ವಿಶ್ವಕಪ್: ಭಾರತದ ಬೆಂಕಿ ಬೌಲಿಂಗ್ ದಾಳಿಗೆ ಲಂಕಾ ದಹನ: ಸೆಮಿಫೈನಲ್‌ಗೆ ಲಗ್ಗೆ ಇಟ್ಟ ಟೀಂ ಇಂಡಿಯಾ

ಭಾರತದ ಬಿಗಿ ಬೌಲಿಂಗ್ ಪ್ರದರ್ಶನದ ಮುಂದೆ ಮಂಡಿಯೂರಿದ ಲಂಕಾ ತಂಡ. ವೇಗಿಗಳಾದ ಬುಮ್ರಾ, ಸಿರಾಜ್ ಹಾಗೂ ಮೊಹಮ್ಮದ್ ಶಮಿ ಅವರ ಬೆಂಕಿ ಬೌಲಿಂಗ್ ದಾಳಿಗೆ ಶ್ರೀಲಂಕಾ ದಹನವಾಯಿತು.

ಮುಂಬೈನ ವಾಂಖೆಡೆ ಮೈದಾನದಲ್ಲಿ ನಡೆದ ಪಂದ್ಯದಲ್ಲಿ ರೋಹಿತ್ ಪಡೆ ಸತತ ಏಳನೇ ಗೆಲುವು ದಾಖಲಿಸುವ ಮೂಲಕ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನ ಹಾಗೂ ಸೆಮಿಫೈನಲ್ ಪ್ರವೇಶ ಖಚಿತಪಡಿಸಿಕೊಂಡಿತು.

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭಿಕ ಆಘಾತ ಅನುಭವಿಸಿತು, ನಾಯಕ ರೋಹಿತ್ ಶರ್ಮಾ (4) ರನ್ ಗಳಿಸಿ ಔಟಾದರು, ನಂತರ ಒಂದಾದ ಆರಂಭಿಕ ಆಟಗಾರ ಶುಭ್ಮನ್ ಗಿಲ್(92) ಹಾಗೂ ಅನುಭವಿ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ (88) ರನ್ ಗಳಿಸುವ ಮೂಲಕ 190 ರನ್ ಜೊತೆಯಾಟಕ್ಕೆ ಲಂಕಾ ಬೌಲಿಂಗ್ ಪಡೆ ಮಂಕಾಗಿತ್ತು.

ನಂತರ ಬಂದ ಮದ್ಯಮ ಕ್ರಮಾಂಕದ ಆಟಗಾರರಾದ ಶ್ರೇಯಸ್ ಅಯ್ಯರ್ (82) ಹಾಗೂ ಕನ್ನಡಿಗ ಕೆ.ಎಲ್ . ರಾಹುಲ್ (21) ರನ್ ಹಾಗೂ ಆಲ್ ರೌಂಡರ್ ರವೀಂದ್ರ ಜಡೇಜಾ (35) ರನ್ ಗಳಿಸಿ ತಂಡದ ಮೊತ್ತವನ್ನು 350 ರ ಗಡಿ ದಾಟಿಸಿದರು.

ಶ್ರೀಲಂಕಾದ ಪರವಾಗಿ ಮಧುಶಂಕ 5 ವಿಕೆಟ್ ಪಡೆದು ಮಿಂಚಿದರೆ , ಮತ್ತೊಬ್ಬ ವೇಗಿ ಚಮೀರಾ ಒಂದು ವಿಕೆಟ್ ಪಡೆದರು, ಬೃಹತ್ ಮೊತ್ತವನ್ನು ಬೆನ್ನಟ್ಟಿದ ಲಂಕಾ ತಂಡ ಆರಂಭಿಕ ಆಘಾತ ಎದುರಿಸಿತು.

ಆರಂಭಿಕ ಆಟಗಾರರಾದ ಪಥುಮ್ ನಿಶಾಂಕ (0) ಹಾಗೂ ಕರುಣರತ್ನೆ (0) ಕ್ರಮವಾಗಿ ಬುಮ್ರಾ ಹಾಗೂ ಸಿರಾಜ್ ಎಲ್ ಸಿಡಬ್ಲ್ಯೂ ಬಲೆಗೆ ಕೆಡವಿದರು, ನಾಯಕ ಕುಶಾಲ್ ಮೆಂಡಿಸ್ (1), ಮದ್ಯಮ ಕ್ರಮಾಂಕದ ಆಟಗಾರರಾದ ಸಮರವಿಕ್ರಮ (0) ಹಾಗೂ ಅಸಲಂಕ (1) ಮೊಹಮ್ಮದ್ ಶಮಿ ಹಾಗೂ ಸಿರಾಜ್ ಗೆ ವಿಕೆಟ್ ಒಪ್ಪಿಸಿದರು.

ಒಂದು ಹಂತದಲ್ಲಿ ಮೂರು ರನ್ ಗೆ ನಾಲ್ಕು ವಿಕೆಟ್ ಕಳೆದುಕೊಂಡಿದ್ದ ಲಂಕಾ 29 ರನ್ ಗಳಿಸಿ 8 ವಿಕೆಟ್ ಕಳೆದುಕೊಂಡಿತು.

ಭಾರತದ ಪರವಾಗಿ ವೇಗಿಗಳಾದ ಮೊಹಮ್ಮದ್ ಶಮಿ (5) ವಿಕೆಟ್, ಮೊಹಮ್ಮದ್ ಸಿರಾಜ್ (3) ಹಾಗೂ ಜಸ್ಪ್ರಿತ್ ಬುಮ್ರಾ ಹಾಗೂ ರವೀಂದ್ರ ಜಡೇಜಾ ತಲಾ ಒಂದು ವಿಕೆಟ್ ಪಡೆದು ಮಿಂಚಿದರು.

18 ರನ್ ನೀಡಿ 5 ವಿಕೆಟ್ ಗೊಂಚಲು ಪಡೆದ ಮೊಹಮ್ಮದ್ ಶಮಿ ಪಂದ್ಯಶ್ರೇಷ್ಠ ಪ್ರಶಸ್ತಿ ಗೌರವಕ್ಕೆ ಪಾತ್ರರಾದರು.

Ramesh Babu

Journalist

Recent Posts

ತೂಬಗೆರೆ ಎಂ.ಪಿ.ಆರ್.ಎ.ಸಿ.ಎಸ್. ಚುನಾವಣೆ: ಬಿಜೆಪಿ–ಜೆಡಿಎಸ್ ಮೈತ್ರಿಗೆ ಸ್ಪಷ್ಟ ಬಹುಮತ

ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…

3 hours ago

ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ ಆಗಿದೆ- ಪ್ರೊ. ಹಿ.ಚಿ. ಬೋರಲಿಂಗಯ್ಯ

ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…

9 hours ago

ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಪರೀಕ್ಷೆ ಸುಸೂತ್ರ; ದೊಡ್ಡಬಳ್ಳಾಪುರದ 7 ಕೇಂದ್ರಗಳಲ್ಲಿ ಯಶಸ್ವಿ ಆಯೋಜನೆ

ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…

10 hours ago

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

2 days ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

2 days ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

2 days ago