ಪಾಯಿಂಟ್ ಪಟ್ಟಿಯ ಅಗ್ರ ಕ್ರಮಾಂಕದ ಎರಡು ತಂಡಗಳ ಜಿದ್ದಾಜಿದ್ದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಾಖಲೆಯ 49 ನೇ ಶತಕದಬ್ಬರ ಹಾಗೂ ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಅವರ ಕೈಚಳಕದಿಂದ 243ರನ್ ಗಳ ಬೃಹತ್ ಜಯ ಸಾಧಿಸಿತು.
ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (23) ಹಾಗೂ ರೋಹಿತ್ ಶರ್ಮಾ (40) ರನ್ ಭರ್ಜರಿ ಆರಂಭ ನೀಡಿದರು.
ಬೃಹತ್ ಮೊತ್ತ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರರಾದ ನಾಯಕ ತೆಂಬು ಬವುಮಾ (11) ಹಾಗೂ ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿರುವ ಕ್ವಿಂಟಾನ್ ಡಿ ಕಾಕ್ (5) ರನ್ ಗಳಿಸಿ ಕ್ರಮವಾಗಿ ಜಡೇಜಾ ಹಾಗೂ ಸಿರಾಜ್ ಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಮಧ್ಯಮ ಕ್ರಮಾಂಕದ ಆಟಗಾರರಾದ ಡುಸೇನ್ (13), ಕ್ಲಾಸನ್ (1), ಮಾಕ್ರಮ್ (9), ಹಾಗೂ ಮಿಲ್ಲರ್ (11) ರನ್ ಗಳಿಸುವಲ್ಲಿ ಪರದಾಡಿ ವಿಕೆಟ್ ಒಪ್ಪಿಸಿದರು,ಆ ಮೂಲಕ ತಂಡ 83 ರನ್ ಗೆ ಆಲೌಟ್ ಆಯಿತು.
ಏಕದಿನ ಕ್ರಿಕೆಟ್ ನಲ್ಲಿ ಅತ್ಯಧಿಕ ಶತಕ (49) ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯ ಶತಕ ಸಿಡಿಸಿ ದಾಖಲೆ ಸರಿಗಟ್ಟಿದರು, ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…
ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…
ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…
ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…
ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…
ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್ಐಆರ್ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…