ಪಾಯಿಂಟ್ ಪಟ್ಟಿಯ ಅಗ್ರ ಕ್ರಮಾಂಕದ ಎರಡು ತಂಡಗಳ ಜಿದ್ದಾಜಿದ್ದಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾದ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ದಾಖಲೆಯ 49 ನೇ ಶತಕದಬ್ಬರ ಹಾಗೂ ರವೀಂದ್ರ ಜಡೇಜಾ ಮತ್ತು ಕುಲದೀಪ್ ಯಾದವ್ ಅವರ ಕೈಚಳಕದಿಂದ 243ರನ್ ಗಳ ಬೃಹತ್ ಜಯ ಸಾಧಿಸಿತು.
ಕೊಲ್ಕತ್ತಾದ ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬ್ಯಾಟಿಂಗ್ ಆಯ್ದುಕೊಂಡರು, ಆರಂಭಿಕ ಆಟಗಾರರಾದ ಶುಭ್ಮನ್ ಗಿಲ್ (23) ಹಾಗೂ ರೋಹಿತ್ ಶರ್ಮಾ (40) ರನ್ ಭರ್ಜರಿ ಆರಂಭ ನೀಡಿದರು.
ಬೃಹತ್ ಮೊತ್ತ ಬೆನ್ನತ್ತಿದ್ದ ದಕ್ಷಿಣ ಆಫ್ರಿಕಾದ ಆರಂಭಿಕ ಆಟಗಾರರಾದ ನಾಯಕ ತೆಂಬು ಬವುಮಾ (11) ಹಾಗೂ ಟೂರ್ನಿಯಲ್ಲಿ ಅತ್ಯಧಿಕ ರನ್ ಗಳಿಸಿರುವ ಕ್ವಿಂಟಾನ್ ಡಿ ಕಾಕ್ (5) ರನ್ ಗಳಿಸಿ ಕ್ರಮವಾಗಿ ಜಡೇಜಾ ಹಾಗೂ ಸಿರಾಜ್ ಗೆ ವಿಕೆಟ್ ಒಪ್ಪಿಸಿದರು.
ನಂತರ ಬಂದ ಮಧ್ಯಮ ಕ್ರಮಾಂಕದ ಆಟಗಾರರಾದ ಡುಸೇನ್ (13), ಕ್ಲಾಸನ್ (1), ಮಾಕ್ರಮ್ (9), ಹಾಗೂ ಮಿಲ್ಲರ್ (11) ರನ್ ಗಳಿಸುವಲ್ಲಿ ಪರದಾಡಿ ವಿಕೆಟ್ ಒಪ್ಪಿಸಿದರು,ಆ ಮೂಲಕ ತಂಡ 83 ರನ್ ಗೆ ಆಲೌಟ್ ಆಯಿತು.
ಏಕದಿನ ಕ್ರಿಕೆಟ್ ನಲ್ಲಿ ಅತ್ಯಧಿಕ ಶತಕ (49) ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿದ್ದ ದಾಖಲೆಯ ಶತಕ ಸಿಡಿಸಿ ದಾಖಲೆ ಸರಿಗಟ್ಟಿದರು, ಆ ಮೂಲಕ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.
ದೊಡ್ಡಬಳ್ಳಾಪುರ: ತಾಲ್ಲೂಕಿನ ಹುಸ್ಕೂರು ಗ್ರಾಮದಲ್ಲಿ ಶ್ರೀ ಸಪ್ಪಲಮ್ಮದೇವಿ ಹಾಗೂ ಶ್ರೀ ದುರ್ಗಮ್ಮದೇವಿ ಜಾತ್ರಾ ಮಹೋತ್ಸವವು ಭಕ್ತಿಭಾವ ಮತ್ತು ಸಡಗರದಿಂದ ನಡೆಯಿತು.…
ವಿಜಯಪುರ: ಗೋವಾದಿಂದ ಮಹಾರಾಷ್ಟ್ರಕ್ಕೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಕೋಟಿ ಕೋಟಿ ರೂಪಾಯಿ ಮೌಲ್ಯದ ಮದ್ಯವನ್ನು ವಿಜಯಪುರ ಪೊಲೀಸರು ವಶಪಡಿಸಿಕೊಂಡಿದ್ದು, ಈ ವೇಳೆ…
ದಾವಣಗೆರೆ: ಎತ್ತುಗಳ ಕೊರತೆ ಹಾಗೂ ಟ್ರ್ಯಾಕ್ಟರ್ಗಳಿಗೆ ಹೆಚ್ಚುತ್ತಿರುವ ಡೀಸೆಲ್ ವೆಚ್ಚದ ನಡುವೆಯೇ ದಾವಣಗೆರೆ ಜಿಲ್ಲೆಯ ರೈತ ದಂಪತಿಯೊಬ್ಬರು ಕೃಷಿ ಕಾರ್ಯಕ್ಕೆ…
ಇಂದು ಬೆಂಗಳೂರಿನ ಮಡಿವಾಳದಲ್ಲಿರುವ ಎಫ್ಎಸ್ಎಲ್ ಕಚೇರಿಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಭೇಟಿ ನೀಡಿ ಪರಿಶೀಲನಾ ಸಭೆ ನಡೆಸಿದರು. ಈ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ರಾಷ್ಟ್ರೀಯ ಪಲ್ಸ್ ಪೋಲಿಯೋ ಅಭಿಯಾನವು ಜೂನ್ 28 ರಿಂದ ಜುಲೈ 01 ರವರೆಗೆ ನಡೆಯಲಿದ್ದು, ಈ…
ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದ ಸರ ಕಳ್ಳತನ ಪ್ರಕರಣವನ್ನು ಪೊಲೀಸರು ಕೇವಲ 24 ಗಂಟೆಗಳೊಳಗೆ ಭೇದಿಸಿ ಇಬ್ಬರು…