ವಿಶ್ವಕಪ್: ಭಾರತದ ಬೆಂಕಿ ಬೌಲಿಂಗ್ ದಾಳಿಗೆ ಲಂಕಾ ದಹನ: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಟೀಂ ಇಂಡಿಯಾ

ಭಾರತದ ಬಿಗಿ ಬೌಲಿಂಗ್ ಪ್ರದರ್ಶನದ ಮುಂದೆ ಮಂಡಿಯೂರಿದ ಲಂಕಾ ತಂಡ. ವೇಗಿಗಳಾದ ಬುಮ್ರಾ, ಸಿರಾಜ್ ಹಾಗೂ ಮೊಹಮ್ಮದ್ ಶಮಿ ಅವರ ಬೆಂಕಿ ಬೌಲಿಂಗ್ ದಾಳಿಗೆ ಶ್ರೀಲಂಕಾ ದಹನವಾಯಿತು.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಪಡೆ ಸತತ ಏಳನೇ ಗೆಲುವು ದಾಖಲಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಸೆಮಿಫೈನಲ್ ಪ್ರವೇಶ ಖಚಿತಪಡಿಸಿಕೊಂಡಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭಿಕ ಆಘಾತ ಅನುಭವಿಸಿತು, ನಾಯಕ ರೋಹಿತ್ ಶರ್ಮಾ (4) ರನ್ ಗಳಿಸಿ ಔಟಾದರು, ನಂತರ ಒಂದಾದ ಆರಂಭಿಕ ಆಟಗಾರ ಶುಭ್ಮನ್ ಗಿಲ್(92) ಹಾಗೂ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ (88) ರನ್ ಗಳಿಸುವ ಮೂಲಕ 190 ರನ್ ಜೊತೆಯಾಟಕ್ಕೆ ಲಂಕಾ ಬೌಲಿಂಗ್ ಪಡೆ ಮಂಕಾಗಿತ್ತು.

ನಂತರ ಬಂದ ಮದ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಅಯ್ಯರ್ (82) ಹಾಗೂ ಕನ್ನಡಿಗ ಕೆ.ಎಲ್ . ರಾಹುಲ್ (21) ರನ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (35) ರನ್ ಗಳಿಸಿ ತಂಡದ ಮೊತ್ತವನ್ನು 350 ರ ಗಡಿ ದಾಟಿಸಿದರು.

ಶ್ರೀಲಂಕಾದ ಪರವಾಗಿ ಮಧುಶಂಕ 5 ವಿಕೆಟ್ ಪಡೆದು ಮಿಂಚಿದರೆ , ಮತ್ತೊಬ್ಬ ವೇಗಿ ಚಮೀರಾ ಒಂದು ವಿಕೆಟ್ ಪಡೆದರು, ಬೃಹತ್ ಮೊತ್ತವನ್ನು ಬೆನ್ನಟ್ಟಿದ ಲಂಕಾ ತಂಡ ಆರಂಭಿಕ ಆಘಾತ ಎದುರಿಸಿತು.

ಆರಂಭಿಕ ಆಟಗಾರರಾದ ಪಥುಮ್ ನಿಶಾಂಕ (0) ಹಾಗೂ ಕರುಣರತ್ನೆ (0) ಕ್ರಮವಾಗಿ ಬುಮ್ರಾ ಹಾಗೂ ಸಿರಾಜ್ ಎಲ್ ಸಿಡಬ್ಲ್ಯೂ ಬಲೆಗೆ ಕೆಡವಿದರು, ನಾಯಕ ಕುಶಾಲ್ ಮೆಂಡಿಸ್ (1), ಮದ್ಯಮ ಕ್ರಮಾಂಕದ ಆಟಗಾರರಾದ ಸಮರವಿಕ್ರಮ (0) ಹಾಗೂ ಅಸಲಂಕ (1) ಮೊಹಮ್ಮದ್ ಶಮಿ ಹಾಗೂ ಸಿರಾಜ್ ಗೆ ವಿಕೆಟ್ ಒಪ್ಪಿಸಿದರು.

ಒಂದು ಹಂತದಲ್ಲಿ ಮೂರು ರನ್ ಗೆ ನಾಲ್ಕು ವಿಕೆಟ್ ಕಳೆದುಕೊಂಡಿದ್ದ ಲಂಕಾ 29 ರನ್ ಗಳಿಸಿ 8 ವಿಕೆಟ್ ಕಳೆದುಕೊಂಡಿತು.

