ಭಾರತದ ಬಿಗಿ ಬೌಲಿಂಗ್ ಪ್ರದರ್ಶನದ ಮುಂದೆ ಮಂಡಿಯೂರಿದ ಲಂಕಾ ತಂಡ. ವೇಗಿಗಳಾದ ಬುಮ್ರಾ, ಸಿರಾಜ್ ಹಾಗೂ ಮೊಹಮ್ಮದ್ ಶಮಿ ಅವರ ಬೆಂಕಿ ಬೌಲಿಂಗ್ ದಾಳಿಗೆ ಶ್ರೀಲಂಕಾ ದಹನವಾಯಿತು.
ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಪಡೆ ಸತತ ಏಳನೇ ಗೆಲುವು ದಾಖಲಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಸೆಮಿಫೈನಲ್ ಪ್ರವೇಶ ಖಚಿತಪಡಿಸಿಕೊಂಡಿತು.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭಿಕ ಆಘಾತ ಅನುಭವಿಸಿತು, ನಾಯಕ ರೋಹಿತ್ ಶರ್ಮಾ (4) ರನ್ ಗಳಿಸಿ ಔಟಾದರು, ನಂತರ ಒಂದಾದ ಆರಂಭಿಕ ಆಟಗಾರ ಶುಭ್ಮನ್ ಗಿಲ್(92) ಹಾಗೂ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ (88) ರನ್ ಗಳಿಸುವ ಮೂಲಕ 190 ರನ್ ಜೊತೆಯಾಟಕ್ಕೆ ಲಂಕಾ ಬೌಲಿಂಗ್ ಪಡೆ ಮಂಕಾಗಿತ್ತು.
ಶ್ರೀಲಂಕಾದ ಪರವಾಗಿ ಮಧುಶಂಕ 5 ವಿಕೆಟ್ ಪಡೆದು ಮಿಂಚಿದರೆ , ಮತ್ತೊಬ್ಬ ವೇಗಿ ಚಮೀರಾ ಒಂದು ವಿಕೆಟ್ ಪಡೆದರು, ಬೃಹತ್ ಮೊತ್ತವನ್ನು ಬೆನ್ನಟ್ಟಿದ ಲಂಕಾ ತಂಡ ಆರಂಭಿಕ ಆಘಾತ ಎದುರಿಸಿತು.
ಒಂದು ಹಂತದಲ್ಲಿ ಮೂರು ರನ್ ಗೆ ನಾಲ್ಕು ವಿಕೆಟ್ ಕಳೆದುಕೊಂಡಿದ್ದ ಲಂಕಾ 29 ರನ್ ಗಳಿಸಿ 8 ವಿಕೆಟ್ ಕಳೆದುಕೊಂಡಿತು.
ಚಿಕ್ಕಬಳ್ಳಾಪುರ- ಬೈಕ್ ನಲ್ಲಿ ಬಂದ ಇಬ್ಬರು ಯುವಕರು ಕ್ಷಣ ಮಾತ್ರದಲ್ಲಿ ಕಣ್ಣಿಗೆ ಕಾರದಪುಡಿ ಹಾಕಿ ಒಂದಲ್ಲ ಎರಡಲ್ಲ ಬರೋಬ್ಬರಿ ಏಳೂವರೆ…
ಸುಶಿಕ್ಷಿತ, ಪ್ರಜ್ಞಾವಂತ ಯುವಶಕ್ತಿಯಿಂದ ನಮ್ಮ ದೇಶದ ಪ್ರಗತಿ ಸಾಧ್ಯವಾಗಲಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅಭಿಪ್ರಾಯಪಟ್ಟಿದ್ದಾರೆ. ಇಂಡಿಯನ್ ಅಕಾಡೆಮಿ ಆಫ್…
ದೇವನಹಳ್ಳಿ: ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮೇ.12ರ ರಾತ್ರಿ…
ದೊಡ್ಡಬಳ್ಳಾಪುರ: ತಾಲ್ಲೂಕಿನ ಸಾಸಲು–ಆರೂಢಿ ಭಾಗದ ಜನರ ಪ್ರಮುಖ ಸಂಪರ್ಕ ರಸ್ತೆಯಾಗಿರುವ ಗುಂಡಮಗೆರೆ–ಹೊಸಹಳ್ಳಿ ರಸ್ತೆಗೆ ಕೊನೆಗೂ ಡಾಂಬರೀಕರಣ ಕಾಮಗಾರಿ ಆರಂಭವಾಗಿದ್ದು, ಗ್ರಾಮಸ್ಥರಲ್ಲಿ…
ದೊಡ್ಡಬಳ್ಳಾಪುರ: ಸರ್ಕಾರ ಆಶ್ರಯ ಯೋಜನೆ ಮೂಲಕ ಗುಡಿಸಲು ಮುಕ್ತ ರಾಜ್ಯ ನಿರ್ಮಾಣದ ಘೋಷಣೆ ಮಾಡುತ್ತಿದ್ದರೂ, ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ…
ಅನಕ್ಷರಸ್ಥರ ಬುದ್ದಿವಂತಿಕೆ ಪ್ರಶ್ನಿಸುವವರು ಅಕ್ಷರಸ್ಥರ ಮಾನವೀಯತೆಯನ್ನು ಪ್ರಶ್ನಿಸಬೇಕಲ್ಲವೇ........ ......ಒಂದು ಟ್ವೀಟ್... ಅಕ್ಷರ ಕಲಿಕೆ ಒಂದು ನೈಪುಣ್ಯ ಅಥವಾ ಸುಲಭವಾಗಿ ಮಾಹಿತಿ…