಆಂಗ್ಲರನ್ನು ಬಗ್ಗು ಬಡಿದ ಭಾರತ, ಸತತ ಆರನೇ ಗೆಲುವು ಸಾಧಿಸಿದ ರೋಹಿತ್ ಪಡೆ !

ಲಕ್ನೋದಲ್ಲಿ ನಡೆದ ವಿಶ್ವಕಪ್ ನ ಆರನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೇಂಡ್ ತಂಡದ ವಿರುದ್ಧ 100 ರನ್ ಗಳ ಗೆಲುವು ಸಾಧಿಸುವ ಮೂಲಕ ಅಜೇಯ ಓಟದೊಂದಿಗೆ ಭಾರತ ಅಗ್ರಸ್ಥಾನ ಅಲಂಕರಿಸಿತು.

ಟಾಸ್ ಗೆದ್ದ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಭಾರತ ತಂಡವನ್ನು ಬ್ಯಾಟಿಂಗ್ ಗೆ ಆಹ್ವಾನಿಸಿದರು, ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (87) ರನ್ ಗಳಿಸಿದರೆ ಯುವ ಆಟಗಾರ ಶುಭ್ಮನ್ ಗಿಲ್ (9) ರನ್ ಗಳಿಸಿ ನಿರಾಸೆ ಮೂಡಿಸಿದರು.

ನಂತರ ಬಂದ ಅನುಭವಿ ಆಟಗಾರ ವಿರಾಟ್ ಕೋಹ್ಲಿ (0), ಶ್ರೇಯಸ್ ಅಯ್ಯರ್ (4), ಆಲ್ ರೌಂಡರ್ ರವೀಂದ್ರ ಜಡೇಜಾ (8) ರನ್ ಗಳಿಸಿ ಔಟಾದರು, ಕನ್ನಡಿಗ ಕೆ.ಎಲ್ . ರಾಹುಲ್ (39), ಸೂರ್ಯ ಕುಮಾರ್ ಯಾದವ್ (49) ಗಳಿಸುವ ಮೂಲಕ ತಂಡದ ಮೊತ್ತವನ್ನು 229 ರನ್ ಗೆ ಏರಿಸಿದರು.

230 ರನ್ ಗಳ ಗುರಿ ಬೆನ್ನತ್ತಿದ್ದ ಆಂಗ್ಲರನ್ನು ಭಾರತದ ಬೌಲರ್ ಗಳು ಆರಂಭದಲ್ಲೇ ಕಾಡಿದರು, ಬೈರ್ಸ್ಟೋ(14) ಹಾಗೂ ಮಲಾನ್ (16) ಗಳಿಸಿ ಭರವಸೆ ಮೂಡಿಸಿದ್ದರು ಆದರೆ ಕ್ರಮವಾಗಿ ಮೊಹಮ್ಮದ್ ಶಮಿ ಹಾಗೂ ಜಸ್ಪ್ರಿತ್ ಬುಮ್ರಾ ಆಘಾತ ನೀಡಿದರು.

ನಂತರ ಬಂದ ಜೋ ರೂಟ್ ಹಾಗೂ ಆಲ್ ರೌಂಡರ್ ಬೆನ್ ಸ್ಪೋಕ್ ಸೊನ್ನೆ ಸುತ್ತಿದರು, ನಾಯಕ ಜೋಸ್ ಬಟ್ಲರ್ (10) ಹಾಗೂ ಮೊಯಿನ್ ಆಲಿ (15) ರನ್ ಗಳಿಸಿ ಔಟಾದರು.

ಭಾರತದ ಪರವಾಗಿ ವೇಗಿ ಜಸ್ಪ್ರಿತ್ ಬುಮ್ರಾ (3), ಮೊಹಮ್ಮದ್ ಶಮಿ (4) ಕುಲದೀಪ್ ಯಾದವ್ (2) ಹಾಗೂ ರವೀಂದ್ರ ಜಡೇಜಾ ಒಂದು ವಿಕೆಟ್ ಪಡೆದು ವಿಕೆಟ್ ಪಡೆದು ಮಿಂಚಿದರು.

Ramesh Babu

Journalist

Recent Posts

ಡೀಸೆಲ್ ದುಬಾರಿ, ಎತ್ತುಗಳ ಕೊರತೆ; ಸೈಕಲ್‌ಗೆ ಕುಂಟೆ ಜೋಡಿಸಿ ಕೃಷಿಯಲ್ಲಿ ಹೊಸ ಪ್ರಯೋಗ ಮಾಡಿದ ರೈತ ದಂಪತಿ

ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್‌ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…

41 minutes ago

‘ಫೊರೆನ್ಸಿಕ್ ತನಿಖೆಯಲ್ಲಿ ಕರ್ನಾಟಕಕ್ಕೆ ದೇಶದಲ್ಲೇ ಮುಂಚೂಣಿ ಸ್ಥಾನ’-ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್‌ಎಸ್‌ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…

16 hours ago

ಜೂ. 28 ರಿಂದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…

20 hours ago

24 ಗಂಟೆಯೊಳಗೆ ಸರಗಳ್ಳರ ಬಂಧನ: ₹2.96 ಲಕ್ಷ ಮೌಲ್ಯದ ಮಾಲು ವಶ

ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…

21 hours ago

ದೊಡ್ಡಬೆಲವಂಗಲ ಠಾಣೆ ಇನ್ಸ್‌ಪೆಕ್ಟರ್ ಕಲ್ಲಪ್ಪ ಎಸ್. ಖರತ್‌ಗೆ ಡಿಜಿ-ಐಜಿಪಿ ಪ್ರಶಂಸನಾ ಪದಕ

ದೊಡ್ಡಬಳ್ಳಾಪುರ: ಇಲಾಖೆಯಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ನೀಡಲಾಗುವ ಪ್ರತಿಷ್ಠಿತ 2025-26ನೇ ಸಾಲಿನ ಡಿಜಿ-ಐಜಿಪಿ ಪ್ರಶಂಸನಾ…

22 hours ago

ಕೆಐಎಎಲ್ ನಲ್ಲಿ ಸರಣಿ ಕಳ್ಳಸಾಗಣೆ ಪ್ರಕರಣಗಳು ಪತ್ತೆ: ₹4.33 ಕೋಟಿಗೂ ಅಧಿಕ ಮೌಲ್ಯದ ಮಾದಕ ವಸ್ತು, ಚಿನ್ನ ವಶ

ದೇವನಹಳ್ಳಿ: ಕೆಂಪೇಗೌಡರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಳೆದ ಕೆಲ ದಿನಗಳಲ್ಲಿ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ನಡೆಸಿದ ಕಾರ್ಯಾಚರಣೆಗಳಲ್ಲಿ ಮಾದಕ ವಸ್ತುಗಳು…

23 hours ago