ವಿಶ್ವಕಪ್: ಕೀವೀಸ್ ಕಿವಿ ಹಿಂಡಿದ ಕೊಹ್ಲಿ – ಶಮಿ !: ಟೇಬಲ್ ಟಾಪ್ ಗೆ ಏರಿದ ಭಾರತ

 

ವಿಶ್ವಕಪ್ ನಲ್ಲಿ ಒಂದೂ ಸೋಲನ್ನು ಅನುಭವಿಸದೆ ಟೇಬಲ್ ನಲ್ಲಿ ಮೊದಲೆರಡು ಸ್ಥಾನದಲ್ಲಿದ್ದ ತಂಡಗಳಾದ ನ್ಯೂಜಿಲ್ಯಾಂಡ್ ಹಾಗೂ ಭಾರತ ತಂಡದ ಪರಸ್ಪರ ಹೋರಾಟದಲ್ಲಿ ಭಾರತ ಗೆದ್ದು ಮೊದಲ ಸ್ಥಾನದಲ್ಲಿ ರಾರಾಜಿಸುತ್ತಿದೆ.

ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಬೌಲಿಂಗ್ ವಿಭಾಗ ಕೀವೀಸ್ ತಂಡವನ್ನು ಇನ್ನಿಲ್ಲದಂತೆ ಕಾಡಿದರು.

ಕೀವೀಸ್ ಪರವಾಗಿ ಮಿಚೆಲ್ 130 ರನ್ ಗಳಿಸಿದರೆ, ರಚಿನ್ ರವೀಂದ್ರ 75 ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು ಹಾಗೂ 273 ರನ್ ಗಳಿಸಿ ಸ್ಪರ್ಧಾತ್ಮಕ ಮೊತ್ತ ಪೇರಿಸಿದರು.

ಭಾರತದ ಪರವಾಗಿ ಮೊಹಮ್ಮದ್ ಶಮಿ 5 ವಿಕೆಟ್ ಗೊಂಚಲು ಪಡೆದರೆ, ಕುಲದೀಪ್ ಯಾದವ್ 2 ವಿಕೆಟ್ , ಸಿರಾಜ್ ಹಾಗೂ ಜಸ್ಪ್ರಿತ್ ಬುಮ್ರಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (46) ಹಾಗೂ ಯುವ ಆಟಗಾರ ಶುಭ್ಮನ್ ಗಿಲ್ (26) ರನ್ ಗಳಿಸಿದರೆ, ಅನುಭವಿ ಆಟಗಾರ ವಿರಾಟ್ ಕೊಹ್ಲಿ (95) ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (39) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ನಾಲ್ಕು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದಿದ್ದ ಮೊಹಮದ್ ಶಮಿ ಐದು ವಿಕೆಟ್ ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ದೊಡ್ಡಬಳ್ಳಾಪುರದಲ್ಲಿ ರಾಯಲ್‌ ಓಕ್‌ ಫರ್ನಿಚರ್ ನೂತನ ಮಳಿಗೆ ಉದ್ಘಾಟನೆ

ಭಾರತದ ಅಗ್ರ ಪೀಠೋಪಕರಣ ಬ್ರ್ಯಾಂಡ್ ಆಗಿರುವ ರಾಯಲ್‌ ಓಕ್‌ ಫರ್ನಿಚರ್, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದಲ್ಲಿ ನೂತನ ಮಳಿಗೆಗೆ ಚಾಲನೆ…

7 hours ago

ರಾಜ್ಯದಲ್ಲಿ ಆಟೋ ಎಲ್‌ಪಿಜಿ ಕೊರತೆ ಇಲ್ಲ – ​ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯಿಂದ ಸ್ಪಷ್ಟನೆ

ಎಲ್ಲಾ ವಲಯಗಳಿಗೂ ಯಾವುದೇ ಅಡೆತಡೆ ಇಲ್ಲದೆ ಎಲ್.ಪಿ.ಜಿ‌ ಸರಬರಾಜು ಮಾಡಲಾಗುತ್ತಿದೆ ಅಲ್ಲದೇ ವಿಶೇಷವಾಗಿ *ಆಟೋ‌ ಎಲ್.ಪಿ.ಜಿ*.ಗೆ ಯಾವುದೇ ರೀತಿಯ ‌ಕೊರತೆ…

10 hours ago

Affordable Emotional Support Animal Letters for Enhanced Well-being

Cheap Emotional Support Animal Letter: Affordable ESA Documentation Affordable Emotional Support Animal Letters for Enhanced…

18 hours ago

ದೊಡ್ಡಬಳ್ಳಾಪುರದಲ್ಲಿ ಅದ್ಧೂರಿ ಶ್ರೀರಾಮೋತ್ಸವ‌:‌ ಹೆಲಿಕಾಪ್ಟರ್‌ನಿಂದ ಪುಷ್ಪಾರ್ಚನೆ: ಶ್ರೀರಾಮ ನಾಮದಲ್ಲಿ ಮಿಂದೆದ್ದ ಸಹಸ್ರಾರು ಜನ

ಶ್ರೀರಾಮನವಮಿ ಅಂಗವಾಗಿ ವಿಶ್ವ ಹಿಂದೂ ಪರಿಷತ್ ಬಜರಂಗ ದಳ ವತಿಯಿಂದ ದೊಡ್ಡಬಳ್ಳಾಪುರ ನಗರದಲ್ಲಿ ಮಾರ್ಚ್ 27 ರಿಂದ ಮೂರು ದಿನಗಳ…

22 hours ago

ಕೃಷಿ ಹೊಂಡದಲ್ಲಿ ಮುಳುಗಿ ನಾಲ್ವರು ಮಕ್ಕಳು ದಾರುಣ ಸಾವು

ಆಟವಾಡುತ್ತಾ ಈಜಲು ಹೋದ ನಾಲ್ವರು ಮಕ್ಕಳು ಕೃಷಿ ಹೊಂಡದಲ್ಲಿ ಮುಳುಗಿ ಸಾವನ್ನಪ್ಪಿರುವ ಘಟನೆ ಯಾದಗಿರಿ ಜಿಲ್ಲೆಯ ಸುರಪುರ ತಾಲ್ಲೂಕಿನ ನಗನೂರು…

1 day ago

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್…!!?: ಪ್ರಸಾದ ತಿಂದ ಬಹುತೇಕ ಜನ ಆಸ್ಪತ್ರೆ ಪಾಲು….!

ಶ್ರೀರಾಮನವಮಿ ಅನ್ನ ಪ್ರಸಾದಿಂದ ಗ್ರಾಮಸ್ಥರಿಗೆ ಫುಡ್ ಪಾಯಿಸನ್...!!?ಆಗಿದ್ದು, ಅನ್ನಪ್ರಸಾದ ಸೇವಿಸಿದ ಗ್ರಾಮಸ್ಥರಲ್ಲಿ ಬಹುತೇಕ ಜನ ಆಸ್ಪತ್ರೆ ಪಾಲಾಗಿದ್ದಾರೆ. ಆಸ್ಪತ್ರೆಯಲ್ಲಿ ದಾಖಲಾಗಿರುವ…

1 day ago