ಪಾಯಿಂಟ್ ಪಟ್ಟಿಯ ಅಗ್ರ ಕ್ರಮಾಂಕದ ಎರಡು ತಂಡಗಳ ಜಿದ್ದಾಜಿದ್ದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಾಖಲೆಯ 49 ನೇ ಶತಕದಬ್ಬರ ಹಾಗೂ ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಅವರ ಕೈಚಳಕದಿಂದ 243ರನ್ ಗಳ ಬೃಹತ್ ಜಯ ಸಾಧಿಸಿತು.
ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (23) ಹಾಗೂ ರೋಹಿತ್ ಶರ್ಮಾ (40) ರನ್ ಭರ್ಜರಿ ಆರಂಭ ನೀಡಿದರು.
ಬೃಹತ್ ಮೊತ್ತ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರರಾದ ನಾಯಕ ತೆಂಬು ಬವುಮಾ (11) ಹಾಗೂ ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿರುವ ಕ್ವಿಂಟಾನ್ ಡಿ ಕಾಕ್ (5) ರನ್ ಗಳಿಸಿ ಕ್ರಮವಾಗಿ ಜಡೇಜಾ ಹಾಗೂ ಸಿರಾಜ್ ಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಮಧ್ಯಮ ಕ್ರಮಾಂಕದ ಆಟಗಾರರಾದ ಡುಸೇನ್ (13), ಕ್ಲಾಸನ್ (1), ಮಾಕ್ರಮ್ (9), ಹಾಗೂ ಮಿಲ್ಲರ್ (11) ರನ್ ಗಳಿಸುವಲ್ಲಿ ಪರದಾಡಿ ವಿಕೆಟ್ ಒಪ್ಪಿಸಿದರು,ಆ ಮೂಲಕ ತಂಡ 83 ರನ್ ಗೆ ಆಲೌಟ್ ಆಯಿತು.
ಏಕದಿನ ಕ್ರಿಕೆಟ್ ನಲ್ಲಿ ಅತ್ಯಧಿಕ ಶತಕ (49) ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯ ಶತಕ ಸಿಡಿಸಿ ದಾಖಲೆ ಸರಿಗಟ್ಟಿದರು, ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…
ಬದಲಾವಣೆ......... ರೋಗಗಳ ಆವಾಸಸ್ಥಾನವಾಗುತ್ತಿರುವ ಆಸ್ಪತ್ರೆಗಳು...... ರೋಗಿಗಳ ತವರುಮನೆಯಂತಾಗುತ್ತಿರುವ ಮೆಡಿಕಲ್ ಲ್ಯಾಬೋರೇಟರಿಗಳು..... ಅನಾಗರಿಕ ಸಮಾಜ ನಿರ್ಮಾಣಕ್ಕೆ ಕಾರಣವಾಗುತ್ತಿರುವ ಶಿಕ್ಷಣ ಸಂಸ್ಥೆಗಳು........ ಭ್ರಷ್ಟಾಚಾರದ…
ನಟ ದರ್ಶನ್ ವಿದೇಶದಲ್ಲಿ ಡೆವಿಲ್ ಸಿನಿಮಾ ಶೂಟಿಂಗ್ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಆಗಿದ್ದಾರೆ. ಥಾಯ್ಲೆಂಡ್ ನಿಂದ ತಡ ರಾತ್ರಿ 11:45…
ನಿನ್ನೆ(ಜು.24 ಗುರುವಾರ) ಭೀಮನ ಅಮವಾಸ್ಯೆ ಹಿನ್ನೆಲೆ ಪತಿ ಕಾಲಿಗೆ ಪೂಜೆ ಮಾಡಿದ್ದ ಪತ್ನಿ ರಾತ್ರಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ ಘಟನೆ…
ಜಿಲ್ಲೆಯಲ್ಲಿ ಪ್ರಕೃತಿ ವಿಕೋಪಗಳಿಂದ ಬೆಳೆ ನಷ್ಟ ಸಂಭವಿಸಿದರೆ ರೈತರಿಗೆ ಪರಿಹಾರ ನೀಡುವ ಮೂಲಕ ಆರ್ಥಿಕ ಭದ್ರತೆ ಒದಗಿಸುವ ಉದ್ದೇಶದಿಂದ ಪ್ರಧಾನ…