ವಿಶ್ವಕಪ್: ಬಾಂಗ್ಲಾವನ್ನು ಬಗ್ಗು ಬಡಿದ ಕೋಹ್ಲಿ: ರೋಹಿತ್ ಪಡೆಗೆ ನಾಲ್ಕನೇ ಗೆಲುವು

ವಿಶ್ವಕಪ್ ನಲ್ಲಿ ಭಜ೯ರಿ ಆರಂಭ ಪಡೆದಿರುವ ಭಾರತ ತಂಡ ತನ್ನ ಗೆಲುವಿನ ಓಟವನ್ನು ಬಾಂಗ್ಲಾದೇಶದ ವಿರುದ್ದವೂ ಮುಂದುವರಿದು ಅಜೇಯವಾಗಿ ಟೇಬಲ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿತು.

ಆಲ್ ರೌಂಡರ್ ಶಕಿಬ್ ಅಲ್ ಹಸನ್ ಅವರ ಅನುಪಸ್ಥಿತಿಯಲ್ಲಿ  ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ಶಾಂಟೋ ಬ್ಯಾಟಿಂಗ್ ಆಯ್ದುಕೊಂಡರು,  ಬಾಂಗ್ಲಾದೇಶದ ಆರಂಭಿಕ ಆಟಗಾರರಾದ ತಾನ್ಜಿನ್ ಹಸನ್ (51) ಹಾಗೂ ಲಿಟನ್ ದಾಸ್ (66) ರನ್ ಗಳಿಸಿ 93 ರನ್ ಗಳ ಭದ್ರ ಅಡಿಪಾಯ ಹಾಕಿದರು.

ಉತ್ತಮವಾಗಿ ಆಡುತ್ತಿದ್ದ ಬ್ಯಾಟಿಂಗ್ ಪಡೆಯನ್ನು ಬಲೆಗೆ ಬೀಳಿಸಿದ್ದು ಕುಲದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಬಲೆಗೆ ಬೀಳಿಸಿದರು, ನಂತರ ಬಂದ ಯಾವುದೇ ಬ್ಯಾಟ್ಸಮನ್ ಗಳು ಹೆಚ್ಚು ಹೊತ್ತು ನಿಲ್ಲಲಿಲ್ಲ.

ಆದರೆ ಮಧ್ಯಮ ಕ್ರಮಾಂಕದ ಆಟಗಾರರಾದ ರಹೀಮ್ (38) ಹಾಗೂ ಮೊಹಮದ್ ಉಲ್ಲಾ (46) ರನ್ ಗಳಿಸುವ ಮೂಲಕ ತಂಡವನ್ನು 250 ರ ಗಡಿ ದಾಟಿಸಿದರು, ಭಾರತದ ಪರವಾಗಿ ಜಸ್ಪ್ರಿತ್ ಬುಮ್ರಾ, ಸಿರಾಜ್ ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರೆ ಶಾರ್ದುಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಒಂದು ವಿಕೆಟ್ ಪಡೆದರು ‌

ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಏಳು ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ (48) ಹಾಗೂ ಶುಭಮನ್ ಗಿಲ್ ಐದು ಬೌಂಡರಿ ಹಾಗೂ ಎರಡು ಸಿಕ್ಸರ್ ಸಿಡಿಸಿ (53) ರನ್ ಗಳಿಸುವ ಮೂಲಕ 88 ರನ್ ಜೊತೆಯಾಟ ನಡೆಸಿ ಹಸನ್ ಮೊಹಮದ್ ಹಾಗೂ ಹಸನ್ ಮಿರ್ಜಾಗೆ ವಿಕೆಟ್ ಒಪ್ಪಿಸಿದರು.

