ವಿಶ್ವಕಪ್: ಕೀವೀಸ್ ಕಿವಿ ಹಿಂಡಿದ ಕೊಹ್ಲಿ – ಶಮಿ !: ಟೇಬಲ್ ಟಾಪ್ ಗೆ ಏರಿದ ಭಾರತ

 

ವಿಶ್ವಕಪ್ ನಲ್ಲಿ ಒಂದೂ ಸೋಲನ್ನು ಅನುಭವಿಸದೆ ಟೇಬಲ್ ನಲ್ಲಿ ಮೊದಲೆರಡು ಸ್ಥಾನದಲ್ಲಿದ್ದ ತಂಡಗಳಾದ ನ್ಯೂಜಿಲ್ಯಾಂಡ್ ಹಾಗೂ ಭಾರತ ತಂಡದ ಪರಸ್ಪರ ಹೋರಾಟದಲ್ಲಿ ಭಾರತ ಗೆದ್ದು ಮೊದಲ ಸ್ಥಾನದಲ್ಲಿ ರಾರಾಜಿಸುತ್ತಿದೆ.

ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು, ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ಬೌಲಿಂಗ್ ವಿಭಾಗ ಕೀವೀಸ್ ತಂಡವನ್ನು ಇನ್ನಿಲ್ಲದಂತೆ ಕಾಡಿದರು.

ಕೀವೀಸ್ ಪರವಾಗಿ ಮಿಚೆಲ್ 130 ರನ್ ಗಳಿಸಿದರೆ, ರಚಿನ್ ರವೀಂದ್ರ 75 ರನ್ ಗಳಿಸುವ ಮೂಲಕ ತಂಡವನ್ನು ಸಂಕಷ್ಟದಿಂದ ಪಾರು ಮಾಡಿದರು ಹಾಗೂ 273 ರನ್ ಗಳಿಸಿ ಸ್ಪರ್ಧಾತ್ಮಕ ಮೊತ್ತ ಪೇರಿಸಿದರು.

ಭಾರತದ ಪರವಾಗಿ ಮೊಹಮ್ಮದ್ ಶಮಿ 5 ವಿಕೆಟ್ ಗೊಂಚಲು ಪಡೆದರೆ, ಕುಲದೀಪ್ ಯಾದವ್ 2 ವಿಕೆಟ್ , ಸಿರಾಜ್ ಹಾಗೂ ಜಸ್ಪ್ರಿತ್ ಬುಮ್ರಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

ಸ್ಪರ್ಧಾತ್ಮಕ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ (46) ಹಾಗೂ ಯುವ ಆಟಗಾರ ಶುಭ್ಮನ್ ಗಿಲ್ (26) ರನ್ ಗಳಿಸಿದರೆ, ಅನುಭವಿ ಆಟಗಾರ ವಿರಾಟ್ ಕೊಹ್ಲಿ (95) ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (39) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು.

ನಾಲ್ಕು ಪಂದ್ಯಗಳಲ್ಲಿ ವಿಶ್ರಾಂತಿ ಪಡೆದಿದ್ದ ಮೊಹಮದ್ ಶಮಿ ಐದು ವಿಕೆಟ್ ಪಡೆದು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಸಚಿವ ಸಂಪುಟ ವಿಸ್ತರಣೆ: 20 ಮಂದಿಗೆ ಸಚಿವ ಸ್ಥಾನ; ಶರತ್ ಬಚ್ಚೇಗೌಡಗೆ ಮತ್ತೆ ನಿರಾಸೆ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…

2 hours ago

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

10 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

14 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

23 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago