ವಿಶ್ವಕಪ್: ಕೀವೀಸ್ ಕಿವಿ ಹಿಂಡಿದ ಕೊಹ್ಲಿ – ಶಮಿ !: ಟೇಬಲ್ ಟಾಪ್ ಗೆ ಏರಿದ ಭಾರತ

 

ವಿಶ್ವಕಪ್ ನಲ್ಲಿ ಒಂದೂ ಸೋಲನ್ನು ಅನುಭವಿಸದೆ ಟೇಬಲ್ ನಲ್ಲಿ ಮೊದಲೆರಡು ಸ್ಥಾನದಲ್ಲಿದ್ದ ತಂಡಗಳಾದ ನ್ಯೂಜಿಲ್ಯಾಂಡ್ ಹಾಗೂ ಭಾರತ ತಂಡದ ಪರಸ್ಪರ ಹೋರಾಟದಲ್ಲಿ ಭಾರತ ಗೆದ್ದು ಮೊದಲ ಸ್ಥಾನದಲ್ಲಿ ರಾರಾಜಿಸುತ್ತಿದೆ.

ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಬೌಲಿಂಗ್ ವಿಭಾಗ ಕೀವೀಸ್ ತಂಡವನ್ನು ಇನ್ನಿಲ್ಲದಂತೆ ಕಾಡಿದರು.

ಕೀವೀಸ್ ಪರವಾಗಿ ಮಿಚೆಲ್ 130 ರನ್ ಗಳಿಸಿದರೆ, ರಚಿನ್ ರವೀಂದ್ರ 75 ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು ಹಾಗೂ 273 ರನ್ ಗಳಿಸಿ ಸ್ಪರ್ಧಾತ್ಮಕ ಮೊತ್ತ ಪೇರಿಸಿದರು.

ಭಾರತದ ಪರವಾಗಿ ಮೊಹಮ್ಮದ್ ಶಮಿ 5 ವಿಕೆಟ್ ಗೊಂಚಲು ಪಡೆದರೆ, ಕುಲದೀಪ್ ಯಾದವ್ 2 ವಿಕೆಟ್ , ಸಿರಾಜ್ ಹಾಗೂ ಜಸ್ಪ್ರಿತ್ ಬುಮ್ರಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (46) ಹಾಗೂ ಯುವ ಆಟಗಾರ ಶುಭ್ಮನ್ ಗಿಲ್ (26) ರನ್ ಗಳಿಸಿದರೆ, ಅನುಭವಿ ಆಟಗಾರ ವಿರಾಟ್ ಕೊಹ್ಲಿ (95) ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (39) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ನಾಲ್ಕು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದಿದ್ದ ಮೊಹಮದ್ ಶಮಿ ಐದು ವಿಕೆಟ್ ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಹಳಿ ತಪ್ಪಿದಂತಿರುವ ಭಾರತದ ವಿದೇಶಾಂಗ ನೀತಿ……..

ಭಾರತದ ವಿದೇಶಾಂಗ ನೀತಿ ವ್ಯಾವಹಾರಿಕವೇ ?ಮೌಲ್ಯಯುತವೇ ? ಸೈದ್ದಾಂತಿಕವೇ ? ಅವಕಾಶವಾದಿತನವೇ ? ವ್ಯಕ್ತಿಗತವೇ ? ಸಾಂದರ್ಭಿಕ ತೀರ್ಮಾನಗಳೇ ?…

6 hours ago

ಅರಸೇಶ್ವರಿ ದೇವಿಯ ಜಾಗ ಖಾಸಗಿ ವ್ಯಕ್ತಿಗೆ ಖಾತೆ:ಸರ್ಕಾರಿ ಜಮೀನು ಒತ್ತುವರಿ ತೆರವು ಸೇರಿದಂತೆ ಇತರೆ ಬೇಡಿಕೆ ಈಡೇರಿಕೆಗಾಗಿ ಒತ್ತಾಯಿಸಿ ಪ್ರತಿಭಟ‌ನೆ

ತಾಲ್ಲೂಕಿನ ಕಾಡತಿಪ್ಪೂರು ಗ್ರಾಮದಲ್ಲಿನ ಇತಿಹಾಸ ಪ್ರಸಿದ್ಧ ಅರಸೇಶ್ವರಿ ದೇಗುಲದ ಇನಾಮ್ತಿ ಜಮೀನನ್ನು ಕಂದಾಯ ಇಲಾಖೆ ಅಧಿಕಾರಿಗಳು ಖಾಸಗಿ ವ್ಯಕ್ತಿಗಳ ಜೊತೆ…

7 hours ago

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

19 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

22 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

23 hours ago