ವಿಶ್ವಕಪ್: ಭಾರತದ ಬೌಲಿಂಗ್ ದಾಳಿಗೆ ಬೆದರಿದ ಪಾಕ್, ಭಾರತಕ್ಕೆ ಏಳು ವಿಕೆಟ್ ಜಯ

ವಿಶ್ವಕಪ್ ನ ಹೈಹೊಲ್ಟೇಜ್ ಪಂದ್ಯವಾದ ಭಾರತ ಹಾಗೂ ಪಾಕಿಸ್ತಾನ ನಡುವಿನ ಏಕದಿನ ಪಂದ್ಯದಲ್ಲಿ ಭಾರತ ತಂಡದ ಬಿಗಿ ಬೌಲಿಂಗ್ ದಾಳಿ ಹಾಗೂ ಬ್ಯಾಟಿಂಗ್ ಬಲದಿಂದ ಏಳು ವಿಕೆಟ್ ಗಳ ರೋಚಕ ಗೆಲುವು ಸಾಧಿಸಿತು.

ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಕ್ರೀಡಾಂಗಣವಾದ ಅಹಮದಾಬಾದ್ ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ತಂಡದ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು.

ನಾಯಕನ ನಿರ್ಧಾರವನ್ನು ಸಮರ್ಥಿಸಿಕೊಂಡ ವೇಗಿಗಳಾದ ಜಸ್ಪ್ರಿತ್ ಬುಮ್ರಾ ಹಾಗೂ ಮೊಹಮ್ಮದ್ ಸಿರಾಜ್ ಪಾಕಿಸ್ತಾನದ ಬ್ಯಾಟಿಂಗ್ ಪಡೆಯನ್ನು ಇನ್ನಿಲ್ಲದಂತೆ ಕಾಡಿದರು.

ಪಾಕಿಸ್ತಾನದ ಆರಂಭಿಕ ಆಟಗಾರರಾದ ಶಾಫಿ(20) ಹಾಗೂ ಇಮಾಮ್ ಉಲ್ ಹಕ್ (36) ರನ್ ಗಳಿಸುವ ಮೂಲಕ ಭದ್ರ ಬುನಾದಿ ಹಾಕಿಕೊಟ್ಟರು ಆದರೆ ಅವರಿಬ್ಬರನ್ನು ಬುಮ್ರಾ ಹಾಗೂ ಸಿರಾಜ್ ಪೆವಿಲಿಯನ್ ಗೆ ಕಳುಹಿಸಲು ಯಶಸ್ವಿಯಾದರು.

ನಂತರ ಒಂದಾದ ನಾಯಕ ಬಾಬರ್ ಅಜಾಮ್ (50) ರನ್ ಹಾಗೂ ವಿಕೆಟ್ ಕೀಪರ್ ಬ್ಯಾಟ್ಸ್ಮನ್ ರಿಜ್ವಾನ್ (49) ಭಾರತೀಯ ಬೌಲಿಂಗ್ ಪಡೆಯನ್ನು ಕಾಡತೊಡಗಿದರು, ಆದರೆ ಸಿರಾಜ್ ಬೌಲಿಂಗ್ ಅರಿಯಲು ವಿಫಲವಾದ ಬಾಬರ್ ಅರ್ಧಶತಕ ಗಳಿಸಿ ಕ್ಲೀನ್ ಬೌಲ್ಡ್ ಆದರು.

ಪಾಕಿಸ್ತಾನದ ಮಧ್ಯಮ ಕ್ರಮಾಂಕದ ಆಟಗಾರರಾದ ಶಕೀಲ್ (6), ಅಹಮದ್ (4), ಶಾಬದ್ ಖಾನ್ (2), ಮಹಮದ್ ನವಾಜ್ (4) ವಿಫಲರಾದರು, ಭಾರತದ ಪರವಾಗಿ ಜಸ್ಪ್ರಿತ್ ಬುಮ್ರಾ, ಹಾರ್ದಿಕ್ ಪಾಂಡ್ಯ, ಸಿರಾಜ್, ಕುಲದೀಪ್ ಯಾದವ್ ಹಾಗೂ ರವೀಂದ್ರ ಜಡೇಜಾ ತಲಾ ಎರಡು ವಿಕೆಟ್ ಪಡೆದರು.

