ಪಾಯಿಂಟ್ ಪಟ್ಟಿಯ ಅಗ್ರ ಕ್ರಮಾಂಕದ ಎರಡು ತಂಡಗಳ ಜಿದ್ದಾಜಿದ್ದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಾಖಲೆಯ 49 ನೇ ಶತಕದಬ್ಬರ ಹಾಗೂ ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಅವರ ಕೈಚಳಕದಿಂದ 243ರನ್ ಗಳ ಬೃಹತ್ ಜಯ ಸಾಧಿಸಿತು.
ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (23) ಹಾಗೂ ರೋಹಿತ್ ಶರ್ಮಾ (40) ರನ್ ಭರ್ಜರಿ ಆರಂಭ ನೀಡಿದರು.
ಬೃಹತ್ ಮೊತ್ತ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರರಾದ ನಾಯಕ ತೆಂಬು ಬವುಮಾ (11) ಹಾಗೂ ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿರುವ ಕ್ವಿಂಟಾನ್ ಡಿ ಕಾಕ್ (5) ರನ್ ಗಳಿಸಿ ಕ್ರಮವಾಗಿ ಜಡೇಜಾ ಹಾಗೂ ಸಿರಾಜ್ ಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಮಧ್ಯಮ ಕ್ರಮಾಂಕದ ಆಟಗಾರರಾದ ಡುಸೇನ್ (13), ಕ್ಲಾಸನ್ (1), ಮಾಕ್ರಮ್ (9), ಹಾಗೂ ಮಿಲ್ಲರ್ (11) ರನ್ ಗಳಿಸುವಲ್ಲಿ ಪರದಾಡಿ ವಿಕೆಟ್ ಒಪ್ಪಿಸಿದರು,ಆ ಮೂಲಕ ತಂಡ 83 ರನ್ ಗೆ ಆಲೌಟ್ ಆಯಿತು.
ಏಕದಿನ ಕ್ರಿಕೆಟ್ ನಲ್ಲಿ ಅತ್ಯಧಿಕ ಶತಕ (49) ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯ ಶತಕ ಸಿಡಿಸಿ ದಾಖಲೆ ಸರಿಗಟ್ಟಿದರು, ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ಬೆಂಗಳೂರು ಗ್ರಾಮಾಂತರ: ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ…
ದೊಡ್ಡಬಳ್ಳಾಪುರ: ವಿದ್ಯಾರ್ಥಿಗಳಲ್ಲಿ ಕ್ರೀಡಾ ಪ್ರತಿಭೆಯನ್ನು ಗುರುತಿಸಿ, ಅವರಿಗೆ ಉತ್ತಮ ತರಬೇತಿ ಹಾಗೂ ಅವಕಾಶ ಕಲ್ಪಿಸುವ ಉದ್ದೇಶದಿಂದ ನಗರದ ನ್ಯಾಷನಲ್ ಪ್ರೈಡ್…
ಪ್ರತಿಯೊಂದು ಮಗುವಿಗೂ ಶಿಕ್ಷಣ ದೊರೆಯಬೇಕು ಎಂಬ ಸರ್ಕಾರದ ಆಶಯದ ನಡುವೆಯೂ ನಾನಾ ಕಾರಣಗಳಿಂದ ಶಾಲೆಯಿಂದ ಹೊರಗುಳಿದಿರುವ ಹಾಗೂ ಶಾಲೆಗೆ…
ದೊಡ್ಡಬಳ್ಳಾಪುರ: ಪಾಕಿಸ್ತಾನಿ ಗ್ಯಾಂಗ್ಸ್ಟರ್ಗಳೊಂದಿಗೆ ಇನ್ಸ್ಟಾಗ್ರಾಂ ಮೂಲಕ ಸಂಪರ್ಕದಲ್ಲಿದ್ದ ಆರೋಪದ ಮೇರೆಗೆ ದೊಡ್ಡಬಳ್ಳಾಪುರ ನಗರ ಪೊಲೀಸರು ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ನಗರದ…
ದೊಡ್ಡಬಳ್ಳಾಪುರ: ಶ್ರಾವಣ ಮಾಸದ ಶುಭ ಸಂದರ್ಭದಲ್ಲಿ ಆಚರಿಸಲಾಗುವ ವರಮಹಾಲಕ್ಷ್ಮಿ ಹಬ್ಬವನ್ನು ದೊಡ್ಡಬಳ್ಳಾಪುರ ತಾಲ್ಲೂಕಿನಾದ್ಯಂತ ಶುಕ್ರವಾರ ಭಕ್ತಿಭಾವ ಹಾಗೂ ಸಂಭ್ರಮದಿಂದ ಆಚರಿಸಲಾಯಿತು.…
ದೊಡ್ಡಬಳ್ಳಾಪುರ: ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಾಲಯದ ಆಡಳಿತ ಮಂಡಳಿ ವತಿಯಿಂದ…