ವಿಶ್ವಕಪ್: ಬರ್ತಡೇ ಬಾಯ್ ಕೊಹ್ಲಿಗೆ ಗೆಲುವಿನ ಗಿಫ್ಟ್ ನೀಡಿದ ಟೀಂ ಇಂಡಿಯಾ !

ಪಾಯಿಂಟ್ ಪಟ್ಟಿಯ ಅಗ್ರ ಕ್ರಮಾಂಕದ ಎರಡು ತಂಡಗಳ ಜಿದ್ದಾಜಿದ್ದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಾಖಲೆಯ 49 ನೇ ಶತಕದಬ್ಬರ ಹಾಗೂ ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಅವರ ಕೈಚಳಕದಿಂದ 243ರನ್ ಗಳ ಬೃಹತ್ ಜಯ ಸಾಧಿಸಿತು.

ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (23) ಹಾಗೂ ರೋಹಿತ್ ಶರ್ಮಾ (40) ರನ್ ಭರ್ಜರಿ ಆರಂಭ ನೀಡಿದರು.

ಮೊದಲ ವಿಕೆಟ್ ನಷ್ಟಕ್ಕೆ 63 ರನ್ ಗಳಿಸಿದ್ದ ಭಾರತ ತಂಡ ನಾಯಕ ರೋಹಿತ್ ಶರ್ಮಾ ಅವರನ್ನು ಕಳೆದುಕೊಂಡಿತು, ನಂತರ ಗಿಲ್ ಕೂಡ ವಿಕೆಟ್ ಒಪ್ಪಿಸಿದರು, ಆಗ ಕ್ರೀಸ್ ಗೆ ಬಂದ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ ಹಾಗೂ ವಿರಾಟ್ ಕೊಹ್ಲಿ ಮೂರನೇ ವಿಕೆಟ್ ಗೆ 134 ರನ್ ಗಳಿಸುವ ಮೂಲಕ ತಂಡವನ್ನು ಬೃಹತ್ ಮೊತ್ತದತ್ತ ಕೊಂಡೊಯ್ದರು.

ದಾಖಲೆಯ 49 ನೇ ಶತಕ ಸಿಡಿಸಿದ ವಿರಾಟ್ ಕೊಹ್ಲಿ (101) ರನ್ ಗಳಿಸಿ ಅಜೇಯರಾಗಿ ಉಳಿದರೆ, ಶ್ರೇಯಸ್ ಅಯ್ಯರ್ (77), ಸೂರ್ಯ ಕುಮಾರ್ ಯಾದವ್ (22) ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ (29) ರನ್ ಗಳಿಸುವ ಮೂಲಕ ತಂಡದ ಮೊತ್ತ 326 ರನ್ ಗಳಿ‌ಸಲು ನೆರವಾದರು.

ಬೃಹತ್ ಮೊತ್ತ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರರಾದ ನಾಯಕ ತೆಂಬು ಬವುಮಾ (11) ಹಾಗೂ ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿರುವ ಕ್ವಿಂಟಾನ್ ಡಿ ಕಾಕ್ (5) ರನ್ ಗಳಿಸಿ ಕ್ರಮವಾಗಿ ಜಡೇಜಾ ಹಾಗೂ ಸಿರಾಜ್ ಗೆ ವಿಕೆಟ್ ಒಪ್ಪಿಸಿದರು.

ನಂತರ ಬಂದ ಮಧ್ಯಮ ಕ್ರಮಾಂಕದ ಆಟಗಾರರಾದ ಡುಸೇನ್ (13), ಕ್ಲಾಸನ್ (1), ಮಾಕ್ರಮ್ (9), ಹಾಗೂ ಮಿಲ್ಲರ್ (11) ರನ್ ಗಳಿಸುವಲ್ಲಿ ಪರದಾಡಿ ವಿಕೆಟ್ ಒಪ್ಪಿಸಿದರು,ಆ ಮೂಲಕ ತಂಡ 83 ರನ್ ಗೆ ಆಲೌಟ್ ಆಯಿತು.

ಭಾರತದ ಪರವಾಗಿ ಆಲ್ ರೌಂಡರ್ ರವೀಂದ್ರ ಜಡೇಜಾ (5), ಕುಲದೀಪ್ ಯಾದವ್ ಹಾಗೂ ಮೊಹಮದ್ ಶಮಿ ಎರಡು ವಿಕೆಟ್ ಕಬಳಿಸಿದರೆ ಸಿರಾಜ್ ಒಂದು ವಿಕೆಟ್ ಪಡೆದು ಎದುರಾಳಿಗಳನ್ನು ಆಲೌಟ್ ಮಾಡಿದರು.

ಏಕದಿನ ಕ್ರಿಕೆಟ್ ನಲ್ಲಿ ಅತ್ಯಧಿಕ ಶತಕ (49) ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯ ಶತಕ ಸಿಡಿಸಿ ದಾಖಲೆ ಸರಿಗಟ್ಟಿದರು, ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಅತಿಥಿ ಶಿಕ್ಷಕರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು ಗ್ರಾಮಾಂತರ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರವ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಬರುವ ವಸತಿ ಶಾಲೆಗಳಲ್ಲಿ ತಾತ್ಕಾಲಿಕವಾಗಿ ಗೌರವಧನ ಆಧಾರದ…

2 hours ago

ಜೂ.05 ರಿಂದ ಮೂರು ದಿನಗಳ ಕಾಲ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ ಮತ್ತು ಮಾರಾಟ ಮೇಳ

ಮಾವು ಮತ್ತು ಹಲಸು ಹಣ್ಣಿನ ಋತುಮಾನದ ಈ ಸಂದರ್ಭದಲ್ಲಿ ತೋಟಗಾರಿಕೆ ಇಲಾಖೆ ವತಿಯಿಂದ ರೈತರಿಗೆ ಹಾಗೂ ಗ್ರಾಹಕರಿಗೆ ಅನುಕೂಲವಾಗಲೆಂದು ಒಂದೇ…

5 hours ago

ಟಿವಿಎಸ್ ಎಕ್ಸ್‌ಎಲ್-100 ಕಳವು: ಕಳ್ಳನ ಕೈಚಳಕ ಸಿಸಿಟಿವಿಯಲ್ಲಿ ಸೆರೆ

ದೊಡ್ಡಬಳ್ಳಾಪುರ ನಗರದ ಡಿ ಕ್ರಾಸ್ ಬಳಿ ನಿಲ್ಲಿಸಿದ್ದ ಟಿವಿಎಸ್ ಎಕ್ಸ್‌ಎಲ್-100 ವಾಹನವನ್ನು ಕಳ್ಳನೊಬ್ಬ ಕಳವು ಮಾಡಿಕೊಂಡು ಹೋಗಿರುವ ಘಟನೆ ಬುಧವಾರ…

9 hours ago

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

24 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

24 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

1 day ago