191 ರನ್ ಗುರಿ ಬೆನ್ನತ್ತಿದ್ದ ಭಾರತ ತಂಡದ ಆರಂಭಿಕ ಆಟಗಾರರಾದ ನಾಯಕ ರೋಹಿತ್ ಶರ್ಮಾ ಆರು ಬೌಂಡರಿ ಹಾಗೂ ಆರು ಸಿಕ್ಸರ್ ನೆರವಿನಿಂದ (86) ಹಾಗೂ ಮಧ್ಯಮ ಕ್ರಮಾಂಕದ ಆಟಗಾರ ಶ್ರೇಯಸ್ ಅಯ್ಯರ್ (53) ರನ್ ಗಳಿಸುವ ಮೂಲಕ ತಂಡವನ್ನು ಗೆಲುವಿನತ್ತ ಕೊಂಡೊಯ್ದರು.

ವಿರಾಟ್ ಕೊಹ್ಲಿ (16), ಶುಭ್ಮನ್ ಗಿಲ್ (16) ಹಾಗೂ ಕನ್ನಡಿಗ ಕೆ.ಎಲ್. ರಾಹುಲ್ (19) ರನ್ ಗಳಿಸುವ ಮೂಲಕ ತಂಡಕ್ಕೆ ನೆರವಾದರು, ಪಾಕಿಸ್ತಾನದ ಪರವಾಗಿ ಶಾಹೀನ್ ಅಫ್ರಿದಿ ಎರಡು ವಿಕೆಟ್ ಹಾಗೂ ಹಸನ್ ಅಲಿ ಒಂದು ವಿಕೆಟ್ ಪಡೆದರು, ಉತ್ತಮವಾಗಿ ಬೌಲಿಂಗ್ ಪ್ರದರ್ಶನ ನೀಡಿದ ವೇಗಿ ಜಸ್ಪ್ರಿತ್ ಬುಮ್ರಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರು.

Ramesh Babu

Journalist

Recent Posts

ಮಕ್ಕಳೇ ದೇಶದ ಆಸ್ತಿ, ಉತ್ತಮ ಶಿಕ್ಷಣದಿಂದ ಭವಿಷ್ಯ ನಿರ್ಮಾಣ- ಶಿವಕುಮಾರ್

ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…

9 hours ago

ಬೆಂಗಳೂರು ಗ್ರಾಮಾಂತರದಲ್ಲಿ ಎರಡು ಪ್ರತ್ಯೇಕ ಅಪಘಾತ: ಇಬ್ಬರು ಸಾವು, ಹಲವರಿಗೆ ಗಾಯ

ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…

13 hours ago

ಸ್ವಾತಂತ್ರ್ಯ ದಿನದಂದೇ ಹೆದ್ದಾರಿಯಲ್ಲಿ ಪುಂಡರ ಡೆಡ್ಲಿ ವ್ಹೀಲಿಂಗ್

ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…

13 hours ago

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಆರೋಗ್ಯ ಕಾಳಜಿ; ಹೀಲಿನ್ ಆಸ್ಪತ್ರೆಯಿಂದ ಉಚಿತ ತಪಾಸಣಾ ಶಿಬಿರ

80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…

16 hours ago

ವಿಬಿ ಜಿ ರಾಮ್ ಜಿ: ಆ.15 ರಿಂದ ಜಾಬ್ ಕಾರ್ಡ್ ಮೇಳ

ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…

1 day ago

ತೂಬಗೆರೆ ಸೊಸೈಟಿ ಅಧ್ಯಕ್ಷರಾಗಿ ವಾಸುದೇವ್, ಉಪಾಧ್ಯಕ್ಷರಾಗಿ ಸತ್ಯನಾರಾಯಣಸ್ವಾಮಿ ಅವಿರೋಧ ಆಯ್ಕೆ

ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್‌ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…

2 days ago