ವಿಶ್ವಕಪ್: ಬಾಂಗ್ಲಾವನ್ನು ಬಗ್ಗು ಬಡಿದ ಕೋಹ್ಲಿ: ರೋಹಿತ್ ಪಡೆಗೆ ನಾಲ್ಕನೇ ಗೆಲುವು

ವಿಶ್ವಕಪ್ ನಲ್ಲಿ ಭಜ೯ರಿ ಆರಂಭ ಪಡೆದಿರುವ ಭಾರತ ತಂಡ ತನ್ನ ಗೆಲುವಿನ ಓಟವನ್ನು ಬಾಂಗ್ಲಾದೇಶದ ವಿರುದ್ದವೂ ಮುಂದುವರಿದು ಅಜೇಯವಾಗಿ ಟೇಬಲ್ ಪಟ್ಟಿಯಲ್ಲಿ ದ್ವಿತೀಯ ಸ್ಥಾನ ಅಲಂಕರಿಸಿತು.

ಆಲ್ ರೌಂಡರ್ ಶಕಿಬ್ ಅಲ್ ಹಸನ್ ಅವರ ಅನುಪಸ್ಥಿತಿಯಲ್ಲಿ  ಟಾಸ್ ಗೆದ್ದ ಬಾಂಗ್ಲಾದೇಶದ ನಾಯಕ ಶಾಂಟೋ ಬ್ಯಾಟಿಂಗ್ ಆಯ್ದುಕೊಂಡರು,  ಬಾಂಗ್ಲಾದೇಶದ ಆರಂಭಿಕ ಆಟಗಾರರಾದ ತಾನ್ಜಿನ್ ಹಸನ್ (51) ಹಾಗೂ ಲಿಟನ್ ದಾಸ್ (66) ರನ್ ಗಳಿಸಿ 93 ರನ್ ಗಳ ಭದ್ರ ಅಡಿಪಾಯ ಹಾಕಿದರು.

ಉತ್ತಮವಾಗಿ ಆಡುತ್ತಿದ್ದ ಬ್ಯಾಟಿಂಗ್ ಪಡೆಯನ್ನು ಬಲೆಗೆ ಬೀಳಿಸಿದ್ದು ಕುಲದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ಬಲೆಗೆ ಬೀಳಿಸಿದರು, ನಂತರ ಬಂದ ಯಾವುದೇ ಬ್ಯಾಟ್ಸಮನ್ ಗಳು ಹೆಚ್ಚು ಹೊತ್ತು ನಿಲ್ಲಲಿಲ್ಲ.

ಆದರೆ ಮಧ್ಯಮ ಕ್ರಮಾಂಕದ ಆಟಗಾರರಾದ ರಹೀಮ್ (38) ಹಾಗೂ ಮೊಹಮದ್ ಉಲ್ಲಾ (46) ರನ್ ಗಳಿಸುವ ಮೂಲಕ ತಂಡವನ್ನು 250 ರ ಗಡಿ ದಾಟಿಸಿದರು, ಭಾರತದ ಪರವಾಗಿ ಜಸ್ಪ್ರಿತ್ ಬುಮ್ರಾ, ಸಿರಾಜ್ ಹಾಗೂ ಅಲ್ ರೌಂಡರ್ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರೆ ಶಾರ್ದುಲ್ ಠಾಕೂರ್ ಹಾಗೂ ಕುಲದೀಪ್ ಯಾದವ್ ಒಂದು ವಿಕೆಟ್ ಪಡೆದರು ‌

ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಏಳು ಬೌಂಡರಿ ಹಾಗೂ ಎರಡು ಸಿಕ್ಸರ್ ಸಹಿತ (48) ಹಾಗೂ ಶುಭಮನ್ ಗಿಲ್ ಐದು ಬೌಂಡರಿ ಹಾಗೂ ಎರಡು ಸಿಕ್ಸರ್ ಸಿಡಿಸಿ (53) ರನ್ ಗಳಿಸುವ ಮೂಲಕ 88 ರನ್ ಜೊತೆಯಾಟ ನಡೆಸಿ ಹಸನ್ ಮೊಹಮದ್ ಹಾಗೂ ಹಸನ್ ಮಿರ್ಜಾಗೆ ವಿಕೆಟ್ ಒಪ್ಪಿಸಿದರು.

ನಂತರ ಒಂದಾದ ಅನುಭವಿ ಆಟಗಾರ ವಿರಾಟ್ ಕೋಹ್ಲಿ ಆರು ಬೌಂಡರಿ ಹಾಗೂ ನಾಲ್ಕು ಸಿಕ್ಸರ್ ನೆರವಿನಿಂದ (103)ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್(19) ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ (34) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ಅತ್ಯುತ್ತಮವಾಗಿ ಬ್ಯಾಟಿಂಗ್ ಮಾಡಿದ ವಿರಾಟ್ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

8 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

8 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

9 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

10 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

13 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

13 hours ago