ವಿಶ್ವಕಪ್ : ಬೆಂಗಳೂರಿಗೆ ಬಂದಿಳಿದ ಟೀಂ ಇಂಡಿಯಾ

ವಿಶ್ವಕಪ್ ಚರಣದ ತನ್ನ ಕೊನೆಯ ಪಂದ್ಯವಾಡಲು ಭಾರತ ತಂಡ ಉದ್ಯಾನ ನಗರಿ ಬೆಂಗಳೂರಿಗೆ ಸೋಮವಾರ ಸಂಜೆ ಬಂದಿಳಿದಿದ್ದು ಕ್ರಿಕೆಟ್ ಪ್ರೇಮಿಗಳಲ್ಲಿ ಸಂಭ್ರಮ ಮನೆ ಮಾಡಿದೆ.

ಕಳೆದ ಭಾನುವಾರ ಕೊಲ್ಕತ್ತಾದಲ್ಲಿ ಬಲಿಷ್ಠ ದಕ್ಷಿಣ ಆಫ್ರಿಕಾದ ವಿರುದ್ಧ 234 ರನ್ ಗಳ ಅಂತರದಲ್ಲಿ ಗೆದ್ದು ಅಜೇಯವಾಗಿ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ರೋಹಿತ್ ಶರ್ಮಾ ಪಡೆಗೆ ನವೆಂಬರ್ 12 ರಂದು ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನೆದರ್ಲೆಂಡ್ ವಿರುದ್ಧ ತನ್ನ ಕೊನೆಯ ಪಂದ್ಯವಾಡಲಿದೆ.

ತಾನಾಡಿದ 7 ಪಂದ್ಯಗಳಲ್ಲಿ 2 ರಲ್ಲಿ ಗೆಲುವು ಸಾಧಿಸಿ 8 ನೇ ಸ್ಥಾನದಲ್ಲಿರುವ ಡಚ್ ಪಡೆ ಬಲಿಷ್ಠ ಭಾರತ ವಿರುದ್ಧ ಯಾವ ರೀತಿ ಉತ್ತರ ನೀಡಲಿದೆ ಎಂಬುದು ಕಾದು ನೋಡಬೇಕಿದೆ, ಈಗಾಗಲೇ ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶದ ವಿರುದ್ಧ ಗೆಲುವು ಸಾಧಿಸಿದ್ದು ತಂಡವನ್ನು ಹಗುರವಾಗಿ ಪರಿಗಣಿಸುವಂತಿಲ್ಲ.

ಭಾರತ ತಂಡ ತಾನಾಡಿದ ಎಲ್ಲಾ ಪಂದ್ಯಗಳಲ್ಲೂ ಅಧ್ಬುತ ಬ್ಯಾಟಿಂಗ್ ಹಾಗೂ ಬೌಲಿಂಗ್ ಸಹಿತ ಆಲ್ ರೌಂಡರ್ ಆಟವಾಡಿರುವ ತಂಡ ಎಲ್ಲಾ ತಂಡಗಳ ಎದುರು ಅಧಿಕಾರಯುತ ಗೆಲುವು ಸಾಧಿಸಿದೆ.

ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಹಾಗೂ ಶುಭ್ಮನ್ ಗಿಲ್ ತಂಡಕ್ಕೆ ಉತ್ತಮ ಆರಂಭ ನೀಡುತ್ತಿದ್ದು ಮಧ್ಯಮ ಕ್ರಮಾಂಕದ ಆಟಗಾರರಾದ ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್ ಹಾಗೂ ಕನ್ನಡಿಗ ವಿಕೆಟ್ ಕೀಪರ್ ಕೆ.ಎಲ್ . ರಾಹುಲ್ ತಂಡದ ಶಕ್ತಿಯಾಗಿದ್ದಾರೆ.

ಬೌಲಿಂಗ್ ವಿಭಾಗ ಭರ್ಜರಿ ಪ್ರದರ್ಶನ ನೀಡುತ್ತಿದ್ದು ವೇಗಿಗಳಾದ ಜಸ್ಪ್ರಿತ್ ಬುಮ್ರಾ, ಮೊಹಮ್ಮದ್ ಶಮಿ ಹಾಗೂ ಸಿರಾಜ್ ಉತ್ತಮ ಲಯದಲ್ಲಿದ್ದಾರೆ ಹಾಗೆಯೇ ಸ್ಪಿನ್ನರ್ ಗಳಾದ ರವೀಂದ್ರ ಜಡೇಜಾ ಹಾಗೂ ಕುಲದೀಪ್ ಯಾದವ್ ತಮ್ಮ ಕೈ ಚಳಕದ ಮೂಲಕ ಎದುರಾಳಿ ತಂಡಗಳನ್ನು ಕಾಡುತ್ತಿರುವುದು ಸ್ಮರಿಸಬಹುದಾಗಿದೆ.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

3 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

9 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

10 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago