ವಿಶ್ವಕಪ್: ಕೀವೀಸ್ ಕಿವಿ ಹಿಂಡಿದ ಕೊಹ್ಲಿ – ಶಮಿ !: ಟೇಬಲ್ ಟಾಪ್ ಗೆ ಏರಿದ ಭಾರತ

 

ವಿಶ್ವಕಪ್ ನಲ್ಲಿ ಒಂದೂ ಸೋಲನ್ನು ಅನುಭವಿಸದೆ ಟೇಬಲ್ ನಲ್ಲಿ ಮೊದಲೆರಡು ಸ್ಥಾನದಲ್ಲಿದ್ದ ತಂಡಗಳಾದ ನ್ಯೂಜಿಲ್ಯಾಂಡ್ ಹಾಗೂ ಭಾರತ ತಂಡದ ಪರಸ್ಪರ ಹೋರಾಟದಲ್ಲಿ ಭಾರತ ಗೆದ್ದು ಮೊದಲ ಸ್ಥಾನದಲ್ಲಿ ರಾರಾಜಿಸುತ್ತಿದೆ.

ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಬೌಲಿಂಗ್ ವಿಭಾಗ ಕೀವೀಸ್ ತಂಡವನ್ನು ಇನ್ನಿಲ್ಲದಂತೆ ಕಾಡಿದರು.

ಕೀವೀಸ್ ಪರವಾಗಿ ಮಿಚೆಲ್ 130 ರನ್ ಗಳಿಸಿದರೆ, ರಚಿನ್ ರವೀಂದ್ರ 75 ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು ಹಾಗೂ 273 ರನ್ ಗಳಿಸಿ ಸ್ಪರ್ಧಾತ್ಮಕ ಮೊತ್ತ ಪೇರಿಸಿದರು.

ಭಾರತದ ಪರವಾಗಿ ಮೊಹಮ್ಮದ್ ಶಮಿ 5 ವಿಕೆಟ್ ಗೊಂಚಲು ಪಡೆದರೆ, ಕುಲದೀಪ್ ಯಾದವ್ 2 ವಿಕೆಟ್ , ಸಿರಾಜ್ ಹಾಗೂ ಜಸ್ಪ್ರಿತ್ ಬುಮ್ರಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (46) ಹಾಗೂ ಯುವ ಆಟಗಾರ ಶುಭ್ಮನ್ ಗಿಲ್ (26) ರನ್ ಗಳಿಸಿದರೆ, ಅನುಭವಿ ಆಟಗಾರ ವಿರಾಟ್ ಕೊಹ್ಲಿ (95) ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (39) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ನಾಲ್ಕು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದಿದ್ದ ಮೊಹಮದ್ ಶಮಿ ಐದು ವಿಕೆಟ್ ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಬಹಿರ್ದೆಸೆಗೆ ಹೋದ ಬಾಲಕನ ಜೀವ ಕಸಿದ ವೇಗದ ಆಟೋ

ಕಲಬುರಗಿ: ಜಿಲ್ಲೆಯ ಚಿಂಚೋಳಿ ತಾಲೂಕಿನ ಐನೋಳಿ ಗ್ರಾಮದಲ್ಲಿ ದುರ್ಘಟನೆಯೊಂದು ಸಂಭವಿಸಿದ್ದು, ರಸ್ತೆ ಪಕ್ಕದಲ್ಲಿ ಬಹಿರ್ದೆಸೆಗೆ ಕುಳಿತಿದ್ದ 6 ವರ್ಷದ ಬಾಲಕನ…

2 hours ago

ವೀಲಿಂಗ್ ಪುಂಡನ ಬೈಕ್ ಡಿಕ್ಕಿ: ಗೃಹ ರಕ್ಷಕ ದಳ ಸಿಬ್ಬಂದಿ ಗಂಭೀರ ಗಾಯ

ದೊಡ್ಡಬಳ್ಳಾಪುರ: ಮೋಟಾರ್ ವಾಹನಗಳ ತಪಾಸಣೆ ವೇಳೆ ವೀಲಿಂಗ್ ಮಾಡುತ್ತಿದ್ದ ಬೈಕ್ ಸವಾರನೊಬ್ಬ ಗೃಹ ರಕ್ಷಕ ದಳದ ಸಿಬ್ಬಂದಿಗೆ ಡಿಕ್ಕಿ ಹೊಡೆದು…

22 hours ago

ಡಿಸಿ ಭವನದಲ್ಲಿ ಜಿಲ್ಲಾಧಿಕಾರಿಗಳಿಂದ ರಿಯಾಲಿಟಿ ಚೆಕ್: ಅಧಿಕಾರಿಗಳು ಫುಲ್ ಶಾಕ್: ಸಮಯಕ್ಕೆ ಬಾರದ ಅಧಿಕಾರಿಗಳಿಗೆ ಡಿಸಿ ಕ್ಲಾಸ್

ಬೆಂಗಳೂರು ಗ್ರಾಮಾಂತರ: ಸೋಮವಾರ ಬೆಳಗ್ಗೆ ಎಂದಿನಂತೆ ಅಧಿಕಾರಿಗಳು ಮತ್ತು ಸಿಬ್ಬಂದಿ ಕಚೇರಿಗಳಿಗೆ ಆಗಮಿಸುತ್ತಿದ್ದ ವೇಳೆ, ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.…

1 day ago

ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯಲ್ಲಿ ವಾಹನ ದಟ್ಟಣೆ ಹೆಚ್ಚಳ: ಫ್ಲೈಓವರ್, ರಸ್ತೆ ವಿಸ್ತರಣೆ, ಬಸ್ ನಿಲ್ದಾಣ ನಿರ್ಮಾಣಕ್ಕೆ ಆಗ್ರಹ

ದೊಡ್ಡಬಳ್ಳಾಪುರ: ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿಯ ಹುಲಿಕುಂಟೆ ಟೋಲ್‌ಪ್ಲಾಜಾದಲ್ಲಿ ಶುಲ್ಕ ಪಾವತಿಸುವುದನ್ನು ತಪ್ಪಿಸಲು ವಾಹನಗಳು ಹೆಚ್ಚಿನ ಪ್ರಮಾಣದಲ್ಲಿ ನೆಲಮಂಗಲ–ದೊಡ್ಡಬಳ್ಳಾಪುರ ರಸ್ತೆಯನ್ನು ಪರ್ಯಾಯ…

1 day ago

ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ……

ನಾವೂ ಒಂದು ಪಾತ್ರವಾಗುತ್ತಾ..... ಹಳ್ಳಿಗಳಿಂದ ಅಪಾರ್ಟ್‌ಮೆಂಟ್ ವರೆಗೆ ಸಾಗುತ್ತಿರುವ ಆಧುನಿಕ ನಾಗರಿಕ ಸಮಾಜ......... ಕೆಲ ವರುಷಗಳ ಹಿಂದೆ ಹುಲ್ಲಿನ ಗುಡಿಸಲು,…

1 day ago

ಉಪೇಂದ್ರ ಮತ್ತು ಪ್ರಜಾಕೀಯ……..

ಬದಲಾವಣೆ ಬಯಸುವ, ಪರ್ಯಾಯ ರಾಜಕೀಯ ಶಕ್ತಿಗಾಗಿ ಹಾತೊರೆಯುತ್ತಿರುವ ಕೆಲವು ಯುವಕರು ಆಸಕ್ತಿಯಿಂದ - ಆಶಾಭಾವನೆಯಿಂದ - ಕುತೂಹಲದಿಂದ ಕಣ್ಣರಳಿಸಿ ನೋಡುತ್ತಿರುವ…

2 days ago