ಭಾರತದ ಪರವಾಗಿ ವೇಗಿಗಳಾದ ಮೊಹಮ್ಮದ್ ಶಮಿ (5) ವಿಕೆಟ್, ಮೊಹಮ್ಮದ್ ಸಿರಾಜ್ (3) ಹಾಗೂ ಜಸ್ಪ್ರಿತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

18 ರನ್ ನೀಡಿ 5 ವಿಕೆಟ್ ಗೊಂಚಲು ಪಡೆದ ಮೊಹಮ್ಮದ್ ಶಮಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೌರವಕ್ಕೆ ಪಾತ್ರರಾದರು.

Ramesh Babu

Journalist

Recent Posts

ಭಕ್ತಿ ಭಾವ ಉತ್ಸವದಲ್ಲಿ ಅಸಭ್ಯ ನೃತ್ಯ: ಸಾರ್ವಜನಿಕರಿಂದ ತೀವ್ರ ಅಸಮಾಧಾನ

ದೇವಿಯ ಕರಗ ಉತ್ಸವದಲ್ಲಿ ಅಶ್ಲೀಲ ನರ್ತನ ಮಾಡಿದ್ದರಿಂದ ಸಾರ್ವಜನಿಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರದ…

35 minutes ago

ಏ.5ಕ್ಕೆ ತೂಬಗೆರೆಯಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ

ಬಾಬು ಜಗಜೀವನ್ ರಾಮ್ ಜಯಂತಿ ಪ್ರಯುಕ್ತ ಏ.5ರ ಭಾನುವಾರ ತೂಬಗೆರೆ ಸರ್ಕಾರಿ ಶಾಲೆಯಲ್ಲಿ ಬಾಬು ಜಗಜೀವನ ರಾಮ್ ರಾಷ್ಟ್ರೀಯ ಶಿಕ್ಷಣ…

3 hours ago

ಡ್ರಿಪ್ ಹಾಕಿಸಿಕೊಂಡೇ SSLC ಪರೀಕ್ಷೆ ಬರೆದ ವಿದ್ಯಾರ್ಥಿ….

ಎಸ್ ಎಸ್ ಎಲ್ ಸಿ ವಿದ್ಯಾರ್ಥಿ ಹೊಟ್ಟೆ ನೋವಿನಿಂದ ಬಳಲುತ್ತಿದ್ದ. ಹೊಟ್ಟೆನೋವಿಗೆ ಚಿಕಿತ್ಸೆ ಪಡೆದು ಆಸ್ಪತ್ರೆಯಿಂದ ನೇರವಾಗಿ ಪರೀಕ್ಷಾ ಕೊಠಡಿಗೆ…

8 hours ago

ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ

ಉತ್ತರಕನ್ನಡ ಜಿಲ್ಲೆಯ ಹಳಿಯಾಳ ಜೈಲಿನ ಜೈಲರ್ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.. ಕೈದಿಗೆ ಸರ್ಕಾರದಿಂದ ಬಂದ ಹಣ ನೀಡಲು 60 ಸಾವಿರ…

11 hours ago

ದ್ವಿಚಕ್ರ ವಾಹನ ಹಾಗೂ ಪಂಪ್ ಸೆಟ್ ಗೆ ಅಳವಡಿಸಿದ್ದ ಮೋಟಾರ್ ಗಳ ಕಳ್ಳತನ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ರಾಮನಗರ ಗ್ರಾಮಾಂತರ ಹಾಗೂ ಅಕ್ಕೂರು ಪೊಲೀಸ್ ಠಾಣಾ ವ್ಯಾಪ್ತಿಯ ವಿವಿಧ ಗ್ರಾಮಗಳ ರೈತರ ಜಮೀನಿನಲ್ಲಿ ಪಂಪ್ ಸೆಟ್ ಗಳಿಗೆ ಅಳವಡಿಸಿದ್ದ…

1 day ago

ಬಿಸಿಲಿನ ಬೇಗೆ: ಬಾಯಾರಿದ ಕೋತಿ ನೀರಿಗಾಗಿ ಪರದಾಟ: ವಾಟರ್ ಬಾಟಲ್ ನೀರು ಕುಡಿಯಲು ಹರಸಾಹಸ

ಬಿರುಬಿಸಿಲಿಗೆ ಬಾಯಾರಿಕೆಯಿಂದ ಕೋತಿಯೊಂದು ನೀರಿಗಾಗಿ ವಾಟರ್ ಬಾಟಲ್ ಹಿಡಿದು ಒಂದೊಂದು ಹನಿಗೂ ಪರದಾಡಿದ ದೃಶ್ಯ ದೊಡ್ಡಬಳ್ಳಾಪುರ ನಗರದ ಪ್ರವಾಸಿ ಮಂದಿರದಲ್ಲಿ…

1 day ago