ವಿಶ್ವಕಪ್: ಕೀವೀಸ್ ಕಿವಿ ಹಿಂಡಿದ ಕೊಹ್ಲಿ – ಶಮಿ !: ಟೇಬಲ್ ಟಾಪ್ ಗೆ ಏರಿದ ಭಾರತ

 

ವಿಶ್ವಕಪ್ ನಲ್ಲಿ ಒಂದೂ ಸೋಲನ್ನು ಅನುಭವಿಸದೆ ಟೇಬಲ್ ನಲ್ಲಿ ಮೊದಲೆರಡು ಸ್ಥಾನದಲ್ಲಿದ್ದ ತಂಡಗಳಾದ ನ್ಯೂಜಿಲ್ಯಾಂಡ್ ಹಾಗೂ ಭಾರತ ತಂಡದ ಪರಸ್ಪರ ಹೋರಾಟದಲ್ಲಿ ಭಾರತ ಗೆದ್ದು ಮೊದಲ ಸ್ಥಾನದಲ್ಲಿ ರಾರಾಜಿಸುತ್ತಿದೆ.

ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಬೌಲಿಂಗ್ ವಿಭಾಗ ಕೀವೀಸ್ ತಂಡವನ್ನು ಇನ್ನಿಲ್ಲದಂತೆ ಕಾಡಿದರು.

ಕೀವೀಸ್ ಪರವಾಗಿ ಮಿಚೆಲ್ 130 ರನ್ ಗಳಿಸಿದರೆ, ರಚಿನ್ ರವೀಂದ್ರ 75 ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು ಹಾಗೂ 273 ರನ್ ಗಳಿಸಿ ಸ್ಪರ್ಧಾತ್ಮಕ ಮೊತ್ತ ಪೇರಿಸಿದರು.

ಭಾರತದ ಪರವಾಗಿ ಮೊಹಮ್ಮದ್ ಶಮಿ 5 ವಿಕೆಟ್ ಗೊಂಚಲು ಪಡೆದರೆ, ಕುಲದೀಪ್ ಯಾದವ್ 2 ವಿಕೆಟ್ , ಸಿರಾಜ್ ಹಾಗೂ ಜಸ್ಪ್ರಿತ್ ಬುಮ್ರಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (46) ಹಾಗೂ ಯುವ ಆಟಗಾರ ಶುಭ್ಮನ್ ಗಿಲ್ (26) ರನ್ ಗಳಿಸಿದರೆ, ಅನುಭವಿ ಆಟಗಾರ ವಿರಾಟ್ ಕೊಹ್ಲಿ (95) ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (39) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ನಾಲ್ಕು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದಿದ್ದ ಮೊಹಮದ್ ಶಮಿ ಐದು ವಿಕೆಟ್ ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ನಟ ಪ್ರಥಮ್ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ ಆರೋಪ: ಹಲ್ಲೆ ಎಲ್ಲಿ ಆಯ್ತು…? ಘಟನೆ ಬಗ್ಗೆ ನಟ ಪ್ರಥಮ್ ಏನಂದ್ರು… ಗೊತ್ತಾ….? ಸಂಪೂರ್ಣ ಮಾಹಿತಿ ಇಲ್ಲಿದೆ ಓದಿ….

ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…

4 hours ago

ಈ ವರ್ಷ ಕೇಂದ್ರ ಸರ್ಕಾರ ಸರಬರಾಜು ಮಾಡಿರುವ ರಸಗೊಬ್ಬರ ಸಾಕಾಗುತ್ತಿಲ್ಲ- ಸಿಎಂ ಸಿದ್ದರಾಮಯ್ಯ

ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…

11 hours ago

ಹಣ ಕೇಂದ್ರೀಕೃತ ಸಮಾಜಕ್ಕೆ ಬದಲಾಗಿ ಮನುಷ್ಯತ್ವ ಕೇಂದ್ರಿತ ಸಮಾಜ ನಿರ್ಮಾಣವಾಗಲಿ…..

ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…

14 hours ago

ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆದ ನಟ ದರ್ಶನ್

ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…

14 hours ago

ಭೀಮನ ಅಮವಾಸ್ಯೆ ದಿನದಂದು ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವು

ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…

1 day ago

ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯಡಿ ರೈತರು ಬೆಳೆ ವಿಮೆಗೆ ನೊಂದಾಯಿಸಿ

ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…

1 day ago