ನಂತರ ಒಂದಾದ ಅನುಭವಿ ಆಟಗಾರ ವಿರಾಟ್ ಕೋಹ್ಲಿ ಆರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ನೆರವಿನಿಂದ (103)ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್(19) ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ (34) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಕೇಬಲ್ ಕಾರ್ಖಾನೆಗೆ ಬೆಂಕಿ: ಧಗಧಗ ಉರಿಯುತ್ತಿರುವ ಕಾರ್ಖಾನೆ

ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಕೇಬಲ್ ಕಾರ್ಖಾನೆಗೆ ಬೆಂಕಿ ತಗುಲಿದ್ದು, ಧಗಧಗನೆ ಕಾರ್ಖಾನೆ ಉರಿಯುತ್ತಿದೆ. ಈ ಘಟನೆ ಇಂದು ಸಂಜೆ ಸುಮಾರು…

10 hours ago

ಮೆಳೇಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ಕಳ್ಳತನ: ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟ ಕದ್ದೊಯ್ದ ಐನಾತಿಗಳು

ಮುಜರಾಯಿ ಇಲಾಖೆಗೆ ಒಳಪಡುವ ಆಂಜನೇಯ ಸ್ವಾಮಿ ದೇವಸ್ಥಾನದಲ್ಲಿ ರಾಮ ಲಕ್ಷ್ಮಣರಿಗೆ ಅಳವಡಿಸಿದ್ದ ಬೆಳ್ಳಿ ಕಿರೀಟವನ್ನು ಕಳ್ಳರು ಕದ್ದೊಯ್ದಿರುವ ಘಟನೆ ಕಳೆದ…

13 hours ago

ಮಾರಮ್ಮ ದೇವಿಯ ಮೂರು ಚಿನ್ನದ ತಾಳಿ, ನಾಲ್ಕು ಗುಂಡುಗಳನ್ನ ಕದ್ದ ಖದೀಮರು

ದೊಡ್ಡಬಳ್ಳಾಪುರ ತಾಲೂಕಿನ ಕಲ್ಲುದೇವನಹಳ್ಳಿ ಮಾರಮ್ಮ ದೇವಿ ದೇವಸ್ಥಾನದಲ್ಲಿ ಕಳೆದ ರಾತ್ರಿ ಕಳ್ಳತನ‌ ನಡೆದಿದೆ.. ಕಲ್ಲುದೇವನಹಳ್ಳಿ ಗ್ರಾಮದ ಮಧ್ಯ ಭಾಗದಲ್ಲಿರುವ ಮಾರಮ್ಮ…

14 hours ago

T20 World Cup: ವಿಶ್ವ ವಿಜೇತ ಟೀಂ ಇಂಡಿಯಾಗೆ ದಾಖಲೆಯ ಮೂರನೇ T20 ವಿಶ್ವಕಪ್ ಕಿರೀಟ

ಅಹ್ಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಟಿ20 ವಿಶ್ವಕಪ್ ಫೈನಲ್ಸ್ ಪಂದ್ಯದಲ್ಲಿ ಭಾರತ ತಂಡ ನ್ಯೂಜಿಲ್ಯಾಂಡ್ ವಿರುದ್ಧ ಅದ್ಭುತವಾದ…

1 day ago

2026-27ನೇ ಸಾಲಿನ ರಾಜ್ಯ ಬಜೆಟ್: ಬಜೆಟ್ ಬಗ್ಗೆ ಶಾಸಕ ಧೀರಜ್ ಮುನಿರಾಜ್ ಏನಂದ್ರು ಗೊತ್ತಾ….? ಅವರ ಪ್ರತಿಕ್ರಿಯೆ ಇಲ್ಲಿದೆ ನೋಡಿ….

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಎಲ್ಲಾ ಬಜೆಟ್ ಗಳ ಪೈಕಿ 2026-27ರ ಬಜೆಟ್ ಅತ್ಯಂತ ನಿರಾಶಾದಾಯಕವಾಗಿದೆ. ಈ ಬಜೆಟ್ ನಲ್ಲಿ ಹೊಸ…

1 day ago

ವಸತಿ ಶಾಲಾ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ ದಾಳಿ: ಒಬ್ಬ ವಿದ್ಯಾರ್ಥಿ ಸಾವು: 8 ಮಂದಿಗೆ ಗಾಯ

ಬಳ್ಳಾರಿ ನಗರದ "ಗುರುಕುಲ ವಸತಿ ಶಾಲೆ"ಯಲ್ಲಿ ಶನಿವಾರ ರಾತ್ರಿ ವಿದ್ಯಾರ್ಥಿಯೊಬ್ಬ ತನ್ನ ಸಹಪಾಠಿಗಳ ಮೇಲೆ ಕಬ್ಬಿಣದ ಸರಳು, ಸ್ಕ್ರೂಡ್ರೈವರ್‌, ಚಾಕುವಿನಿಂದ…

2 days ago