ವಿಶ್ವಕಪ್: ಬಾಂಗ್ಲಾವನ್ನು ಬಗ್ಗು ಬಡಿದ ಕೋಹ್ಲಿ: ರೋಹಿತ್ ಪಡೆಗೆ ನಾಲ್ಕನೇ ಗೆಲುವು

ವಿಶ್ವಕಪ್ ನಲ್ಲಿ ಭಜ೯ರಿ ಆರಂಭ ಪಡೆದಿರುವ ಭಾರತ ತಂಡ ತನ್ನ ಗೆಲುವಿನ ಓಟವನ್ನು ಬಾಂಗ್ಲಾದೇಶದ ವಿರುದ್ದವೂ ಮುಂದುವರಿದು ಅಜೇಯವಾಗಿ ಟೇಬಲ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿತು.

ಆಲ್ ರೌಂಡರ್ ಶಕಿಬ್ ಅಲ್ ಹಸನ್ ಅವರ ಅನುಪಸ್ಥಿತಿಯಲ್ಲಿ  ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ಶಾಂಟೋ ಬ್ಯಾಟಿಂಗ್ ಆಯ್ದುಕೊಂಡರು,  ಬಾಂಗ್ಲಾದೇಶದ ಆರಂಭಿಕ ಆಟಗಾರರಾದ ತಾನ್ಜಿನ್ ಹಸನ್ (51) ಹಾಗೂ ಲಿಟನ್ ದಾಸ್ (66) ರನ್ ಗಳಿಸಿ 93 ರನ್ ಗಳ ಭದ್ರ ಅಡಿಪಾಯ ಹಾಕಿದರು.

ಉತ್ತಮವಾಗಿ ಆಡುತ್ತಿದ್ದ ಬ್ಯಾಟಿಂಗ್ ಪಡೆಯನ್ನು ಬಲೆಗೆ ಬೀಳಿಸಿದ್ದು ಕುಲದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಬಲೆಗೆ ಬೀಳಿಸಿದರು, ನಂತರ ಬಂದ ಯಾವುದೇ ಬ್ಯಾಟ್ಸಮನ್ ಗಳು ಹೆಚ್ಚು ಹೊತ್ತು ನಿಲ್ಲಲಿಲ್ಲ.

ಆದರೆ ಮಧ್ಯಮ ಕ್ರಮಾಂಕದ ಆಟಗಾರರಾದ ರಹೀಮ್ (38) ಹಾಗೂ ಮೊಹಮದ್ ಉಲ್ಲಾ (46) ರನ್ ಗಳಿಸುವ ಮೂಲಕ ತಂಡವನ್ನು 250 ರ ಗಡಿ ದಾಟಿಸಿದರು, ಭಾರತದ ಪರವಾಗಿ ಜಸ್ಪ್ರಿತ್ ಬುಮ್ರಾ, ಸಿರಾಜ್ ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರೆ ಶಾರ್ದುಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಒಂದು ವಿಕೆಟ್ ಪಡೆದರು ‌

ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಏಳು ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ (48) ಹಾಗೂ ಶುಭಮನ್ ಗಿಲ್ ಐದು ಬೌಂಡರಿ ಹಾಗೂ ಎರಡು ಸಿಕ್ಸರ್ ಸಿಡಿಸಿ (53) ರನ್ ಗಳಿಸುವ ಮೂಲಕ 88 ರನ್ ಜೊತೆಯಾಟ ನಡೆಸಿ ಹಸನ್ ಮೊಹಮದ್ ಹಾಗೂ ಹಸನ್ ಮಿರ್ಜಾಗೆ ವಿಕೆಟ್ ಒಪ್ಪಿಸಿದರು.

ನಂತರ ಒಂದಾದ ಅನುಭವಿ ಆಟಗಾರ ವಿರಾಟ್ ಕೋಹ್ಲಿ ಆರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ನೆರವಿನಿಂದ (103)ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್(19) ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ (34) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡರಿಗೆ ಕೈತಪ್ಪಿದ ಮಂತ್ರಿಗಿರಿ; ಎರಡನೇ ಪಟ್ಟಿಯಲ್ಲಿ 20 ಮಂದಿಗೆ ಅವಕಾಶ

ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…

7 hours ago

ಆಧಾರ್ ಸಮಸ್ಯೆಗೆ ಸಿಲುಕಿದ 16 ಸಾವಿರ ವಿದ್ಯಾರ್ಥಿಗಳು! ಸೌಲಭ್ಯಗಳಿಂದ ವಂಚಿತರಾಗುವ ಆತಂಕ; ವಲಸೆ ಕಾರ್ಮಿಕರ ಮಕ್ಕಳಿಗೇ ಹೆಚ್ಚು ಸಂಕಷ್ಟ

ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…

12 hours ago

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

21 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

1 day ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

1 day ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago