ವಿಶ್ವಕಪ್: ಕಾನ್ವೆ – ರವೀಂದ್ರ ದ್ವಿಶತಕದ ಜೊತೆಯಾಟದಿಂದ ಕೀವಿಸ್ ಗೆ ಜಯಭೇರಿ: ಚಾಂಪಿಯನ್ ಆಂಗ್ಲರಿಗೆ ಆಘಾತ

ಅಹಮದಾಬಾದ್: ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೇಂಡ್ ಹಾಗೂ ರನ್ನರ್ ಆಫ್ ನ್ಯೂಜಿಲ್ಯಾಂಡ್ ನಡುವಣ ಪಂದ್ಯದಲ್ಲಿ ಡೇವಿಡ್ ಕಾನ್ವೆ ಹಾಗೂ ರಚಿನ್ ರವೀಂದ್ರ ಅವರ ದ್ವಿಶತಕದ ಜೊತೆಯಾಟದಿಂದ ನೆರವಿನಿಂದ ಒಂಬತ್ತು ವಿಕೆಟ್ ಗಳ ಬೃಹತ್ ಜಯ ಸಾಧಿಸಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೇಂಡ್ ತಂಡ ಉತ್ತಮ ಆರಂಭ ಪಡೆಯಿತು ಆರಂಭಿಕ ಆಟಗಾರರಾದ ಜಾನಿ ಬೈರಸ್ಟೊ (33) ಹಾಗೂ ಮಲಾನ್ (14) ರನ್ ಗಳಿಸಿದರು.

ಆಂಗ್ಲರ ಪರವಾಗಿ ಅನುಭವ ಆಟಗಾರ ಜೋ ರೂಟ್ (77) , ಹ್ಯಾರಿ ಬ್ರೂಕ್(25) ಹಾಗೂ ನಾಯಕ ಜೋಶ್ ಬಟ್ಲರ್ (43) ರನ್ ಗಳಿಸುವ ಮೂಲಕ ತಂಡವನ್ನು 280ರ ಗಡಿ ದಾಟಿಸಿದರು ಹಾಗೂ ಉಳಿದ ಎಲ್ಲಾ ಆಟಗಾರರು ಎರಡಂಕಿ ಮೊತ್ತ ದಾಖಲಿಸಿದರು.

ಗುರಿ ಬೆನ್ನತ್ತಿದ್ದ ಕೀವೀಸ್ ತಂಡದ ಆರಂಭಿಕ ಆಟಗಾರ ವಿಲ್ ಯಂಗ್ (0) ಸ್ಯಾಮ್ ಕರನ್ ಬೌಲಿಂಗ್ ನಲ್ಲಿ ವಿಕೆಟ್ ಒಪ್ಪಿಸಿದರು, ನಂತರ ಒಂದಾದ ಡೇವಿಡ್ ಕಾನ್ವೆ (152) ಹಾಗೂ ಬೆಂಗಳೂರು ಮೂಲದ ಕೀವೀಸ್ ಕನ್ನಡಿಗ ರಚಿನ್ ರವೀಂದ್ರ (123) ರನ್ ಗಳಿಸುವ ಮೂಲಕ 275 ರನ್ ಗಳ ಜೊತೆಯಾಟ ನೆರವಿನಿಂದ 9 ವಿಕೆಟ್ ಗೆಲುವು ಸಾಧಿಸುವ ಮೂಲಕ ವಿಶ್ವಕಪ್ ಉದ್ಘಾಟನಾ ಪಂದ್ಯದಲ್ಲಿ ಶುಭಾರಂಭ ಮಾಡಿದರು.

ಆಲ್ ರೌಂಡರ್ ಆಟವಾಡಿದ ರಚಿನ್ ರವೀಂದ್ರ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

7 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

15 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

19 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

1 day ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago